
ನಾಳೆ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯಲಿದೆ. ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ನಾಳೆ ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಂ ಓಪನ್ ಮಾಡಲಾಗುತ್ತದೆ. 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ 15 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ ಗೆ ಒಬ್ಬ ಎಣಿಕಾ ಮೇಲ್ವಿಚಾರಕ, ಒಬ್ಬರು ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್ವರ್ಸ್ ನಿಯೋಜನೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರದ ಸುತ್ತ 100 ಮೀಟರ್ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಭದ್ರತೆಗಾಗಿ CRPF, CASF, KSRP ಹಾಗೂ ಪೊಲೀಸರನ್ನು ನಿಯೋಜಿಸಲಾಗಿದೆ.

ಹೈ ವೋಲ್ಟೇಜ್ ಕಣ ಎಂದೇ ಗುರುತಿಸಿಕೊಂಡಿರುವ ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ನಾಳೆ ನಡೆಯಲಿದೆ. ರಾಮನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಕ್ಷೇತ್ರದಲ್ಲಿ ಶೇಖಡಾ 88.80ರಷ್ಟು ಮತದಾನವಾಗಿತ್ತು. ಮೂರು ಕೊಠಡಿಗಳಲ್ಲಿ ಮತ ಎಣಿಕೆ ನಡೆಯಲಿದೆ. ಒಟ್ಟು 14 ಟೇಬಲ್, 69 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 20 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.ದೋಸ್ತಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಯೋಗೇಶ್ವರ್ ಮಧ್ಯೆ ಗೆಲ್ಲೋದ್ಯಾರು ಅನ್ನೋ ಕುತೂಹಲ ಮೂಡಿಸಿದೆ.
ಹಾವೇರಿಯ ಶಿಗ್ಗಾವಿ ಕ್ಷೇತ್ತದ ಮತ ಎಣಿಕೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಮಧ್ಯೆ ಜಿದ್ದಾಜಿದ್ದಿನ ಪೈಪೊಟಿ ಏರ್ಪಟ್ಟಿದೆ.. ಇನ್ನು ಕ್ಷೇತ್ರದಲ್ಲಿ ಶೇಖಡ 80.48ರಷ್ಟು ಮತದಾನ ಆಗಿತ್ತು. ಇತ್ತ ಭರತ್ ಬೊಮ್ಮಾಯಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ರೆ, ಯಾಸೀರ್ ಪಠಾಣ್ ಕೂಡಾ ನಾನೇ ಗೆಲ್ತೀನಿ ಅಂತಿದ್ದಾರೆ.ನಾಳೆ ಮತ ಎಣಿಕೆ ನಡೆಯಲಿದ್ದು ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಎಕ್ಸಿಟ್ ಪೋಲ್ ಸುಳ್ಳಾಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಮೂರು ಕ್ಷೇತ್ರದಲ್ಲಿ ಗೆಲ್ಲುವ ಭರವಸೆ ಇದೆ.ಮಹಾರಾಷ್ಟ್ರ ಚುನಾವಣೆಯಲ್ಲೂ ಅಧಿಕಾರಕ್ಕೆ ನಾವೇ ಬರುತ್ತೇವೆ. ಮಾರ್ಜಿನ್ ಇಲ್ಲದೇ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇನ್ನು ಸಿಎಂ ಸಿದ್ದರಾಮಯ್ಯ ಕೂಡ ಮೂರು ಕ್ಷೇತ್ರಗಳನ್ನ ನಾವೇ ಗೆಲ್ತೇವೆ. ನಮ್ಮ ಪರವಾಗಿ ಜನರ ಒಲವಿದೆ. ಚನ್ನಪಟ್ಟಣ ಕೂಡ ನಾವೇ ಗೆಲ್ತೇವೆ ಎಂದಿದ್ದಾರೆ









