ನಿಮ್ಮದಲ್ಲದ ನಿವೇಶನಗಳಿಗೆ ನೀವು ಮುಡಾದಿಂದ (MUDA) ಪರಿಹಾರ ಕೇಳೋದು ಎಷ್ಟು ಸರಿ, ಇದನ್ನು ಆತ್ಮಸಾಕ್ಷಿ ಒಪ್ಪುತ್ತದೆಯೇ ಎಂದು ಮಾಜಿ ಡಿಸಿಎಂ, ಬಿಜೆಪಿ ಸಂಸದ ಗೋವಿಂದ ಕಾರಜೋಳ (Govinda karajola) ಸಿಎಂ ಸಿದ್ದರಾಮಯ್ಯಗೆ (Cm siddaramaiah) ಕೌಂಟರ್ ಕೊಟ್ಟಿದ್ದಾರೆ.
ಈ ಬಗ್ಗೆ ಚಿತ್ರದುರ್ಗದಲ್ಲಿ (Chitradurga) ಮಾತನಾಡಿರುವ ಗೋವಿಂದ ಕಾರಜೋಳ, ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಆತ್ಮಸಾಕ್ಷಿ ನ್ಯಾಯಾಲಯ ಎಂದೆಲ್ಲಾ ಮಾತನಾಡಿದ್ದಾರೆ. ಅಕ್ರಮವಾಗಿ ಈ ರೀತಿ ಸರ್ಕಾರದ ಆಸ್ತಿ ಲಪಟಾಯಿಸೋದು ಆತ್ಮಸಾಕ್ಷಿಯಾ ಎಂದು ಪ್ರಶ್ನೆ ಮಾಡಿದ್ದಾರೆ.
ಈ ಮೂಡ ಅಕ್ರಮ ಕೇಸ್ ನಲ್ಲಿ ನ್ಯಾಯಾಲಯ ತನಿಖೆಗೆ ಆದೇಶ ನೀಡಿದ ಕ್ಷಣವೇ ತಮ್ಮ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು, ಅದನ್ನು ಮಾಡದೇ ಸುಮ್ಮನೆ ಆತ್ಮಸಾಕ್ಷಿಯ ಭಾಷಣ ಮಾಡುತ್ತಾರೆ ಎಂದು ಕಿಡಿ ಕಾರಿದ್ದಾರೆ.