ರಾಜ್ಯದ ವಿಜಯಪುರ (Vijayapura) ಜಿಲ್ಲೆಯಲ್ಲಿ ವಕ್ಫ್ ಆಸ್ತಿ (Waqf board) ವಿವಾದದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಎದುರು ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ವಿಜಯಪುರ ಜಿಲ್ಲೆಯಲ್ಲಿ ಒಂದು ತಿಂಗಳಿಂದ ರೈತರ ಪಹಣಿಯಲ್ಲಿನ ಕಾಲಂ ನಂಬರ್ 11ರಲ್ಲಿ ವಕ್ಸ್ ಬೋರ್ಡ್ ಎಂದು ನಮೂದಿಸಿದ್ದನ್ನ ರೈತರ ಹೋರಾಟಕ್ಕೆ ಮಣಿದು ಜಿಲ್ಲಾಡಳಿತ ಪಹಣಿಯಲ್ಲಿ ತೆಗೆದು ಹಾಕಿತ್ತು. ಆ ಬಳಿಕ ರೈತರು ಧರಣಿ ಸತ್ಯಾಗ್ರಹ ಕೈಬಿಟ್ಟಿದ್ದರು.
ಇದೀಗ ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ (Cm siddaramaiah) ನಡೆಸಿದ ಸಭೆಯಲ್ಲಿ ರಾಜ್ಯದಲ್ಲಿ ವಕ್ಫ್ ನೋಟಿಸ್ ಹಿಂಪಡೆಯಬೇಕು ಎಂದು ಸೂಚಿಸಿದ್ದು, ಅಹೋರಾತ್ರಿ ಧರಣಿ ನಡೆಸಿದ್ದ ರೈತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.