• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ ಸಂಸದರಾದ ಜಿ.ಕುಮಾರ್ ನಾಯಕ್, ಇ.ತುಕಾರಾಂ ರಾಜೀನಾಮೆ ನೀಡಲಿ: ಲೆಹರ್ ಸಿಂಗ್ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
October 18, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣದಲ್ಲಿ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ಜಿ.ಕುಮಾರ್ ನಾಯಕ್ ಹಾಗೂ ಇ.ತುಕಾರಾಂ ಅವರು ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ (Lahar Singh Siroya) ಒತ್ತಾಯಿಸಿದ್ದಾರೆ.

ADVERTISEMENT

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಡಾ ಹಗರಣದಲ್ಲಿ ರಾಯಚೂರು ಕಾಂಗ್ರೆಸ್ ಸಂಸದ ಜಿ.ಕುಮಾರ್ ನಾಯಕ್ ಅವರ ಪಾತ್ರದ ಬಗ್ಗೆ ಎಲ್ಲರೂ ಯಾಕೆ ಮೌನವಾಗಿದ್ದಾರೆ? ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರು ಸಲ್ಲಿಸಿದ್ದ ಸುಳ್ಳು ವರದಿ ಬಗ್ಗೆ ಹೈಕೋರ್ಟ್ ತೀವ್ರ ಟೀಕೆ ಮಾಡಿದೆ. ಇನ್ನು ವಾಲ್ಮೀಕಿ ನಿಗಮದ ಹಣವನ್ನು ಬಳ್ಳಾರಿ ಮತದಾರರಿಗೆ ಲಂಚ ನೀಡಲು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಇಡಿ ಚಾರ್ಜ್‌ಶೀಟ್‌ ಬಹಿರಂಗಪಡಿಸಿದೆ. ಹೀಗಾಗಿ ಕಾಂಗ್ರೆಸ್ ಸಂಸದರಾದ ಜಿ.ಕುಮಾರ್ ನಾಯಕ್ ಮತ್ತು ಇ. ತುಕಾರಾಂ ಈ ಕೂಡಲೇ ರಾಜೀನಾಮೆ ನೀಡಿ, ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸಿದ್ದಾರೆ.

Why is everyone silent on the Raichur Congress MP, Shri G Kumar Nayak's role in the #MUDA scam? The Karnataka HC made strong remarks about the “false and fraudulent report” he submitted as DC of Mysore and "beginning the scam". My statement. 1/2@PMOIndia @JPNadda @RahulGandhi pic.twitter.com/8qgDef9xai

— Lahar Singh Siroya (@LaharSingh_MP) October 18, 2024

ಒಂದೆರಡು ದಿನಗಳ ಹಿಂದೆ ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆ ನೀಡಿದ್ದರು.ಮರಿಗೌಡರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ.ಅವರ ರಾಜೀನಾಮೆಯಿಂದ ಮುಡಾ ವಿವಾದ ಮುಗಿಯುವುದಿಲ್ಲ.ಇದು ಮತ್ತಷ್ಟು ಸಂಕೀರ್ಣವಾಗುತ್ತದೆ.

ಮುಡಾ ಪ್ರಕರಣದಲ್ಲಿ ತಪ್ಪನ್ನು ಪರೋಕ್ಷವಾಗಿ ಒಪ್ಪಿಕೊಂಡಿರುವುದು ಕಂಡುಬಂದಿದೆ. ಅಧಿಕಾರ ದುರ್ಬಳಕೆ ಆಗಿರುವುದರಿಂದ ತನಿಖೆಗೆ ನ್ಯಾಯಾಲಯ ಅನುಮತಿ ನೀಡಿತ್ತು.ಆದರೆ, ಈ ತೀರ್ಪಿನ ವಿರುದ್ಧ ಸಿಎಂ ಇದುವರೆಗೆ ಮೇಲ್ಮನವಿ ಸಲ್ಲಿಸಿಲ್ಲ ಎಂಬುದು ಕುತೂಹಲ ಮೂಡಿಸಿದೆ. ಹಗರಣವನ್ನು ಮುಚ್ಚಿಹಾಕುವ ದೃಷ್ಟಿಯಿಂದ ವಿವಾದಿತ ಸೈಟ್‌ಗಳನ್ನು ಸಿಎಂ ಹಿಂತಿರುಗಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಂಸದ ಜಿ ಕುಮಾರ್ ನಾಯಕ್ ಅವರ ವಿರುದ್ಧ ಆರೋಪಗಳು ಕೇಳಿಬಂದಿವೆ. ಅಂದಿನ ಮೈಸೂರು ಡಿಸಿ ಜಿ.ಕುಮಾರ್ ನಾಯಕ್ 2005ರ ಜೂ.17ರಂದು ನಿವೇಶನ ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ಸುಳ್ಳು ವರದಿ ಸಲ್ಲಿಸಿದ್ದಾರೆ. ಇಲ್ಲದೇ ಇರೋ ಜಾಗವನ್ನು ಭೂ ಪರಿವರ್ತನೆ ಮಾಡಲಾಗಿದೆ. ಹೀಗಾಗಿ ಜಿ ಕುಮಾರ್‌ ನಾಯಕ್ ಮತ್ತು ಇತರ ಅಧಿಕಾರಿಗಳ ವಿರುದ್ಧ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಯಬೇಕಿದೆ ಎಂದು ಹೈಕೋರ್ಟ್‌ ಹೇಳಿದೆ. ಅಲ್ಲದೆ, ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಮತ್ತೊಂದು ಹಗರಣದಲ್ಲಿ ಇಡಿ ತನ್ನ ಆರೋಪಪಟ್ಟಿಯಲ್ಲಿ ಹೇಳಿದೆ.

Tags: ED chargesheetimplicating Congress MP Shri E.Tukaram.resignvalmiki corporation scam
Previous Post

ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್

Next Post

ನಾನು ಕೊಟ್ಟ ದೂರಿನ ಮೇಲೆ ಇ.ಡಿ ಶೋಧ ಮಾಡ್ತಿದೆ – ಲಕ್ಷ್ಮಣ್‌

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ನಾನು ಕೊಟ್ಟ ದೂರಿನ ಮೇಲೆ ಇ.ಡಿ ಶೋಧ ಮಾಡ್ತಿದೆ – ಲಕ್ಷ್ಮಣ್‌

ನಾನು ಕೊಟ್ಟ ದೂರಿನ ಮೇಲೆ ಇ.ಡಿ ಶೋಧ ಮಾಡ್ತಿದೆ - ಲಕ್ಷ್ಮಣ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada