• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉದ್ಯಮಿಗಳಿಂದಾಗಿ ಸಮಾಜಕ್ಕೆ ತಂತ್ರಜ್ಞಾನದ ಲಾಭ :ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
November 21, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಉದ್ಯಮಿಗಳು ಕೇವಲ ವಾಣಿಜ್ಯ ದೃಷ್ಟಿಯ ಲಾಭವನ್ನು ಮಾತ್ರ ನೋಡುತ್ತಿರುವುದಿಲ್ಲ. ತಮ್ಮ ಪರಿಶ್ರಮ ಮತ್ತು ಬದ್ಧತೆಗಳ ಮೂಲಕ ತಂತ್ರಜ್ಞಾನದ ಭವಿಷ್ಯವನ್ನು ಕೂಡ ನಿರ್ಧರಿಸುತ್ತಾರೆ. ಇದರ ಲಾಭ ಕೊನೆಗೆ ಸಮಾಜಕ್ಕೆ ಸಿಗುತ್ತದೆ. ರಾಜ್ಯದಲ್ಲಿ ನೆಲೆಯೂರಿರುವ ಮಾಹಿತಿ ತಂತ್ರಜ್ಞಾನ ವಲಯದ ಕಂಪನಿಗಳು ಈ ನಿಟ್ಟಿನಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಬುಧವಾರ ಅಭಿಪ್ರಾಯಪಟ್ಟರು.

ADVERTISEMENT

ಬೆಂಗಳೂರು ತಂತ್ರಜ್ಞಾನ ಸಮಾವೇಶ’ದಲ್ಲಿ ಅವರು ರಫ್ತು ವಹಿವಾಟಿನಲ್ಲಿ ಗಮನಾರ್ಹ ಸಾಧನೆ ಮಾಡಿರುವ ರಾಜ್ಯದ ವಿವಿಧ ಐಟಿ ಕಂಪನಿಗಳಿಗೆ ಭಾರತೀಯ ಸಾಫ್ಟ್ವೇರ್ ಪಾರ್ಕುಗಳ ಕೂಟ (ಎಸ್.ಟಿ.ಪಿ.ಐ) ನೀಡುವ ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ, ಅತ್ಯುತ್ತಮ ಸಾಧನೆ ಮಾಡಿರುವ ಇನ್ಫೋಸಿಸ್ ಕಂಪನಿಗೆ `ಕರ್ನಾಟಕದ ಐಟಿ ರತ್ನ’ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.

ಎಸ್ ಟಿ ಪಿ ಐ ಏಳು ವರ್ಷಗಳ ಹಿಂದೆಯೇ ರಾಜ್ಯ ಸರಕಾರದ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ `ಸ್ಮಾರ್ಟ್’ (ಸೆಮಿಕಂಡಕ್ಟರ್ ಮೆಷರ್ಮೆಂಟ್ ಅನಾಲಿಸಿಸ್ & ರಿಲೈಯಬಿಲಿಟಿ ಟೆಸ್ಟ್) ತೆರೆದಿದೆ. ಇದರಿಂದ ದೇಶದ ಸೆಮಿಕಂಡಕ್ಟರ್ ಮತ್ತು ಇ ಎಸ್ ಡಿ‌ಎಂ ವಲಯಗಳ ಕಾರ್ಯ ಪರಿಸರ ಸುಧಾರಿಸಿತು. ಜೊತೆಗೆ ನವೋದ್ಯಮಗಳು ಮತ್ತು ಸೆಮಿಕಂಡಕ್ಟರ್ ಕಂಪನಿಗಳು ವಿನ್ಯಾಸವನ್ನು ರೂಪಿಸಲು ತೆಗೆದುಕೊಳ್ಳುತ್ತಿದ್ದ ದೀರ್ಘ ಸಮಯಕ್ಕೆ ತೆರೆ ಬಿತ್ತು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಐಟಿ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಎಸ್ ಟಿ ಪಿ ಐ ಅಧ್ಯಕ್ಷ ಸಂಜಯ್ ತ್ಯಾಗಿ ಮುಂತಾದವರು ಉಪಸ್ಥಿತರಿದ್ದರು.

ಟಿಸಿಎಸ್, ಬಾಷ್, ಇಂಟೆಲ್ ಗೆ ಪ್ರಶಸ್ತಿ:ಇದಲ್ಲದೆ, ಎಸ್ ಟಿ ಪಿ ಐ ರಾಜ್ಯ ರಾಜಧಾನಿಯಲ್ಲಿ ಸಿಒಇ-ಐಒಟಿ ಓಪನ್-ಲ್ಯಾಬ್ ಕೂಡ ಆರಂಭಿಸಿದೆ. ಇದರಡಿಯಲ್ಲಿ 130 ನವೋದ್ಯಮಗಳು ಆಯ್ಕೆಯಾಗಿದ್ದು, ಈಗಾಗಲೇ 67 ಉದ್ಯಮಗಳು ಕಾರ್ಯ ಚಟುವಟಿಕೆ ಆರಂಭಿಸಿವೆ. ಇದು ದೇಶದ ಐಒಟಿ ವಲಯವನ್ನು ಹೊಸ ದಿಕ್ಕಿಗೆ ಕೊಂಡೊಯ್ಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅತ್ಯುತ್ತಮ ಐಟಿ ರಫ್ತು ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಬಾಷ್, ಇಂಟೆಲ್ ಮುಂತಾದವುಗಳಿಗೆ ಎಸ್ ಟಿ ಪಿ ಐ-ಐಟಿ ಪುರಸ್ಕಾರವನ್ನು ಸಚಿವ ಎಂ ಬಿ ಪಾಟೀಲ ಪ್ರದಾನ ಮಾಡಿದರು.ಪ್ರಶಸ್ತಿಗೆ ಪಾತ್ರವಾದ ಕಂಪನಿಗಳಾದ ಅಮೆಜಾನ್ ಡೆವಲಪ್ಮೆಂಟ್ ಸೆಂಟರ್, ಜೆ ಪಿ ಮಾರ್ಗನ್ ಸರ್ವೀಸಸ್, ಗೋಲ್ಡನ್ ಸ್ಯಾಕ್ಸ್, ಸ್ಯಾಮ್ಸಂಗ್ ಆರ್ & ಡಿ, ಕ್ವಾಲ್ಕಾಂ ಇಂಡಿಯಾ, ಸ್ನೀಡರ್ ಎಲೆಕ್ಟ್ರಿಕ್, ಅಲ್ಟ್ರಾನ್ ಟೆಕ್ ಇಂಡಿಯಾ, ಸ್ಯಾಪ್ ಲ್ಯಾಬ್ಸ್, ವಿಎಂವೇರ್ ಸಾಫ್ಟ್ವೇರ್ಸ್, ಆ್ಯಕ್ಸೆಂಚರ್ ಸಲ್ಯೂಷನ್ಸ್ ಪರವಾಗಿ ಅವುಗಳ ಉನ್ನತಾಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದರು.

Tags: Accenture Solutions.Amazon Development CenterbengaluruBoschCongress PartyEntrepreneursGolden SachsInfosysIT exportJP Morgan ServicesJP Morgan.Karnataka's IT Ratna AwardedMinister MB PatilQualcomm IndiaSamsung R&DSAP LabsSchneider ElectricSTPI-ITTechnology benefitsUltron Tech IndiaVMware Software
Previous Post

ಯಾವ ಕ್ಷೇತ್ರದಲ್ಲಿ ಯಾರು ಗೆಲ್ತಾರೆ ?! ಹೊರಬಿತ್ತು ಮೂರು ಕ್ಷೇತ್ರಗಳ ಎಕ್ಸಿಟ್ ಪೋಲ್ ವರದಿ ! 

Next Post

ಚುನಾವಣಾ ಸಮೀಕ್ಷೆಗಳನ್ನು ತಿರಸ್ಕರಿಸಿದ ಕಾಂಗ್ರೆಸ್‌

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post

ಚುನಾವಣಾ ಸಮೀಕ್ಷೆಗಳನ್ನು ತಿರಸ್ಕರಿಸಿದ ಕಾಂಗ್ರೆಸ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada