• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿಯವರು ಹಿಂದೂ ಸಂಘಟನೆಗಳ ಮೇಲಿನ ಕೇಸ್ ವಾಪಸ್ ಪಡೆದಿಲ್ವಾ: ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
October 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ಕಾರಣಕ್ಕೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಇಂದು ಸಚಿವ ರಾಮಲಿಂಗಾರೆಡ್ಡಿ ಪತ್ರಿಕಾಗೋಷ್ಠಿ ನಡೆಸಿ ತಿರುಗೇಟು ನೀಡಿದರು.

ADVERTISEMENT

ಇತ್ತೀಚೆಗೆ ನಡೆದ ಸಚಿವ ಸಂಪುಟಸಭೆಯಲ್ಲಿ 43 ಕೇಸ್ ಗಳನ್ನು ಹಿಂಪಡೆಯಲಾಗಿದೆ.

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೋಮುಗಲಭೆ, ಧಾರ್ಮಿಕ ಘರ್ಷಣೆ, ನೈತಿಕ ಪೊಲೀಸ್‌ ಗಿರಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಮಾಡಿದಂತಹ ನೂರಾರು ಪ್ರಕರಣಗಳನ್ನು ವಾಪಾಸ್‌ ಪಡೆದಿದೆ. ಇದರಲ್ಲಿ ಪಿಎಫ್‌ಐ, ಎಸ್‌ಡಿಪಿಐ, ಭಜರಂಗದಳ, ಶ್ರೀರಾಮಸೇನೆಯವರ ಮೇಲಿದ್ದ ಪ್ರಕರಣಗಳು ಸೇರಿವೆ.
ನಾವು ಕಳೆದ ಸಚಿವ ಸಂಪುಟ ಸಭೆಯಲ್ಲಿ… pic.twitter.com/jItapooQYe

— Siddaramaiah (@siddaramaiah) October 15, 2024

ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಡಾ.ಎಂ.ಸಿ.ಸುಧಾಕರ್ ಅವರ ಮನವಿ ಮೇರೆಗೆ ಹಿಂಪಡೆಯಲಾಗಿದೆ. ಸಂವಿಧಾನಕ್ಕೆ ಅಪಮಾನ ಮಾಡಿದವರ ವಿರುದ್ಧ ಹೋರಾಟ ಮಾಡಿದ ಎನ್.ಭಾಸ್ಕರ್, ಕರವೇಯ ನಾರಾಯಣ ಗೌಡ, ಗಣರಾಜ್ಯ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಇರುವ ಕಾರಣಕ್ಕೆ ನಡೆದ ಪ್ರತಿಭಟನೆ, ಪೇಸಿಎಂ ಅಭಿಯಾನದಲ್ಲಿ ಪೋಸ್ಟರ್ ಅಂಟಿಸಿದವರ ವಿರುದ್ದ ಹೀಗೆ ಒಂದಷ್ಟು ಜನಪರ ಹೋರಾಟಗಳನ್ನು ನಡೆಸುವಾಗ ದಾಖಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ.

ಇವುಗಳ ಪೈಕಿ ಹಳೇ ಹುಬ್ಬಳ್ಳಿ ಪ್ರಕರಣವೂ ಒಂದು ಇದನ್ನೂ ಸಹ ನಾವು ವಾಪಸ್ ಪಡೆದಿದ್ದೇವೆ. ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರ ಅಧಿಕಾರವಧಿಯಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆದಿದ್ದರು ಎನ್ನುವ ದೊಡ್ಡ ಪಟ್ಟಿಯೇ ಇದೆ’ ಎಂದು ಸಚಿವರು ಆರೋಪಿಸಿದ್ದಾರೆ.

182 ಕೋಮು ದ್ವೇಷದ ಪ್ರಕರಣಗಳು ಬಿಜೆಪಿಯಿಂದ ವಾಪಸ್:ಬಿಜೆಪಿಯವರು 385 ಪ್ರಕರಣಗಳನ್ನು ಹಿಂದಕ್ಕೆ ಪಡೆದಿದ್ದರು. ಇದರಲ್ಲಿ 182 ಪ್ರಕರಣಗಳು ಕೋಮು ದ್ವೇಷ ಸೇರಿದಂತೆ ಅನೈತಿಕ ಪೊಲೀಸ್ ಗಿರಿ, ಪಬ್ ದಾಳಿ ಸೇರಿದಂತೆ ಈ ರೀತಿಯ ಪ್ರಕರಣಗಳನ್ನು ವಾಪಸ್ ಪಡೆದಿದ್ದಾರೆ. ಇದರಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಆರೋಪಿಗಳ ಮೇಲಿನ ಪ್ರಕರಣಗಳು ಇಲ್ಲವಾಗಿದೆ. 2022 ರಲ್ಲಿ 62 ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗುತ್ತದೆ. ಸಿ.ಟಿ.ರವಿ, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ, ಹಾಲಪ್ಪ ಆಚಾರ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಜೆ.ಸಿ.ಮಾಧುಸ್ವಾಮಿ ಅವರು ಇದರ ಫಲಾನುಭವಿಗಳು.

ನಾನು ಗೃಹ ಸಚಿವ ಆಗಿದ್ದಾಗ ನಡೆದ ಪರೇಸ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಏನೇನೋ ಮಾಡಿದರು. ನಂತರ ಎನ್ ಐಎ ತನಿಖಾ ತಂಡ ಆತನ ಸಾವನ್ನು ಆಕಸ್ಮಿಕ ಎಂದು ಹೇಳಿತು.

ಹೆಣದ ಮೇಲಿನ ರಾಜಕೀಯ ಪುಸ್ತಕ ಮರುಮುದ್ರಣ.ಬಿಜೆಪಿಯವರು ಹೆಣ ಬಿದ್ದರೆ ಸಾಕು ರಣಹದ್ದುಗಳಂತೆ ಕಾಯುತ್ತಿರುತ್ತಾರೆ. ಬಿಜೆಪಿಯವರ ಹೆಣದ ಮೇಲಿನ ರಾಜಕೀಯದ ಬಗ್ಗೆ ಪುಸ್ತಕವಿದ್ದು ಅದನ್ನು ಮತ್ತೊಮ್ಮೆ ಮುದ್ರಿಸಲಾಗುವುದು.

ಕ್ರಿಮಿನಲ್ ಪ್ರಕ್ರಿಯೆ ಸಂಹಿತೆ ಕಲಂ 321 ರ ಅಡಿ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದರೂ ವಾಪಸ್ ಪಡೆಯುವ ಅಧಿಕಾರ ದೇಶದ ಎಲ್ಲಾ ರಾಜ್ಯ ಸರ್ಕಾರಗಳಿಗಿದೆ. ಗೃಹ ಇಲಾಖೆಗೆ ಕೇಸಿಗೆ ಸಂಬಂಧ ಪಟ್ಟವರು ವಾಪಸ್ ಪಡೆಯಬೇಕು ಎಂದು ಮನವಿ ಸಲ್ಲಿಸಿರುತ್ತಾರೆ. ಇದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅನೇಕ ಬಾರಿ ದುರುದ್ದೇಶಪೂರಿತವಾಗಿ ಕೇಸ್ ದಾಖಲಿಸಲಾಗಿರುತ್ತದೆ. ರೈತರ ಪರ, ಭಾಷೆ, ಜಲವಿವಾದ ಸೇರಿದಂತೆ ಅನೇಕ ಸಂಘಟನೆಗಳು ಹೋರಾಟ ನಡೆಸಿರುತ್ತವೆ. ಬಿಜೆಪಿಯಲ್ಲಿ ಸುಳ್ಳು ಹೇಳುವವರನ್ನೇ ವಕ್ತಾರನ್ನಾಗಿ ಮಾಡಿಕೊಂಡಿದ್ದಾರೆ. ಬಿಜೆಪಿಯವರ ಸುಳ್ಳುಗಳನ್ನೇ ಜನರು ನಂಬಬಾರದು ಎಂದು ಸತ್ಯವನ್ನು ತಿಳಿಸುವ ಕೆಲಸ ನಾವು ಮಾಡುತ್ತಿದ್ದೇವೆ ಎಂದಿದ್ದಾರೆ.

Tags: BJPBJP withdraws case againstCongress PartyHindu organizationsRamalinga Reddy hits back
Previous Post

ಕೇಂದ್ರ ಸಚಿವ ಕುಮಾರಣ್ಣಂಗೆ ಎಂ. ಲಕ್ಷ್ಮಣ್ ಸವಾಲ್

Next Post

ಮಣಿಪುರದ ಕುಕಿ, ಮೈತೇಯಿ ಮತ್ತು ನಾಗಾ ನಡುವಿನ ಮಾತುಕಥೆ ಪ್ರಗತಿ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

ಮಣಿಪುರದ ಕುಕಿ, ಮೈತೇಯಿ ಮತ್ತು ನಾಗಾ ನಡುವಿನ ಮಾತುಕಥೆ ಪ್ರಗತಿ

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada