• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಗಜರಾಮ’ ಸಿನಿಮಾದ ಸ್ಪೆಷಲ್ ಹಾಡು ರಿಲೀಸ್…ರಾಜವರ್ಧನ್ ಜೊತೆ ಹೆಜ್ಜೆ ಹಾಕಿದ ರಾಗಿಣಿ

ಪ್ರತಿಧ್ವನಿ by ಪ್ರತಿಧ್ವನಿ
October 30, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಅವರು ಸ್ಯಾಂಡಲ್‌ವುಡ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ‘ಬಿಚ್ಚುಗತ್ತಿ’ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿರುವ ರಾಜವರ್ಧನ್ ಇತ್ತೀಚೆಗಷ್ಟೇ ‘ಹಿರಣ್ಯ’ ಅನ್ನೋ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. ಇದೀಗ ಮ್ಯಾಸೀವ್ ಸ್ಟಾರ್ ಖಾತೆಯಿಂದ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಗಜರಾಮ. ಟೈಟಲ್ ಹಾಗೂ ಒಂದಷ್ಟು ಝಲಕ್ ಮೂಲಕ ಕುತೂಹಲ ಹೆಚ್ಚಿಸಿರುವ ಗಜರಾಮ ಸಿನಿಮಾದ ಸ್ಪೆಷಲ್ ನಂಬರ್ ರಿಲೀಸ್ ಆಗಿದೆ. ಮೇಕಿಂಗ್ ಹಂತದಲ್ಲಿ ಟಾಕ್ ಕ್ರಿಯೇಟ್ ಮಾಡಿದ್ದ ಸಾರಾಯಿ ಶಾಂತಮ್ಮ ಹಾಡು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ಸಾರಾಯಿ ಶಾಂತಮ್ಮ ಸಾಂಗ್ ಇವೆಂಟ್ ನಲ್ಲಿ ನಟ ರಾಜವರ್ಧನ್, ನಟಿ ರಾಗಿಣಿ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು.

ADVERTISEMENT

ಹಾಡು ಬಿಡುಗಡೆ ಬಳಿಕ ನಟ ರಾಜವರ್ಧನ್ ಮಾತನಾಡಿ, ಈ ಹಾಡಿಗಾಗಿ ತುಂಬಾ ಕಾಯುತ್ತಿದ್ದೇವು. ವಿಡಿಯೋ ಸಾಂಗ್ ತುಂಬಾ ಚೆನ್ನಾಗಿ ಬಂದಿದೆ.ಗಜರಾಮ ಸಿನಿಮಾ ಒಂದು ಕಡೆಯಾದರೆ, ಈ ಸಾಂಗ್ ಒಂದು ಕಡೆ.ಈ ಹಾಡಿಗೆ ಸಾಕಷ್ಟು ಖರ್ಚಾಗಿದೆ. ಸಾಮಾನ್ಯವಾಗಿ ಈ ರೀತಿ ಹಾಡನ್ನು ಮಾಡಲು ಕಷ್ಟ ಆಗುತ್ತದೆ. ಸಾಂಗ್ ತುಂಬಾ ಅದ್ಭುತವಾಗಿ ಬಂದಿದೆ. ಚಿನ್ಮಯಿ ಸರ್ ಒಳ್ಳೆ ಲಿರಿಕ್ಸ್ ಬರೆದುಕೊಟ್ಟರು. ಧನು ಮಾಸ್ಟರ್ ಅದ್ಭುತ ಕೊರಿಯೋಗ್ರಫಿ ಮಾಡಿದ್ದಾರೆ. ನಿರ್ದೇಶಕರು ಸಿನಿಮಾಗಾಗಿ ಸಾಕಷ್ಟು ದುಡಿದಿದ್ದಾರೆ, ಇಡೀ ತಂಡ ಸಾಕಷ್ಟು ಎಫರ್ಟ್ ಹಾಕಿ ಚಿತ್ರವನ್ನು ಚೆನ್ನಾಗಿ ಮಾಡಿದ್ದೇವೆ ಎಂದರು.

ನಟಿ ರಾಗಿಣಿ ಮಾತನಾಡಿ, ಹಬ್ಬದ ದಿನ ಸಂಭ್ರಮ ಇರಬೇಕೆಂದು ತೀರ್ಮಾನ ಮಾಡಿದ್ದೇವೆ. ತುಂಬಾ ಖುಷಿಯಾಗುತ್ತಿದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿರುವ ಖುಷಿ ಇದೆ. 1 ವರ್ಷದಿಂದ ಈ ಚಿತ್ರದಲ್ಲಿ ಜರ್ನಿ ಮಾಡಿಕೊಂಡು ಬರುತ್ತಿದ್ದೇವೆ. ಹಾಡಿನಲ್ಲಿ ರಾಜ್ ತುಂಬಾ ಚೆನ್ನಾಗಿ ಕಾಣಿಸುತ್ತಿದ್ದೀರಾ. ಮನಮಮೂರ್ತಿ ಸರ್ ಇಷ್ಟು ಒಳ್ಳೆ ಮ್ಯೂಸಿಕ್ ಮಾಡುತ್ತಾರೆ ಎಂದುಕೊಂಡಿರಲಿಲ್ಲ. ಈ ಹಾಡು ಕೇಳಿ ಎಲ್ಲರಿಗೂ ಒಂದೊಳ್ಳೆ ಪಾಸಿಟಿವ್ ಬಂದಿದೆ ಎಂದುಕೊಳ್ಳುತ್ತೇನೆ. ಸಿನಿಮಾ ಮಾಡೋದು ತುಂಬಾ ಕಷ್ಟವಾಗಿದೆ. ಬಹಳ ತಾಳ್ಮೆಯಿಂದ, ಹಾರ್ಡವರ್ಕ್ ನಲ್ಲಿ ಸಿನಿಮಾ ಮಾಡುವುದು ಎನ್ನುವುದು ಇದೆಯಲ್ಲಾ ಈ ವಿಚಾರದಲ್ಲಿ ನಿರ್ಮಾಪಕರಿಗೆ ಧನ್ಯವಾದ ತಿಳಿಸಬೇಕು ಎಂದರು.

ಗಜರಾಮ ಸಿನಿಮಾದ ಸಾರಾಯಿ ಶಾಂತಮ್ಮ ಹಾಡಿಗೆ ಚಿನ್ಮಯ್ ಭಾವಿಕೆರೆ ಸಾಹಿತ್ಯ ಬರೆದಿದ್ದು, ಮಂಗ್ಲಿ ಹಾಗೂ ಕುನಲ್ ಗಾಂಜಾವಾಲಾ ಧ್ವನಿಯಾಗಿದ್ದಾರೆ, ಮನೋಮೂರ್ತಿ ರಾಕಿಂಗ್ ಮ್ಯೂಸಿಕ್, ಮ್ಯಾಸೀವ್ ಸ್ಟಾರ್ ರಾಜವರ್ಧನ್ ಹಾಗೂ ಮಾಸ್ ಕ್ವೀನ್ ರಾಗಿಣಿ ದ್ವಿವೇದಿ ಭರ್ಜರಿ ಕುಣಿತ ಹಾಡಿನ ತೂಕ ಹೆಚ್ಚಿಸಿದೆ.ಈ ಸಿನಿಮಾವನ್ನು ಯುವ ನಿರ್ದೇಶಕ ಸುನಿಲ್ ಕುಮಾರ್ ವಿ.ಎ. ನಿರ್ದೇಶನ ಮಾಡುತ್ತಿದ್ದಾರೆ.ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ರಾಜವರ್ಧನ್ ಗೆ ಜೋಡಿಯಾಗಿ ತಪಸ್ವಿನಿ ಬಣ್ಣ ಹಚ್ಚಿದ್ದಾರೆ.ಪೊಲೀಸ್ ಪಾತ್ರದಲ್ಲಿ ದೀಪಕ ನಟಿಸಿದ್ದಾರೆ.ಕಬೀರ್ ಸಿಂಗ್ ಖಳನಾಯಕನ ಪಾತ್ರ ನಿರ್ವಹಿಸಿದ್ದಾರೆ.

ಆಕ್ಷನ್ ಮಾಸ್ ಎಂಟರ್‌ಟೇನರ್ ಆಗಿರುವ ‘ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡುತ್ತಿರುವುದು ವಿಶೇಷ. ಈ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಮಾಡುತ್ತಿದ್ದು, ಜ್ಞಾನೇಶ್ ಬಿ. ಮಠದ್ ಸಂಕಲನದ ಹೊಣೆ ಹೊತ್ತುಕೊಂಡಿದ್ದಾರೆ.ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ.’ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಡಿಸೆಂಬರ್ 27ಕ್ಕೆ ರಾಜಾದ್ಯಂತ ಗಜರಾಮ ಸಿನಿಮಾ ಬಿಡುಗಡೆಯಾಗಲಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actress Raginibond raviChinmay BhavikereGajarama movieMallikarjun Kashi and Xavier Fernandes.photography and Gyanesh B.
Previous Post

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಗದ್ದಲ – ಕೋಲಾಹಲ.!

Next Post

ಅಂಜಿಕೆ ಎನ್ನುವುದು ನಕಾರಾತ್ಮಕವೇನಲ್ಲ

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post

ಅಂಜಿಕೆ ಎನ್ನುವುದು ನಕಾರಾತ್ಮಕವೇನಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada