• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜನರಿಗೆ ಆರೋಗ್ಯ ಸೇವೆ ಕೊಡಲು ಆಗದಿದ್ದರೆ ರಾಜೀನಾಮೆ ಕೊಡಿ:ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಎಎಪಿ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
November 15, 2024
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ಎಎಪಿ ಸರ್ಕಾರ ದೆಹಲಿಯಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ ನಮ್ಮ ಮೊಹಲ್ಲಾ ಕ್ಲಿನಿಕ್ ಮಾದರಿಯನ್ನು ಅನುಸರಿಸಿ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಹೆಸರಿನಲ್ಲಿ ಆರೋಗ್ಯ ಸೇವೆ ಒದಗಿಸುವ ರಾಜ್ಯ ಸರ್ಕಾರದ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಮೂರು ವರ್ಷಗಳಲ್ಲಿ 500 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿದ್ದರೂ ಜನರಿಗೆ ಅನುಕೂಲವಾಗಿಲ್ಲ, ಆರೋಗ್ಯ ಸೇವೆ ಸುಧಾರಿಸಲು ಆಗದೇ ಇದ್ದರೆ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಡಲಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ ಆಗ್ರಹಿಸಿದ್ದಾರೆ.

ADVERTISEMENT

ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕ್ಲಿನಿಕ್‌ಗಳಲ್ಲಿ ಸರಿಯಾದ ಆರೋಗ್ಯ ಸೇವೆ ಸಿಗುತ್ತಿಲ್ಲ ಎಂದು ಹಲವು ಪತ್ರಿಕೆಗಳು ವರದಿ ಮಾಡಿವೆ. ಕಳೆದ ಏಳು ತಿಂಗಳಿನಲ್ಲಿ ಕನಿಷ್ಠ 10 ಕ್ಲಿನಿಕ್‌ಗಳಲ್ಲಿ ದಿನಕ್ಕೆ ಒಬ್ಬರು ಅಥವಾ ಇಬ್ಬರಿಗೆ ಮಾತ್ರ ಚಿಕಿತ್ಸೆ ಸಿಕ್ಕಿದೆ. 62 ನಮ್ಮ ಕ್ಲಿನಿಕ್‌ಗಳಲ್ಲಿ ದಿನಕ್ಕೆ 10ಕ್ಕಿಂತ ಕಡಿಮೆ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯಿಂದ ಜನರಿಗೆ ಆರೋಗ್ಯ ಸೇವೆ ದೊರೆಯಂತಾಗಿದೆ ಎಂದರು.

ದೆಹಲಿಯಲ್ಲಿ ಕಳೆದ 9 ವರ್ಷಗಳಿಂದ ಎಎಪಿ ಸರ್ಕಾರ ನಡೆಸುತ್ತಿರುವ ಮೊಹಲ್ಲಾ ಕ್ಲಿನಿಕ್‌ಗಳು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿವೆ. ರಾಜ್ಯದಲ್ಲಿ ದೆಹಲಿ ಯೋಜನೆ ಅನುಸರಿಸಿದರೂ, ಗುಣಮಟ್ಟದ ಸೇವೆ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.

2020ರಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಬೆಂಗಳೂರಿನ ಶಾಂತಿ ನಗರದಲ್ಲಿ ಆಮ್ ಆದ್ಮಿ ಕ್ಲಿನಿಕ್ ಸ್ಥಾಪನೆ ಮಾಡಿದೆ. ದೆಹಲಿಯ ಮೊಹಲ್ಲಾ ಕ್ಲಿನಿಕ್‌ನಂತೆ ಈ ಕ್ಲಿನಿಕ್ ಕೂಡ ಜನರಿಗೆ ಉತ್ತಮ ಚಿಕಿತ್ಸೆಯನ್ನು ನೀಡಿದೆ. ಒಂದು ವರ್ಷದಲ್ಲಿ 10,000 ಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ನಗರದಲ್ಲಿ ಇಂತಹ ಕ್ಲಿನಿಕ್‌ಗಳ ಅಗತ್ಯತೆಯನ್ನು ಆಮ್ ಆದ್ಮಿ ಕ್ಲಿನಿಕ್ ತೋರಿಸಿದೆ ಎಂದರು.

ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡೂರಾವ್ ಕೇವಲ ನೂರು ಮತಗಳ ಅಂತರದಿಂದ ಗೆಲುವು ಸಾಧಿಸಿರುವುದಕ್ಕೆ ಅವರಿಗೆ ಆರೋಗ್ಯ ಖಾತೆಯನ್ನು ನೀಡಲಾಗಿದೆ ಎಂದು ತಪ್ಪಾಗಿ ಭಾವಿಸಿಕೊಂಡಂತಿದೆ. ಆರೋಗ್ಯ ಖಾತೆ ಎಷ್ಟು ಮುಖ್ಯವಾದುದು ಎನ್ನುವುದನ್ನು ಅರ್ಥ ಮಾಡಿಕೊಂಡು ನಮ್ಮ ಕ್ಲಿನಿಕ್‌ ವ್ಯವಸ್ಥೆಯನ್ನು ಕೂಡಲೇ ಸುಧಾರಿಸಬೇಕಿದೆ, ರೋಗಿಗಳ ಸಂಖ್ಯೆ ಕಡಿಮೆಯಾಗಲು ಕಾರಣವೇನು ಎನ್ನುವುದನ್ನು ತಿಳಿದು ಜನರಿಗೆ ಆರೋಗ್ಯ ಸೇವೆ ಸಿಗುವಂತೆ ಮಾಡಲಿ ಎಂದು ಒತ್ತಾಯಿಸಿದರು. ಒಂದು ದಿನೇಶ್ ಗುಂಡೂರಾವ್ ಅವರಿಗೆ ಖಾತೆ ನಿಭಾಯಿಸಲು ಇಷ್ಟವಾಗದೇ ಇದ್ದರೆ ರಾಜೀನಾಮೆ ಕೊಡಲಿ ಎಂದರು.

ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ ಮಾತನಾಡಿ, ರಾಜ್ಯಾದ್ಯಂತ 438 ನಮ್ಮ ಕ್ಲಿನಿಕ್‌ಗಳಿದ್ದು ಪ್ರತಿ ಕ್ಲಿನಿಕ್‌ಗೂ ರಾಜ್ಯ ಸರ್ಕಾರ ವರ್ಷಕ್ಕೆ 39 ಲಕ್ಷ ರೂಪಾಯಿ ಹಣ ಬಿಡುಗಡೆ ಮಾಡುತ್ತಿದೆ. ಮೂರು ವರ್ಷಗಳಲ್ಲಿ ನಮ್ಮ ಕ್ಲಿನಿಕ್‌ಗಾಗೊ 500 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದೆ. ಕೋಟಿ ಕೋಟಿ ಹಣ ಖರ್ಚು ಮಾಡಿದರೂ ಎಲ್ಲವೂ ಭ್ರಷ್ಟರ ಪಾಲಾಗುತ್ತಿದ್ದು ರಾಜ್ಯದ ಜನತೆಗೆ ಸರಿಯಾದ ಆರೋಗ್ಯ ಸೇವೆ ಸಿಗುತ್ತಿಲ್ಲ ಎಂದರು.

ಸರ್ಕಾರದ ಬಳಿ ಸಂಬಳ ಕೊಡಲು ಹಣ ಇಲ್ಲದ ಕಾರಣ ಎಂಬಿಬಿಎಸ್ ಮುಗಿಸಿರುವ ಸರ್ಕಾರಿ ಕೋಟಾ ವಿದ್ಯಾರ್ಥಿಗಳು ಕಡ್ಡಾಯವಾಘಿ ಮೂರು ವರ್ಷ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು ಎನ್ನುವ ಹಿಂದಿನ ನೀತಿಯನ್ನು ತೆಗೆದುಹಾಕಿದೆ. ಇದರಿಂದ ನಮ್ಮ ಕ್ಲಿನಿಕ್‌ಗಳಲ್ಲಿ ವೈದ್ಯರಿಲ್ಲದೆ ಪರದಾಡುವ ಸ್ಥಿತಿ ಬಂದಿದೆ. ಈ ಸರ್ಕಾರದ ಬಳಿ ಜನರ ಆರೋಗ್ಯ ಕಾಪಾಡುವ ಸರ್ಕಾರಿ ವೈದ್ಯರಿಗೆ ಸಂಬಳ ಕೂಡ ಕೊಡಲಾಗದ ಮಟ್ಟಕ್ಕೆ ತಲುಪಿದೆಯಾ ಎನ್ನುವುದನ್ನು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕಿದೆ ಎಂದರು.

ಮಾಧ್ಯಮ ಗೋಷ್ಠಿಯಲ್ಲಿ ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

Tags: AAP.BangaloreBJPCongress Partydemands Health Minister Dinesh GunduraoresignState Secretary of Aam Aadmi Party.Usha Mohan
Previous Post

ಶಿಶಿರ್ – ಚೈತ್ರಾ ಪರ್ಫಾರ್ಮೆನ್ಸ್ ನೋಡಿ  ಮಂಜು ಕಣ್ಣೀರು – ಚಾರು ಕೇಳಿದ ಪ್ರಶ್ನೆಗೆ ಶಿಶಿರ್ ಏನಂದ್ರು.!

Next Post

ಕಾಂಗ್ರೆಸ್ ಶಾಸಕರಿಗೆ ತಲಾ ₹50 ಕೋಟಿ ಆಫರ್;ಸಿಎಂ ಹೇಳಿಕೆ ಹಾಸ್ಯಾಸ್ಪದ ಎಂದ HDK

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಕಾಂಗ್ರೆಸ್ ಶಾಸಕರಿಗೆ ತಲಾ ₹50 ಕೋಟಿ ಆಫರ್;ಸಿಎಂ ಹೇಳಿಕೆ ಹಾಸ್ಯಾಸ್ಪದ ಎಂದ HDK

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada