• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮಳೆ, ಜನಜೀವನ ಅಸ್ತವ್ಯಸ್ತ

ಪ್ರತಿಧ್ವನಿ by ಪ್ರತಿಧ್ವನಿ
October 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.ಬೆಂಗಳೂರು, ತುಮಕೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಮಡಿಕೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ, ಬೆಳಗಾವಿ ಸೇರಿದಂತೆ 12 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ADVERTISEMENT

ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದಾಗಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಜನರ ಜೀವನ ಹೈರಾಣಾಗಿದೆ. ಬೆಳಿಗ್ಗೆ ಶಾಲಾ-ಕಾಲೇಜುಗಳಿಗೆ ಕೆಲಸಕ್ಕೆ ಹೋಗಲಾರದೇ ಜನ ಪರಿತಪಿಸುವಂತಾಗಿತ್ತು.

ಬೆಳ್ಳಂಬೆಳಿಗ್ಗೆ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್‌ನಲ್ಲಿ ಜನ ಸಿಲುಕಿ ತೊಂದರೆ ಅನುಭವಿಸುವಂತಾಯಿತು. ನಿನ್ನೆ ತಡರಾತ್ರಿಯಲ್ಲೂ ಕೂಡ ಮಳೆ ಸುರಿದು ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆ ಅನುಭವಿಸುವಂತಾಯಿತು. ಓಕಳಿಪುರ ಅಂಡರ್‌ಪಾಸ್‌ನಲ್ಲಿ ಮಳೆಗೆ ಕೆರೆಯಂತಾಗಿ ವಾಹನಗಳು ಸಂಚರಿಸಲಾಗದೇ, ಸವಾರರು ಸಂಕಟ ಅನುಭವಿಸಿದರು. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರಚ್ಚು ಹಿಡಿದು ಮಳೆ ಸುರಿದಿದ್ದರಿಂದ ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು, ಡ್ಯೂಟಿಗೆ ಹೋಗಲು ನೌಕರರು ಸೇರಿದಂತೆ ಎಲ್ಲರೂ ತೊಂದರೆ ಅನುಭವಸಬೇಕಾಯಿತು.

ಗೊರಗುಂಟೆಪಾಳ್ಯ, ಹೆಸರುಘಟ್ಟ ರಸ್ತೆ, ಓಕಳಿಪುರಂ, ಕೆ.ಆರ್.ವೃತ್ತ, ಏರ್‌ಪೋರ್ಟ್ ರಸ್ತೆ, ಹೆಬ್ಬಾಳ ವೃತ್ತ, ಚಾಲುಕ್ಯ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಆರ್.ಆರ್.ನಗರ, ಉತ್ತರಹಳ್ಳಿ, ಯಲಹಂಕ ಹಲವೆಡೆ ರಸ್ತೆಯಲ್ಲಿ ನೀರು ನಿಂತು, ಟ್ರಾಫಿಕ್ ಜಾಮ್ ಉಂಟಾಗಿ ಕಿಲೋ ಮೀಟರ್‌ಗಟ್ಟಲೆ ವಾಹನಗಳು ನಿಂತಿದ್ದರಿಂದ ಸವಾರರು ಹೈರಾಣಾಗಿದ್ದರು.

ತುಮಕೂರಿನಲ್ಲೂ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿತ್ತು. ಉತ್ತರ ಒಳನಾಡು, ಕರಾವಳಿ ಪ್ರದೇಶಗಳಲ್ಲಿ ಬಿಟ್ಟುಬಿಡದೆ ಮಳೆ ಬರುತ್ತಿರುವುದರಿಂದ ಜನ ಹೈರಾಣಾಗಿದ್ದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಮಳೆ ಮುಂದುವರೆದಿದ್ದು, ಹಲವೆಡೆ ಮಳೆಗೆ ಜನರು ತೊಂದರೆಗೆ ಸಿಲುಕಿದರು.

Tags: CM Siddaramaiah‌many parts of the karnatakaRainWeather Forecast
Previous Post

ಕಿಚ್ಚ ಬಿಗ್​ಬಾಸ್ ಬಗ್ಗೆ ಏನಂತ ಟ್ವೀಟ್ ಮಾಡಿದ್ರು?

Next Post

ಜಂಟಿ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ.

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
Next Post

ಜಂಟಿ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada