ರಾಜ್ಯದ ಮೂರು ಉಪಚುನಾವಣೆಗಳ ಪರಿಣಾಮ By election), ಸಿಎಂ ಸ್ಥಾನ, ರಾಜ್ಯ ಸರ್ಕಾರದ ಸ್ಥಿರತೆ, ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷಗಳು ಮೇಲಿಂದ ಮೇಲೆ ವ್ಯಾಪಕ ಟೀಕೆ ಮಾಡುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Cm siddaramaiah) ಶೀಘ್ರವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY vijayendra) ಮತ್ತೊಮ್ಮೆ ಹೇಳಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಈಗ ಅಸಮರ್ಥ ಸರ್ಕಾರ, ಅಸಮರ್ಥ ಮುಖ್ಯಮಂತ್ರಿ ಇದ್ದಾರೆ. ಕೇವಲ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ (Congress government) ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ. ಸಿದ್ದರಾಮಯ್ಯ ಅವರನ್ನು ಅಸಮರ್ಥ ಮುಖ್ಯಮಂತ್ರಿ ಎಂದು ನಾವಷ್ಟೇ ಹೇಳುತ್ತಿಲ್ಲ, ಕಾಂಗ್ರೆಸ್ ಸರ್ಕಾರದ ಶಾಸಕರೇ ಹೇಳುತ್ತಿದ್ದಾರೆ ಎಂದು ಕುಟುಕಿದ್ದಾರೆ.
ಈ ಮುನ್ನ ಸಂಡೂರಿನಲ್ಲಿ ಮಾತನಾಡಿದ್ದ ವಿಜಯೇಂದ್ರ, ಉಪಚುನಾವಣೆಗಳ ನಂತರ ಸಿಎಂ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ್ದರು. ಇದೀಗ ಈಗಾಗಲೇ ಸಿಎಂಗೆ ರಾಜೀನಾಮೆ ನೀಡುವ ಆತಂಕ ಆರಂಭವಾಗಿದೆ ಎಂದಿದ್ದಾರೆ.