
ಬೆಂಗಳೂರು:ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಸರು ಅಂತಿಮವಾಗಿದೆ. ಅಳೆದು ತೂಗಿ ಲೆಕ್ಕ ಹಾಕಿದ ದಳಪತಿಗಳು ನಿಖಿಲ್ ಕುಮಾರಸ್ವಾಮಿ ಅವರಿಗೆ ಮಣೆ ಹಾಕಿದ್ದಾರೆ. ಎನ್ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಗೆ ಎನ್ ಡಿ ಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಕುಟುಂಬದೊಂದಿಗೆ ಜೆ.ಪಿ ನಗರದಲ್ಲಿರುವ ಶ್ರೀ ತಿರುಮಲಗಿರಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ ತೆರಳಿ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಲಾಯಿತು.
— Nikhil Kumar (@Nikhil_Kumar_k) October 25, 2024
ನಂತರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಶ್ರೀ… pic.twitter.com/6cZDJXYpB4
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಗೆ ಎನ್ ಡಿ ಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬದೊಂದಿಗೆ ಜೆ.ಪಿ ನಗರದಲ್ಲಿರುವ ಶ್ರೀ ತಿರುಮಲಗಿರಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ ತೆರಳಿ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಲಾಯಿತು. ನಂತರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ ದೇವೇಗೌಡರ ಆಶೀರ್ವಾದ ಪಡೆದುಕೊಂಡರು.