• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್ ವಿವಾದ:ರಾಜಕೀಯ ಲಾಭದ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆಗೆ ಮುಂದು- ಸಿಎಂ ಸಿದ್ದರಾಮಯ್ಯ.

ಪ್ರತಿಧ್ವನಿ by ಪ್ರತಿಧ್ವನಿ
November 3, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ.

ADVERTISEMENT

ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು.ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಾನು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ.ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ?.

ಜಮೀನಿಗೆ ಸಂಬಂಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ.ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ ಮತ್ತು ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿಯೂ ನೋಟಿಸ್ ನೀಡಲಾಗಿತ್ತು.ಈ ವಿವರಗಳನ್ನು ನನ್ನ ಸಹದ್ಯೋಗಿಗಳಾಗಿರುವ ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ ಮೊದಲಾದವರು ಮಾಧ್ಯಮಗಳಿಗೆ ನೀಡಿದ್ದಾರೆ.

ಬಿಜೆಪಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ ‘‘ವಕ್ಫ್ ಆಸ್ತಿ ಅಲ್ಲಾಹುಗೆ ಸೇರಿದ್ದು, ಆ ಆಸ್ತಿಯನ್ನು ಹಲವರು ಕಬಳಿಸಿದ್ದಾರೆ, ಅದನ್ನು ಒಂದೊಂದು ಇಂಚು ಬಿಡದೆ ವಾಪಸು ಪಡೆಯಬೇಕು, ಇಲ್ಲದೆ ಇದ್ದರೆ ಅಲ್ಲಾಹುವಿನ ದೃಷ್ಟಿಯಲ್ಲಿ ನೀವು ತಪ್ಪಿತಸ್ಥರಾಗುತ್ತಿರಿ’’ ಎಂದು ಹೇಳಿರುವ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ, ಇದು ಬಿಜೆಪಿ ನಾಯಕರ ಅತ್ಮವಂಚನೆಯ ನಡವಳಿಕೆಯನ್ನು ಬಯಲು ಮಾಡಿದೆ.

ರಾಜ್ಯ ಬಿಜೆಪಿಯಲ್ಲಿ ಸರಣಿ ಪಟಾಕಿಗಳಂತೆ ಪ್ರತಿನಿತ್ಯ ಭಿನ್ನಮತ ಸ್ಪೋಟಗೊಳ್ಳುತ್ತಿದೆ.ಪರಸ್ಪರ ಆರೋಪಗಳನ್ನು ಮಾಡುವ ಮೂಲಕ ಈ ಪಕ್ಷದ ನಾಯಕರು ರಾಜ್ಯದ ಜನರ ಎದುರು ಬೆತ್ತಲಾಗುತ್ತಿದ್ದಾರೆ.ಈ ಜಗಳ ಬಗೆಹರಿಸುವ ಯಾವ ಪ್ರಯತ್ನವನ್ನೂ ಮಾಡದ ಅವರ ಪಕ್ಷದ ಹೈಕಮಾಂಡ್ ದೂರ ನಿಂತು ಚಂದ ನೋಡುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡಿನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದ ಹಾಗಿದೆ.ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ನಾಯಕರು ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಎಲ್ಲ ಜಾತಿ ಮತ್ತು ಧರ್ಮದಲ್ಲಿರುವ ಬಡವರು, ರೈತರು, ಮಹಿಳೆಯರು, ಕಾರ್ಮಿಕರು ಫಲಾನುಭವಿಗಳಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ತೆರಿಗೆ ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನದಲ್ಲಿ ಕಡಿತ ಮಾಡಿ ರಾಜ್ಯವನ್ನು ಆರ್ಥಿಕ ಮುಗ್ಗಟ್ಟಿಗೆ ಸಿಕ್ಕಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮಾಡಬೇಕೆನ್ನುವುದು ಬಿಜೆಪಿಯ ಹುನ್ನಾರವಾಗಿದೆ.

Tags: BJPCongress Partyguarantee schemesMedia Release by Chief Minister Siddaramaiah.Prime Minister Narendra Moditax distribution and grants.
Previous Post

ಚಿತ್ರ ನಿರ್ದೇಶಕ ಗುರು ಪ್ರಸಾದ್ ನಿಧನಕ್ಕೆ HD ಕುಮಾರಸ್ವಾಮಿ ಕಂಬನಿ

Next Post

ರಾಜ್ಯಾದ್ಯಂತ ಬರೋಬ್ಬರಿ 47,362 ವಕ್ಫ್ ಆಸ್ತಿ!

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post

ರಾಜ್ಯಾದ್ಯಂತ ಬರೋಬ್ಬರಿ 47,362 ವಕ್ಫ್ ಆಸ್ತಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada