• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಪ್ಪಳದಲ್ಲಿ ದಲಿತರ ಮೇಲೆ ದೌರ್ಜನ್ಯ:ಭಾರತೀಯ ಇತಿಹಾಸದಲ್ಲೇ ಮೊದಲ ಬಾರಿ 98 ಮಂದಿಗೆ ಜೀವಾವಧಿ ಶಿಕ್ಷೆ!

ಪ್ರತಿಧ್ವನಿ by ಪ್ರತಿಧ್ವನಿ
October 26, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕೊಪ್ಪಳ: ಜಾತಿ ಸಂಘರ್ಷ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಆದೇಶ ನೀಡಿದೆ.

ADVERTISEMENT

ಹತ್ತು ವರ್ಷದ ಹಿಂದೆ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ನಡೆದ ಜಾತಿ ಸಂಘರ್ಷ ಪ್ರಕರಣದಲ್ಲಿ 101 ಜನ ಅಪರಾಧಿಗಳಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ, ತಲಾ ಐದು ಸಾವಿರ ರೂ.ದಂಡ ವಿಧಿಸಿ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಐತಿಹಾಸಿಕ ತೀರ್ಪು ನೀಡಿತು.

ಗಂಗಾವತಿ ತಾಲೂಕಿನ ಮರುಕುಂಬಿಯಲ್ಲಿ 2014ರ ಅಕ್ಟೋಬರ್​​ 28ರಂದು ನಡೆದ ಜಾತಿ ಸಂಘರ್ಷ ಪ್ರಕರಣ ಇದಾಗಿದೆ.ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಚಂದ್ರಶೇಖರ ಸಿ. ಈ ಆದೇಶ ನೀಡಿದ್ದಾರೆ.

ಜಾತಿ ಸಂಘರ್ಷ ಪ್ರಕರಣದಲ್ಲಿ 101 ಜನರ ವಿರುದ್ಧ ತೀರ್ಪು ಬಂದ ದೇಶದ ಮೊದಲ ಪ್ರಕರಣ ಇದಾಗಿದೆ.101 ಆರೋಪಿಗಳ ವಿರುದ್ಧ ಸೋಮವಾರ (ಅ.21) ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿತ್ತು. ಇವರಲ್ಲಿ ಮೂವರು ಅಪರಾಧಿಗಳು ಪರಿಶಿಷ್ಠ ಜಾತಿ, ಪಂಗಡಕ್ಕೆ ಸೇರಿದವರಾಗಿದ್ದರಿಂದ ಇವರಿಗೆ ಜಾತಿ ನಿಂದನೆ ಕೇಸ್ ಅನ್ವಯವಾಗಿಲ್ಲ. 101 ಜನರಲ್ಲಿ ಮೂವರು ಅಪರಾಧಿಗಳಿಗೆ ಐದು ವರ್ಷ ಜೈಲು ಹಾಗೂ 2 ಸಾವಿರ ರೂ. ದಂಡ ವಿಧಿಸಲಾಗಿದೆ. ಹೀಗಾಗಿ, ಶಿಕ್ಷೆ ಪ್ರಮಾಣ ಕಡಿಮೆಯಾಗಿದ್ದು, ಜೀವಾವಧಿ ಶಿಕ್ಷೆ ಆದೇಶದಿಂದ ವಿನಾಯಿತಿ ಸಿಕ್ಕಿದೆ. ಆದರೆ, ಗಲಬೆ ಹಬ್ಬಿಸಿದ ಕಾರಣ ನೀಡಿ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಪ್ರಕರಣದ ಹಿನ್ನೆಲೆ:

ಕೊಪ್ಪಳ ಜಿಲ್ಲೆ ಮರುಕುಂಬಿ ಗ್ರಾಮದಲ್ಲಿ 2014ರಲ್ಲಿ ಕ್ಷೌರದಂಗಡಿಗೆ ಮತ್ತು ಹೋಟೆಲ್​ನಲ್ಲಿ ದಲಿತರಿಗೆ ಪ್ರವೇಶ ನೀಡದೆ ಇರುವ ಕುರಿತು ಜಾತಿ ಸಂರ್ಘರ್ಷ ನಡೆದಿತ್ತು. ಇದಾದ ಮೇಲೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದರು. ಆದರೆ, ಬಳಿಕ ಮತ್ತೊಂದು ಪ್ರಕರಣ ಅಲ್ಲಿಯೇ ದಾಖಲಾಗಿತ್ತು.ಮರಕುಂಬಿ ಪಕ್ಕದ ಗಂಗಾವತಿಯಲ್ಲಿ ಮರಕುಂಬಿ ಗ್ರಾಮದ ಕೆಲ ಸವರ್ಣೀಯರು ಸಿನಿಮಾ ನೋಡಲು ಹೋಗಿದ್ದರು.

ಅಲ್ಲಿ ಗಲಾಟೆ ನಡೆದಿದ್ದು, ಅದರಲ್ಲಿ ಕೆಲ ದಲಿತ ಯುವಕರು ಭಾಗಿಯಾಗಿದ್ದರು. ಅದಾದ ಬಳಿಕ ಇದೇ ವಿಷಯಕ್ಕೆ ಮರಕುಂಬಿ ಗ್ರಾಮದಲ್ಲಿ ರಾತ್ರಿ ವೇಳೆಯಲ್ಲಿ ದಲಿತರ ಕೇರಿಗೆ ಸವರ್ಣೀಯರು ನುಗ್ಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಆದರೆ, ಈ ಪ್ರಕರಣದಲ್ಲಿ ಅಂದು ಯಾವುದೇ ಪ್ರಾಣ ಹಾನಿಯಾಗಿರಲಿಲ್ಲ. ಈ ಸಂಬಂಧ ಅಂದು 101 ಜನರ ವಿರುದ್ದ ಪ್ರಕರಣ ದಾಖಲಾಗಿತ್ತು.

Tags: 98 people were sentenced to life imprisonment!CourtFor the first time in Indian historyKoppal
Previous Post

ಮನೆಯವರ ಅಭಿಪ್ರಾಯ ಕೇಳಿ, ಹನುಮಂತ ಫುಲ್ ಶಾಕ್.!

Next Post

ದನಾ ಚಂಡಮಾರುತದಿಂದ ಒಡಿಶಾ ರೈತರ ಬದುಕಿಗೆ ಸಂಕಷ್ಟ ; ಪರಿಹಾರಕ್ಕೆ ಒತ್ತಾಯ

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post

ದನಾ ಚಂಡಮಾರುತದಿಂದ ಒಡಿಶಾ ರೈತರ ಬದುಕಿಗೆ ಸಂಕಷ್ಟ ; ಪರಿಹಾರಕ್ಕೆ ಒತ್ತಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada