ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ನಿಂದಿಸಿರುವ ಘಟನೆ ನಡೆದಿದೆ.

ಮಾಜಿ ಸಿಎಂ ಆಗಿರುವ ಹಾಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಿವಾದಿತ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಕುಮಾರಸ್ವಾಮಿ ವರ್ಣದ ಮೇಲೆ ಟೀಕೆ ಟಿಪ್ಪಣಿ ಮಾಡಿದ್ದಾರೆ.

ಯೋಗೇಶ್ವರ್ ಹೊಗಳುವ ಭರದಲ್ಲಿ ಕರಿಯ ಕುಮಾರಸ್ವಾಮಿ ಎಂದು ಟೀಕೆ ಮಾಡಿದ್ದಾರೆ. ಯೋಗೇಶ್ವರ್ ಕಾಂಗ್ರೆಸ್ ಪಾರ್ಟಿಯಿಂದ ರಾಜಕೀಯ ಪ್ರಾರಂಭ ಮಾಡಿದ್ರು. ಆದರೆ ಕೆಲವು ವ್ಯತ್ಯಾಸಗಳಾಗಿ ಬಿಜೆಪಿ ಹೋದ್ರು. ಯೊಗೇಶ್ವರ್ ಜೆಡಿಎಸ್ಗೆ ಹೋಗಬೇಕು ಅಂತಿದ್ರು. ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ ಜೆಡಿಎಸ್ಗೆ ಹೋಗಲಿಲ್ಲ ಎಂದಿದ್ದಾರೆ.

ಈ ಹಿಂದೆ ಹಿಜಾಬ್ ಬೇಡ ಪಜಾಬ್ ಬೇಡ ಅಂದಿದ್ದಿಯಾ..! ಈಗ ನಿನಗೆ ಮುಸಲ್ಮಾನರ ಓಟ್ ಬೇಕಾ..? ಏ ಕುಮಾರಸ್ವಾಮಿ, ನಿನ್ನ ರೇಟ್ ಹೇಳು.. ಮುಸಲ್ಮಾನರು ಒಂದೊಂದು ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡ್ತಾರೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರಿಂದ ಚಂದಾ ಎತ್ತಿ ಇಡೀ ನಿನ್ನ ಕುಟುಂಬ ಖರೀದಿ ಮಾಡ್ತೇನೆ ಎಂದಿದ್ದಾರೆ.