• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಮಾಡಲ್ಲ; ಕಾರ್ಯಕರ್ತರಿಗೆ ಮಾತು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಮಾಡಲ್ಲ; ಕಾರ್ಯಕರ್ತರಿಗೆ ಮಾತು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು:ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ.ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ.ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ.ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

ADVERTISEMENT

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ಮಾತನಾಡಿದರು ಕೇಂದ್ರ ಸಚಿವರು.

ನನಗೆ ಭಯವೇ ಇಲ್ಲ: ಈ ರಾಜ್ಯದಲ್ಲಿ ನನ್ನಷ್ಟು ಉಪ ಚುನಾವಣೆಗಳನ್ನು ಎದುರಿಸಿದ, ಯಶಸ್ವಿಯಾಗಿ ನಿಭಾಯಿಸಿದ ವ್ಯಕ್ತಿ ಇನ್ನೊಬ್ಬರಿಲ್ಲ, ಎಂತೆಂತಹ ಚುನಾವಣೆಗಳನ್ನು, ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಚನ್ನಪಟ್ಟಣ ಚುನಾವಣೆ ಎದುರಿಸುವುದಕ್ಕೆ ನನಗೆ ಭಯವೇ..? ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವರು ಗುಡುಗಿದರು.

ನಿಮ್ಮಂತ ಕಾರ್ಯಕರ್ತರು ಜೊತೆಯಲ್ಲಿ ಇರಬೇಕಾದರೆ ನಾವು ಹೆದುರುತ್ತೇವೆಯೇ? ನೆಲದವರಿಗೆ ಬಗ್ಗಿದ್ದೇನೆ, ಜೆಡಿಎಸ್ ಮುಗಿಸಲು ಅನೇಕರು ನಮ್ಮಿಂದಲೇ ಬೆಳೆದವರು ಎಂತೆತ ಮಾತಾಡಿದ್ದಾರೆ.

ಮೋದಿ, ಶಾ ಸಂಬಂಧ ಹಾಳು ಮಾಡಿಕೊಳ್ಳಲಾರೆ:

ನಾನು ಬಗ್ಗಿರುವುದು ಅಧಿಕಾರಕ್ಕಾಗಿ ಅಲ್ಲಾ. ವೈಯಕ್ತಿಕವಾಗಿ ನಾನು ಮಾಡದಿರುವ ತಪ್ಪಿಗೆ ತಲೆಕೊಟ್ಟಿದ್ದೇನೆ. ಈ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೂಲೋತ್ಪಾಟನೆ ಮಾಡಬೇಕು ಎನ್ನುವ ಪ್ರಧಾನಿ ಮೋದಿ ಸಂಕಲ್ಪಕ್ಕೆ ಹೆಗಲಾಗಿ ನಿಂತಿದ್ದೇನೆ ಎಂದು ಅವರು ಹೇಳಿದರು.

ನಾಲ್ಕು ತಿಂಗಳಾಯಿತು ನಾನು ಮಂತ್ರಿಯಾಗಿ. ಆರೋಗ್ಯ ಹಾಳು ಮಾಡಿಕೊಂಡು ಏತಕ್ಕಾಗಿ ಇಷ್ಟೆಲ್ಲಾ ಮಾಡಬೇಕು. ನನ್ನಿಂದ ಜನರಿಗೆ ಅಲ್ಪಸ್ವಲ್ಪವಾದರೂ ಸಹಾಯ ಆಗುತ್ತದೆಯೇ ಎಂದು ಒಡ್ಡಾಡುತ್ತಿದ್ದೇನೆ. ಎನ್ ಡಿಎ ಮೈತ್ರಿ ಭದ್ರವಾಗಿದೆ. ಪ್ರಧಾನಿ ಮೋದಿ ಅವರು ದೇವೇಗೌಡರಿಗೆ ಕೊಡುವ ಗೌರವವನ್ನು ಯಾರಿಗೂ ಕೊಡಲ್ಲ. ಅವರಿಬ್ಬರ ನಡುವಿನ ಗೌರವಭಾವ ಎಂತದ್ದು ಎನ್ನುವುದನ್ನು ನಾನು ನೋಡಿದ್ದೇನೆ. ಆ ಸಂಬಂಧಕ್ಕೆ ಚ್ಯುತಿ ಬರಬಾರದು. ಅದಕ್ಕಾಗಿ ಬಗ್ಗಿದ್ದೇನೆ, ಇನ್ನೂ ಬಗ್ಗಿ ಎಂದರೆ ನನ್ನಿಂದ ಸಾಧ್ಯವಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್ ನಿಂದಲೇ ಟಿಕೆಟ್ ಕೊಡಿ ಎಂದಿದ್ದರು ನಡ್ಡಾ:

ನವದೆಹಲಿಯಲ್ಲಿ ಭೇಟಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅವರಿಗೆ (ಯೋಗೇಶ್ವರ್) ರಾಜೀನಾಮೆ ಕೊಟ್ಟು ಜೆಡಿಎಸ್ ನಿಂದ ಚುನಾವಣೆಗೆ ನಿಲ್ಲುವುದಕ್ಕೆ ಹೇಳುತ್ತೇವೆ ಎಂದು ಹೇಳಿದ್ದರು. ನಾನು ಈ ಸಂಬಂಧ ಉಳಿಯಬೇಕು, ಒಂದು ಸ್ಥಾನ ಮುಖ್ಯವಲ್ಲ, ಎನ್ ಡಿಎ ಮೈತ್ರಿ ಗೆಲ್ಲಬೇಕು ಎಂದು ಹೇಳುತ್ತಲೇ ಇದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ಅವರಂತಹ ನಾಯಕರ ಜತೆ ಸಂಬಂಧ ಮಾಡಿಕೊಳ್ಳಬೇಕಾ? ಎಂದು ಅವರು ಕಿಡಿಕಾರಿದರು.

ದೆಹಲಿಯ ಬಿಜೆಪಿ ನಾಯಕರು ಜೆಡಿಎಸ್ ಪಕ್ಷಕ್ಕೆ ಬಹಳ ಗೌರವ ಕೊಟ್ಟಿದ್ದಾರೆ. ನನಗೆ ಕೆಲಸ ಮಾಡಲು ಮುಕ್ತ ಅವಕಾಶ ನೀಡಿದ್ದಾರೆ. ಏನೇ ಮನವಿ ಮಾಡಿದರೂ ತಕ್ಷಣ ಸ್ಪಂದಿಸುತ್ತಿದ್ದಾರೆ. ನಿಮ್ಮ ಭಾವನೆಗಳಿಗೆ ಧಕ್ಕೆ ಆಗದಂತೆ ನಿರ್ಧಾರ ಮಾಡುತ್ತೇನೆ. ನಿಮ್ಮ ಮಾತಿಗೆ ಗೌರವ ನೀಡುತ್ತೇನೆ. ಕಾರ್ಯಕರ್ತರು ಒಟ್ಟಾಗಿರಿ, ಯಾರಿಗೂ ತಲೆಬಾಗಬೇಕಿಲ್ಲ. ಗೌರವಕ್ಕೆ ತಲೆಬಾಗೊಣ,‌ ಇನ್ನು ಮೂರು ದಿನ‌ ಸಮಯ ಇದೆ. ನನ್ನ ಕಾರ್ಯಕರ್ತರ ಭಾವನೆಯೇ ಅಂತಿಮ. ಸಮಯ ಕೊಡಿ ಎಂದು ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಮನವಿ ಮಾಡಿಕೊಂಡರು.

ಕಾಂಗ್ರೆಸ್ ಪಕ್ಷದವರು ಕುತಂತ್ರ ಮಾಡಿ ನಮ್ಮ ಪಕ್ಷವನ್ನು ಪಾತಾಳಕ್ಕೆ ತುಳಿದಿದ್ದಾರೆ.ಅವರು ತುಳಿದಷ್ಟೂ ನಾವು ಪ್ರಬಲವಾಗಿ ಎದ್ದು ಬಂದಿದ್ದೇವೆ. ಲೋಕಸಭೆ ಚುನಾವಣೆಗೆ ಮೊದಲು ಜೆಡಿಎಸ್ ಮುಗಿದೇ ಹೋಯಿತು ಎಂದು ಜಾಗಟೆ ಹೊಡೆಯುತ್ತಿದ್ದರು.ಈಗ ಇದೇ ಕುಮಾರಸ್ವಾಮಿ ಏನು ಎನ್ನುವುದು ಅವರಿಗೆ ಅರ್ಥವಾಗಿದೆ.ಇಂಥ ಕಾಂಗ್ರೆಸ್ ನವರಿಗೆ ನಾನು ಹೆದರಲ್ಲ. ಚಿನ್ನದಂತಹ ಕಾರ್ಯಕರ್ತರು ಇದ್ದೀರಿ.ಧೈರ್ಯವಾಗಿ ಚುನಾವಣೆ ಎದುರಿಸೋಣ.ಇದೊಂದು ಅಗ್ನಿಪರೀಕ್ಷೆ ನಿಜ, ಹಾಗಂತ ಎದೆಗುಂದಬೇಕಿಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು ಕೇಂದ್ರ ಸಚಿವರು.

ಕಾರ್ಯಕರ್ತರ ಆಗ್ರಹಕ್ಕೆ ಮಣಿದು ಭಾಷಣ ಮೊಟಕುಗೊಳಿಸಿದ HDK:ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಕೊಡಬೇಕು, ಯಾವುದೇ ಕಾರಣಕ್ಕೂ ಯೋಗೇಶ್ವರ್ ಅವರಿಗೆ ಕೊಡಬಾರದು ಎಂದು ಚನ್ನಪಟ್ಟಣ ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ನಿಖಿಲ್ ಕುಮಾರಸ್ವಾಮಿ ಅವರು ಭಾಷಣ ಮಾಡುವಾಗಲೂ ಪದೇಪದೆ ಅಡ್ಡಿಪಡಿಸಿ, ನಿಖಿಲ್ ಅವರ ಹೆಸರನ್ನು ಘೋಷಣೆ ಮಾಡುವಂತೆ ಒತ್ತಾಯಿಸಿದರು.

ನಮ್ಮನ್ನು ಯೋಗೇಶ್ವರ್ ಹಿಂಸಿಸಿದ್ದಾರೆ.ನೀವು ಶಾಸಕರಾಗಿದ್ದಾಗಲೇ ನಮಗೆ ಕೊಡಬಾರದ ಕಾಟ ಕೊಟ್ಟರು. ಆ ವ್ಯಕ್ತಿಯೇ ಶಾಸಕರಾಗಿದ್ದಾಗ ಜೆಡಿಎಸ್ ಕಾರ್ಯಕರ್ತರು ಪ್ರತಿದಿನವೂ ಪೊಲೀಸ್ ಠಾಣೆಗೆ ಅಲೆಯಬೇಕಾಗಿತ್ತು.ಒಂದು ವೇಳೆ ನೀವು ನಿಖಿಲ್ ಅವರನ್ನು ಬಿಟ್ಟು ಯೋಗೇಶ್ವರ್ ಗೆ ಮಣೆ ಹಾಕಿದರೆ ನಮ್ಮ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಹಠ ಹಿಡಿದರು ಕಾರ್ಯಕರ್ತರು.

ಕಾರ್ಯಕರ್ತರ ಕೂಗಾಟ, ಆಕ್ರೋಶದ ಕಾರಣದಿಂದ ಕುಮಾರಸ್ವಾಮಿ ಅವರು ಭಾಷಣ ಮುಂದುವರಿಸಲು ಆಗಲಿಲ್ಲ. ಮೊದಲು ನಿಖಿಲ್ ಅವರ ಹೆಸರು ಘೋಷಣೆ ಮಾಡಿ, ಆಮೇಲೆ ಬೇಕಾದರೆ ನಿಮ್ಮ ಭಾಷಣ ಕೇಳುತ್ತೇವೆ ಎಂದರು. ಕೊನೆಗೆ, ನನ್ನ ಆರೋಗ್ಯ ಸರಿ ಇಲ್ಲ. ಮಾತನಾಡಲು ಅವಕಾಶ ಕೊಡಿ ಎಂದರೂ ಕಾರ್ಯಕರ್ತರು ಕೇಳಲಿಲ್ಲ. ಕೊನೆಗೂ ಗದ್ದಲದಲ್ಲಿಯೇ ಕೇಂದ್ರ ಸಚಿವರು ಭಾಷಣ ಮೊಟಕು ಮಾಡಿದರು.

Tags: BJPCB Suresh BabuHD Deve GowdaHopakams DevarajuJayaram.JDS City Unit President HM Ramesh GowdaLegislative Council Member Manje Gowdasenior leader PrasannaVenkatarao Nad Gowdaಜೆಡಿಎಸ್
Previous Post

ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ ಎಂದ HDK

Next Post

ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada