• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಲು ಯಾರಿಗೆ ಇದೆ ಅರ್ಹತೆ..?

ಕೃಷ್ಣ ಮಣಿ by ಕೃಷ್ಣ ಮಣಿ
November 6, 2024
in Top Story, ಕರ್ನಾಟಕ, ರಾಜಕೀಯ, ವಿಡಿಯೋ, ವಿಶೇಷ
0
ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಲು ಯಾರಿಗೆ ಇದೆ ಅರ್ಹತೆ..?
Share on WhatsAppShare on FacebookShare on Telegram

ADVERTISEMENT

ಜೆಡಿಎಸ್​ ಅಪ್ಪ ಮಕ್ಕಳ ಪಕ್ಷ.. ಜೆಡಿಎಸ್​ ಪಕ್ಷದಲ್ಲಿ ತಮ್ಮ ಮನೆಯವರಿಗೆ ಮಾತ್ರವೇ ಟಿಕೆಟ್​ ಕೊಟ್ಟುಕೊಳ್ತಾರೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್​ ನೀಡುವುದಿಲ್ಲ ಎನ್ನುವ ಆರೋಪ, ಸದಾ ಕಾಲ ಕೇಳಿ ಬರುವಂತಹ ಎವರ್​ ಗ್ರೀನ್​ ಆರೋಪ ಅಂದರೆ ಸುಳ್ಳಲ್ಲ. ಆದರೆ ಈ ಬಾರಿ ಜೆಡಿಎಸ್​ ಪಕ್ಷ ಮತ್ತೆ ನಿಖಿಲ್​ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಅಭ್ಯರ್ಥಿ ಆಗಿದ್ದಾರೆ. ಈ ಬಗ್ಗೆ ಸೋಮವಾರ – ಮಂಗಳವಾರ ಶಿಗ್ಗಾವಿಯಲ್ಲಿ ಪ್ರಚಾರ ಮಾಡಿದ ಸಿಎಂ ಸಿದ್ದರಾಮಯ್ಯ ಜೆಡಿಎಸ್​, ಬಿಜೆಪಿ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಾವೇರಿಯ ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿ ಭರತ್​ ಬೊಮ್ಮಾಯಿಗೆ ಟಿಕೆಟ್​ ಘೋಷಣೆ ಮಾಡಿದೆ. ಕುಟುಂಬ ರಾಜಕಾರಣ ವಿರೋಧಿಸುವ ನರೇಂದ್ರ ಮೋದಿ ಅವರಿಗೆ ಇದು ಗೊತ್ತಿಲ್ವಾ..? ಕೇವಲ ಇವರು ಮಾತ್ರವೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕಾ..? ಬೇರೆ ಯಾರು ಇರಲಿಲ್ವಾ ಅಂತಾ ಪ್ರಶ್ನೆ ಮಾಡಿದ್ದಾರೆ. ಇನ್ನು ಜೆಡಿಎಸ್​​ನಿಂದ ನಿಖಿಲ್​ ಕುಮಾರಸ್ವಾಮಿಗೆ ಟಿಕೆಟ್​ ಕೊಟ್ಟಿದ್ದಾರೆ. ಯಾಕೆ ಚನ್ನಪಟ್ಟಣದಲ್ಲಿ ಯಾರೂ ಸಾಮಾನ್ಯ ಕಾರ್ಯಕರ್ತರು ಇರಲಿಲ್ವಾ ಅಂತಾ ಪ್ರಶ್ನೆ ಮಾಡಿದ್ದಾರೆ. ಸತ್ಯ, ಬಿಜೆಪಿ ಹಾಗು ಜೆಡಿಎಸ್​ ಪಕ್ಷಗಳು ತಮ್ಮ ಮಕ್ಕಳಿಗೆ ಮಣೆ ಹಾಕುವ ಬದಲು ಸಾಮಾನ್ಯ ಕಾರ್ಯಕರ್ತರನ್ನು ಅಖಾಡಕ್ಕೆ ಇಳಿಸಿ ಚುನಾವಣೆ ಮಾಡಬಹುದಿತ್ತು.

ಆದರೆ ಈ ಪ್ರಶ್ನೆಯನ್ನು ಸಿಎಂ ಸಿದ್ದರಾಮಯ್ಯ ಕೇಳುವ ಬದಲು ಸಾಮಾನ್ಯ ಜನರು ಹೇಳಿದ್ದರೆ, ಈ ಮಾತಿಗೆ ಇನ್ನಷ್ಟು ಬೆಲೆ ಬರುತ್ತಿತ್ತು. ಯಾಕಂದ್ರೆ ಬಳ್ಳಾರಿಯ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಹಾಲಿ ಸಂಸದರೂ ಆಗಿರುವ ಇ. ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡಿದೆ. ಅಲ್ಲಿ ಬೇರೆ ನಾಯಕರು ಸಾಕಷ್ಟು ಜನರಿದ್ದರೂ ತಮ್ಮ ಪತ್ನಿಗೇ ಟಿಕೆಟ್​ ತೆಗೆದುಕೊಂಡಿರುವುದು ಕುಟುಂಬ ರಾಜಕಾರಣ ಎನಿಸಿಕೊಳ್ಳುವುದಿಲ್ಲವೇ..? ಎನ್ನುವ ಪ್ರಶ್ನೆಗೆ ಕಾಂಗ್ರೆಸ್​ ಕಡೆಯಿಂದ ಉತ್ತರ ಬರುವುದು ಅಸಾಧ್ಯ.

ಅದೇ ರೀತಿ ಉತ್ತರ ಪ್ರದೇಶದಲ್ಲಿ ಸೋಲುವ ಭಯದಲ್ಲಿ ಕೇರಳದ ವಯನಾಡಿಗೆ ಬಂದು ಗೆದ್ದಿದ್ದ ರಾಹುಲ್​ ಗಾಂಧಿ, ಈ ಬಾರಿ ಅಮೇಥಿಯಲ್ಲಿ ಗೆಲುವು ಸಾಧಿಸಿದ ಬಳಿಕ ಕೇರಳದ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ರಾಹುಲ್​ ಗಾಂಧಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದ M.I ಶಹನವಾಜ್ ಅವರಿಗೆ ಯಾಕೆ ಬಿಟ್ಟುಕೊಡಲಿಲ್ಲ..? ತನ್ನ ಸಹೋದರಿ ಪ್ರಿಯಾಂಕಾ ವಾದ್ರಾ ಅವರನ್ನು ಯಾಕೆ ಉತ್ತರ ಪ್ರದೇಶದಿಂದ ಕೇರಳಕ್ಕೆ ಕರೆದುಕೊಂಡು ಬಂದು ಸ್ಪರ್ಧೆ ಮಾಡಿಸಿದ್ದಾರೆ..? ಇದು ಕುಟುಂಬ ರಾಜಕಾರಣ ಅಲ್ಲವೇ..? ಎಂದರೆ ಕಾಂಗ್ರೆಸ್​​ನಿಂದ ಉತ್ತರ ನಿರೀಕ್ಷೆ ತಪ್ಪಾಗುತ್ತದೆ.

ಎಲ್ಲಾ ರಾಜಕಾರಣಿಗಳಿಗೂ ತಮ್ಮ ಮಕ್ಕಳನ್ನು ಒಮ್ಮೆ ರಾಜಕಾರಣಕ್ಕೆ ತರಬೇಕು, ಗೆಲುವಿನ ಮೂಲಕ ಶಾಸನ ಸಭೆಗೆ ಆಯ್ಕೆ ಮಾಡಿ ಕಳುಹಿಸಿದರೆ ಮುಂದಿನ ದಿನಗಳನ್ನು ತಾವು ರೂಪಿಸಿಕೊಳ್ತಾರೆ ಅನ್ನೋ ಹಂಬಲ ಇದ್ದೇ ಇರುತ್ತದೆ. ಸಿಎಂ ಸಿದ್ದರಾಮಯ್ಯ ಹಾಗು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ತಮ್ಮ ರಾಜಕೀಯ ಚತುರತೆಯಿಂದ ಹೊಂದಾಣಿಕೆ ರಾಜಕಾರಣ ಮಾಡಿ ಶಾಸಕ ಸಭೆಗೆ ಕಳುಹಿಸಿದ್ದಾರೆ. ಆದರೆ ಕುಮಾರಸ್ವಾಮಿ ನಿಖಿಲ್​ ಕುಮಾರಸ್ವಾಮಿಯನ್ನು ಒಮ್ಮೆಯಾದರೂ ಆಯ್ಕೆ ಮಾಡಿ ಕಳುಹಿಸುವ ಕನಸು ಕನಸಾಗಿಯೇ ಉಳಿದಿದೆ. ಈ ಬಾರಿ ಆದರೂ ಅವಕಾಶ ಕೊಡಿ ಅಂತಾ ಕಣ್ಣೀರು ಹಾಕುತ್ತಿದ್ದಾರೆ. ಕುಟುಂಬ ರಾಜಕಾರಣ ತಪ್ಪು ಅನ್ನೋದು ಸರಿ. ಆದರೆ ಈ ಬಗ್ಗೆ ಯಾವುದೇ ರಾಜಕಾರಣಿಗಳುನ ಮಾತನಾಡಲು ನೈತಿಕತೆ ಉಳಿಸಿಕೊಂಡಿಲ್ಲ ಅಷ್ಟೆ. ​

Tags: BJPCongress Partydiscussing politics with familyFamilyhow do i talk to family members i don't politically agree with?how to talk politics with familyhow to talk to your familyhow to talk to your family about politicsPoliticstalk about politicstalk showtalk to family about politicstalking politicstalking politics in the officetalking politics in the workplacetalking politics with familythe daily showಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚಾಲನೆ ವೇಳೆ ಹೃದಯಾಘಾತವಾಗಿ ಬಸ್ ಚಾಲಕ ಸಾವು: ಜೀವದ ಹಂಗು ತೊರೆದು ಬಸ್ ನಿಲ್ಲಿಸಿದ ಕಂಡಕ್ಟರ್, ವಿಡಿಯೋ!

Next Post

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬೇವೂರಿನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:

Related Posts

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್
ಇದೀಗ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 13, 2025
0

ಮೈಸೂರು :  ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಶ್ಮಾಮಿತ್ರ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿನೇಶ್ ಗುಂಡೂರಾವ್ ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
Next Post
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬೇವೂರಿನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬೇವೂರಿನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada