• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ;ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
October 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ (Renukaswamy Murder case) ಪ್ರಕರಣಕ್ಕೆ ಸಂಬಂಧ ಜೈಲು ಪಾಲಾಗಿರುವ ನಟ ದರ್ಶನ್ (Actor Darshan), ಪವಿತ್ರಗೌಡ, ರವಿಶಂಕರ್, ಲಕ್ಷ್ಮಣ್‌ರ ಜಾಮೀನು ಅರ್ಜಿ‌ ವಿಚಾರಣೆಯು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಶುಕ್ರವಾರ (ಅ.4) ನಡೆಯಿತು.

ADVERTISEMENT

ನಟ ದರ್ಶನ್ ಪರ ಸಿ.ವಿ ನಾಗೇಶ್, ಪವಿತ್ರಗೌಡ ಗೌಡ ಪರ ಟಾಮಿ ಸೆಬಾಸ್ಟಿಯನ್, ರವಿಶಂಕರ್ ಪರ ರಂಗನಾಥ್ ರೆಡ್ಡಿ, ಲಕ್ಷ್ಮಣ್ ಪರ ಸೂರ್ಯ ಮುಕುಂದ್ ವಾದ ಮಂಡಿಸಿದ್ದರು.ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ ನಾಗೇಶ್‌, ದೋಷಾರೋಪ ಪಟ್ಟಿಯಲ್ಲಿ ತನಿಖಾಧಿಕಾರಿಗಳ ಲೋಪವನ್ನು ಉಲ್ಲೇಖಿಸಿದರು. ವಾದ ಆಲಿಸಿದ ಕೋರ್ಟ್‌ ಅರ್ಜಿ ವಿಚಾರಣೆಯನ್ನು ಶನಿವಾರ ಮಧ್ಯಾಹ್ನಕ್ಕೆ ಮುಂದೂಡಿದೆ.

ಮೊದಲಿಗೆ ದರ್ಶನ್‌ ಪರ ವಕೀಲ ಸಿ.ವಿ ನಾಗೇಶ್‌ ವಾದ ಶುರು ಮಾಡಿದರು. ದರ್ಶನ್ ವಿರುದ್ಧದ ಆರೋಪದ ಚಾರ್ಜ್ ಶೀಟ್ ಕ್ರೋಢೀಕೃತ ವರದಿ ಸಲ್ಲಿಕೆ ಮಾಡಲಾಗಿದೆ. ಚಾರ್ಜ್ ಶೀಟ್‌ನ ಎಲ್ಲಾ ಹೇಳಿಕೆಗಳು, ಸಾಕ್ಷಿಗಳು ಹಾಗೂ ಎಫ್‌ಎಸ್‌ಎಲ್ ರಿಪೋರ್ಟ್ ವರದಿಯಾಗಿದೆ. ಪ್ರಕರಣದ ಮೊದಲ ವಿಚಾರಣೆ ( ಟ್ರಯಲ್) ಪತ್ರಿಕೆ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ ಆಗಿದೆ. ಈ ವರದಿಯಿಂದ ನನ್ನ ಕಕ್ಷಿದಾರನಿಗೆ ದೊಡ್ಡ ನಷ್ಟವಾಗಿದೆ. ಸುಪ್ರೀಂ ಕೋರ್ಟ್ 2016ರ ಆದೇಶ ಉಲ್ಲೇಖಿಸಿದ ನಾಗೇಶ್‌, ಪ್ರಕರಣದ ಎವಿಡೆನ್ಸ್ ಮತ್ತು ಮೆರಿಟ್ಸ್ ತುಂಬಾ ದೊಡ್ಡ ಪಬ್ಲಿಸಿಟಿ ಆಗಬಾರದು.ಇಲ್ಲಿ ದರ್ಶನ್ ವಿರುದ್ಧ ದೊಡ್ಡ ಮಟ್ಟದ ಪ್ರಚಾರವಾಗಿದೆ.ಇದು ನ್ಯಾಯದಾನದ ಮೇಲೆ ಪರಿಣಾಮ ಬೀರಲಿದೆ ಎಂದು ಆದೇಶದ ಬಗ್ಗೆ ಸಿ.ವಿ. ನಾಗೇಶ್ ಉಲ್ಲೇಖಿಸಿದರು. ಈ ವೇಳೆ ನನಗೆ ಪ್ರತಿ ನೀಡಿಲ್ಲ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ಹೇಳಿದರು.

ಈ ಪ್ರಕರಣದಲ್ಲಿ ಎಲೆಕ್ಟ್ರಾನಿಕ್ ಮೀಡಿಯಾ ಪಬ್ಲಿಸಿಟಿಯೂ ಪರಿಣಾಮ ಬೀರಿದೆ. ಎಫ್‌ಐಆರ್‌ನಿಂದ ಸಾಕ್ಷಿಗಳ ತನಕ ಎಲ್ಲಾ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಸಂಪೂರ್ಣ ಚಾರ್ಜ್ ಶೀಟ್ ಪ್ರತಿ ಸಿಕ್ಕಿದೆ.ಅವರು ನೇರವಾಗಿ ನ್ಯಾಯಾವ್ಯವಸ್ಥೆಯಲ್ಲಿ ಮಧ್ಯಪ್ರವೇಶಿಸಿದ್ದಾರೆ. ಪ್ರಕರಣದ ಟ್ರಾಯಲ್ ನ್ಯಾಯಾಲಯದಲ್ಲಿ ಆಗಬೇಕು ಹೊರತು ಯಾವುದೇ ಪ್ಯಾನಲ್ ಡಿಸ್ಕ್‌ಷನ್‌ನಲ್ಲಿ ಅಲ್ಲ. ಈ ಅಂಶಗಳ ಪರಿಗಣಿಸಿ ತನಿಖಾಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದರ್ಶನ್ ಪರ ಸಿ ವಿ ನಾಗೇಶ್ ವಾದಿಸಿದರು.

ಮೊದಲು ಪ್ರಕರಣದ ಸೀಜಿಂಗ್ ವೇಳೆ ಸಿಕ್ಕಿರುವುದು ಏನು? ಮರದ ಕೊಂಬೆಗಳು, ನೈಲಾನ್ ಹಗ್ಗ, ವಾಟರ್ ಬಾಟೆಲ್ ಮತ್ತು ಬಟ್ಟೆ ಮಾತ್ರ. ಆದರೆ ಪೊಲೀಸರು ಅದನ್ನೇ ಇಲ್ಲಿ ಸಾಕ್ಷಿಯನ್ನಾಗಿ ಮಾಡಿದ್ದಾರೆ. ಸುಮಾರು ಅರ್ಧ ಅಡಿ ಉದ್ದದ ಕೋಲು, ವಾಟರ್ ಬಾಟೆಲ್ ಒಂದು ಪತ್ತೆಯಾಗಿದ್ದು, ಅದರಲ್ಲಿ ಸ್ಟೋನಿ ಬ್ರೂಕ್ ಚಿನ್ಹೆ ಇದೆ. ಕೋಲಿನ ಮೇಲೆ ಪಿಂಕ್ ಮತ್ತು ಕೆಂಪು ಬಣ್ಣದ ನೈಲಾನ್ ಹಗ್ಗ ಸಿಕ್ಕಿರುತ್ತದೆ. ಅದರಲ್ಲಿ ರಕ್ತದ ಕಲೆ ಪತ್ತೆಯಾಗಿದೆ.ಪ್ರಕರಣದ ಪಂಚನಾಮೆ ಓದಿ ವಾದ ಮುಂದುವರಿಸಿದ ಸಿ.ವಿ ನಾಗೇಶ್ ಇತರ ಆರೋಪಿಗಳ ಸ್ವ ಇಚ್ಛೆ ಹೇಳಿಕೆಯ ಬಗ್ಗೆ ಉಲ್ಲೇಖಿಸಿದರು. ಆರೋಪಿಗಳ ಬಂಧನ ಮೇ 11ರಂದು ಆಗಿದೆ, 12ರಂದು ಸ್ವ ಇಚ್ಚಾ ಹೇಳಿಕೆ ಪಡೆಯಲಾಗಿದೆ. ಹಾಗಾದರೆ ಅವರಿಗೆ ಮೊದಲೆ ಕೇಸ್ ಅಪರಾಧದ ಅರಿವು ಇರುತ್ತಾ ಎಂದು ಸಿ.ವಿ ನಾಗೇಶ್ ಪ್ರಶ್ನಿಸಿದರು.

ಓರ್ವ ವ್ಯಕ್ತಿ ಗುಪ್ತಾಂಗಕ್ಕೆ ಗುದ್ದಿ ಸಾಯಿಸಿದ್ದಾಗಿ ವಿನಯ್ ಹೇಳಿದ್ದ, ಆದಾದ ಬಳಿಕ ಗಿರೀಶ್ ನಾಯ್ಕ್ ಇನ್ಸ್‌ಪೆಕ್ಟರ್‌ಗೆ ಹೇಳಿದೆ. ಆಗ ಇನ್ಸ್‌ಪೆಕ್ಟರ್‌ ಹೇಳಿದ್ದು, ಅವರ ಕಾನ್ಫಿಡೆನ್ಸ್ ತೆಗೆದುಕೊಂಡು ಕೊಲೆ ಮಾಡಿದವರು ಯಾರು ಅಂತಾ ತಿಳಿದುಕೋ ಅಂದಿದ್ದರಂತೆ. ಕೊಲೆ ಮಾಡಿದ್ದು ದರ್ಶನ್ ಅಭಿಮಾನಿಗಳು ಅಂದಾಗ, ಮೀಡಿಯಾದವರು ಅವರೇ ಕೊಲೆ ಮಾಡಿದ್ದಾರೆ ಅಂತ ಹಾಕುತ್ತಾರೆ ಅಂತಾ ಹೇಳಿದ್ದರಂತೆ. ಇದು ಸಂಪೂರ್ಣವಾಗಿ ತಿರುಚಿದ ಹೇಳಿಕೆಯಾಗಿದೆ. ‌ಪ್ಲ್ಯಾನ್‌ ಮಾಡಿ ಈ ರೀತಿ ಹೇಳಿಕೆ ದಾಖಲಿಸಲಾಗಿದೆ ಎಂದು ದರ್ಶನ್ ಪರ ಸಿ ವಿ ನಾಗೇಶ್ ವಾದಿಸಿದರು.

ಸ್ಥಳ ಮಹಜರ್ ಮಾಡಿದ ಪಿಡಬ್ಲ್ಯೂಡಿ ಎಂಜಿನಿಯರ್ ಹೇಳಿಕೆಯನ್ನು ಓದಿದ ನಾಗೇಶ್‌, ಪ್ರಕರಣದಲ್ಲಿ ಐ ವಿಟ್ನೇಸ್ ಸೆಕ್ಯೂರಿಟಿ ಗಾರ್ಡ್, ಆತನ 164 ಹೇಳಿಕೆ ದಾಖಲಾಗಿದೆ. ಆತನಿಗೆ ಕನ್ನಡವೇ ಬರಲ್ಲ ಆದರೆ ಕನ್ನಡದಲ್ಲಿ ಹೇಳಿಕೆ ದಾಖಲಾಗಿದೆ. ಇದೊಂದು ಕ್ಲಾಸಿಕ್ ಕೇಸ್ ಆಫ್ ಫ್ಯಾಬ್ರಿಕ್ ಎವಿಡೆನ್ಸ್.. ಮರುದಿನ ಬೆಳಗ್ಗೆ ಅಂದರೆ ಮಂಗಳವಾರ 10:30ಕ್ಕೆ ಪೊಲೀಸರು ಬಂದು, ಆಚೆ ಕಳಿಸಿದರು. ಈ ಪ್ರಕಾರ ಪೊಲೀಸರು ಗೋಡಾನ್ ವಶಕ್ಕೆ ಪಡೆದಿದ್ದಾರೆ. ಪ್ಲೇಸ್ ಆಫ್ ಕ್ರೈಂ ಸೀಜ್ ಮಾಡಿದ್ದಾರೆ. ಆದಾದ ಬಳಿಕ ಏಕೆ 12ನೇ ತಾರೀಕಿನ ತನಕ ಸಾಕ್ಷಿಗಳ ಕಲೆ ಹಾಕಲು, ಕೋಲು, ಹಗ್ಗ ಎಲ್ಲಾ ಕಲೆಕ್ಟ್ ಮಾಡಲು ಕಾಯ್ದರು. ಇದೆಲ್ಲವೂ ದರ್ಶನ್ ವಿರುದ್ಧ ಸಾಕ್ಷಿಗಳ ಪ್ಲಾಂಟ್ ಮಾಡಲು ಮಾಡಿದ್ದಾರೆ.

9,10 ಹಾಗೂ 11ನೇ ತಾರೀಖು ಬಿಟ್ಟು ಆಮೇಲೆ ಮಾಡಿದ್ದಾರೆ. ಲಾಕ್ ಮಾಡಿ ಸೀಲ್ ಮಾಡಿದ ಮೇಲೆ ಏಕೆ ತಡವಾಗಿ ರಿಕವರಿ ಮಾಡಿದ್ದಾರೆ. ಅಲ್ಲಿ ಮರದ ಕೊಂಬೆಗಳು, ನೈಲಾನ್ ಹಗ್ಗ, ಎಲ್ಲವನ್ನು ಆಮೇಲೆ ಇಟ್ಟು, ಪ್ಲಾಂಟ್ ಮಾಡಿದ್ದಾರೆ. ನನ್ನ ಕಕ್ಷಿದಾರನ ವಿರುದ್ಧ ಇಟ್ಟು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಇಷ್ಟು ತಡವಾಗಿ ಮಾಡಿರುವುದು ಅನುಮಾನ ಮೂಡಿಸಿದೆ.ಕೃತ್ಯದಲ್ಲಿ ವೆಫನ್ ಫ್ಯಾಬ್ರಿಕೇಟ್ ಮಾಡಲಾಗಿದೆ ಎಂದು ನಾಗೇಶ್‌ ವಾದಿಸಿದಾಗ, ಮಧ್ಯಪ್ರವೇಶಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್ ಇದಕ್ಕೆ ನಾನು ಉತ್ತರ ಆಮೇಲೆ ಹೇಳುತ್ತೇನೆ ಎಂದರು.

Tags: Actor Darshan Renukaswamy murder caseBail application hearing adjourned till tomorrowDarshan's lawyer against the investigatorsHigh Court Karnataka
Previous Post

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಗೋವಿಂದ

Next Post

ಬಿಗ್ ಬಾಸ್ ನಲ್ಲಿ ಮಾನವಹಕ್ಕುಗಳ ಉಲ್ಲಂಘನೆ: ಮಾನವಹಕ್ಕು ಆಯೋಗಕ್ಕೆ ದೂರು

Related Posts

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
0

ಬೆಳಗಾವಿ: ಕಾಂಗ್ರೆಸ್ ಪಕ್ಷವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ವಿಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡಲು ಹೊರಟಿದೆ ಎಂದು ಬಿಜೆಪಿ(BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ...

Read moreDetails
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

December 18, 2025
Next Post

ಬಿಗ್ ಬಾಸ್ ನಲ್ಲಿ ಮಾನವಹಕ್ಕುಗಳ ಉಲ್ಲಂಘನೆ: ಮಾನವಹಕ್ಕು ಆಯೋಗಕ್ಕೆ ದೂರು

Recent News

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada