• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಡಿಕೇರಿ ಗದ್ದುಗೆ ಪುರಾತತ್ವ ಜಾಗ ಒತ್ತುವರಿ ತೆರವಿಗೆ ಸರ್ಕಾರ ಸೂಚನೆ: ಆತಂಕದಲ್ಲಿ ಹಿಂದೂ-ಮುಸ್ಲಿಂ ಕುಟುಂಬಗಳು

ಪ್ರತಿಧ್ವನಿ by ಪ್ರತಿಧ್ವನಿ
November 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ ;ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕೊಡಗನ್ನು ಆಳ್ವಿಕೆ ಮಾಡಿದ್ದ ಹಾಲೇರಿ ರಾಜವಂಶಸ್ಥರ ಸಮಾಧಿಗಳಿರುವ ಅಂದರೆ ಗದ್ದುಗೆಗಳ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದು, ಅವುಗಳನ್ನು ಕೂಡಲೇ ತೆರವು ಮಾಡಬೇಕು.ಬಳಿಕ ಗದ್ದುಗೆ ಜಾಗವನ್ನು ಸಂರಕ್ಷಿಸಬೇಕು ಎಂದು ಹೈಕೋರ್ಟ್ ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ADVERTISEMENT

ಈ ಗದ್ದುಗೆ ಜಾಗವನ್ನು ಸುಮಾರು 24 ಮುಸ್ಲಿಂ ಮತ್ತು ಎರಡು ಹಿಂದೂ ಕುಟುಂಬಗಳು ಒತ್ತುವರಿ ಮಾಡಿಕೊಂಡಿದ್ದು ಇದು ಕಳೆದ 2.3 ದಶಕಗಳ ಹಿಂದೆಯೇ ಜಾಗ ಒತ್ತುವರಿ ಆಗಿದೆ ಅಲ್ಲದೆ ಇಲ್ಲಿ ಒಂದು ಶಾಲೆ ಕೂಡ ನಡೆಯುತಿದ್ದು ಎಲ್ಲರಿಗೂ ಜಿಲ್ಲಾಡಳಿತ ನೋಟೀಸ್‌ ಜಾರಿ ಗೊಳಿಸಿದೆ.

ಅಂದಿನ ಕೊಡಗು ರಾಜ್ಯವನ್ನು ಆಳ್ವಿಕೆ ಮಾಡಿದ್ದ ಹಾಲೇರಿ ರಾಜವಂಶಸ್ಥರರಾದ ಲಿಂಗರಾಜ ಅರಸು ದೊಡ್ಡವೀರರಾಜೇಂದ್ರ ಮತ್ತು ಅವನ ಪತ್ನಿ ಮಹಾದೇವಿಯಮ್ಮನವರ ಸಮಾಧಿ, ಚಿಕ್ಕವೀರರಾಜೇಂದ್ರನ ತಂದೆ ಲಿಂಗರಾಜೇಂದ್ರನ ಸಮಾಧಿ ಹಾಗೂ ವೀರರಾಜೇಂದ್ರನ ಗುರು ರುದ್ರಪ್ಪನವರ ಸಮಾಧಿಗಳು ಮಡಿಕೇರಿಯಿಂದ ಅಬ್ಬಿಫಾಲ್ಸ್ ಹೋಗುವ ರಸ್ತೆಯಲ್ಲಿ ಇವೆ.

Nikhil on Byelection Result: ಚನ್ನಪಟ್ಟಣದ ಸೋಲಿನ ಕಾರಣಗಳನ್ನ ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ #pratidhvani

ಇವೆಲ್ಲವು ಈಗ ಪುರಾತತ್ವ ಇಲಾಖೆಯ ಸಂರಕ್ಷಿತ ಸ್ಮಾರಕಗಳಾಗಿವೆ. ಇದಕ್ಕೆ ಸಂಬಂಧಿಸಿದಂತೆ ಇಲ್ಲಿ 19.86 ಎಕರೆ ಜಾಗವಿದ್ದು, ಅದರಲ್ಲಿ ಬರೋಬ್ಬರಿ 17 ಎಕರೆಗೂ ಹೆಚ್ಚು ಜಾಗವನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದಾರೆ.ಅಲ್ಲದೆ ಐಟಿಡಿಪಿ ಇಲಾಖೆ ಕೂಡ ಒತ್ತುವರಿ ಮಾಡಿಕೊಂಡು ವಸತಿ ಗೃಹಗಳನ್ನು ನಿರ್ಮಿಸಿದೆ. ಜೊತೆಗೆ ಮಡಿಕೇರಿ ನಗರಸಭೆ ಕೂಡ ಶಾಲೆಯನ್ನು ನಿರ್ಮಿಸಿದೆ. ಹೀಗಾಗಿ 19.86 ಎಕರೆ ಜಾಗದಲ್ಲಿ ಗದ್ದುಗೆಯ ಜಾಗವೆಂದು ಉಳಿದಿರುವುದು ಕೇವಲ 2 ಎಕರೆ ಮಾತ್ರ.

ಒತ್ತುವರಿಯಾಗಿರುವ ಎಲ್ಲಾ ಜಾಗವನ್ನು ತೆರವು ಮಾಡಿ ಐತಿಹಾಸಿಕ ಸ್ಮಾರಕದ ಜಾಗವನ್ನು ರಕ್ಷಿಸಬೇಕು ಎಂದು ಕೊಡಗು ವೀರಶೈವ ಸಮಾಜ ಮತ್ತು ಪರಮಶಿವಯ್ಯ ಎಂಬುವವರು ಕೋರ್ಟ್ ಮೆಟ್ಟಿಲೇರಿದ್ದರು. ಎಲ್ಲವನ್ನೂ ವಿಚಾರಣೆ ಮಾಡಿರುವ ರಾಜ್ಯ ಉಚ್ಛನ್ಯಾಯಾಲಯವು ಎಲ್ಲವನ್ನು ತೆರವು ಮಾಡಿ ಜಾಗವನ್ನು ಸಂರಕ್ಷಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಹೀಗಾಗಿ ರಾಜ್ಯ ಸರ್ಕಾರವು ಕೊಡಗು ಜಿಲ್ಲಾಡಳಿತಕ್ಕೆ ನೊಟೀಸ್ ನೀಡಿದ್ದು ಒತ್ತುವರಿಯಾಗಿರುವ ಎಲ್ಲಾ ಜಾಗವನ್ನು ತೆರವು ಮಾಡಿ ಗದ್ದುಗೆ ಜಾಗವನ್ನು ಸಂರಕ್ಷಿಸುವಂತೆ ಸೂಚಿಸಿದೆ. ನಿನ್ನೆಯಷ್ಟೇ ಆದೇಶ ಮಾಡಲಾಗಿದ್ದು, 15 ದಿನಗಳ ಒಳಗೆ ಕ್ರಮವಹಿಸಿ ವರದಿ ನೀಡುವಂತೆ ಸೂಚಿಸಿದೆ. ಹತ್ತಾರು ವರ್ಷಗಳ ಹಿಂದಿನಿಂದಲೂ ಮನೆಗಳನ್ನು ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿದ್ದ 25 ಕುಟುಂಬಗಳು ಇದೀಗ ಬೀದಿಗೆ ಬರುವ ಆತಂಕ ಎದುರಾಗಿದೆ.

Tags: 24 MuslimDistrict administration actionHaleri royalsKodaguMadikeritwo Hindu familiesvacate land encroachment
Previous Post

ನಟ ಸೂರ್ಯ ಅಭಿನಯದ ನಿರೀಕ್ಷಿತ ಪೌರಾಣಿಕ ಚಿತ್ರ ಕರ್ಣ ಬಜೆಟ್‌ ಕೊರತೆಯಿಂದ ಸ್ಥಗಿತ ?

Next Post

ವಿದ್ಯಾಸಿರಿ ಯೋಜನೆಯಡಿ ನೀಡುವ ಮೊತ್ತ ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಕೆ:ಸಿಎಂ ಸಿದ್ದರಾಮಯ್ಯ

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post

ವಿದ್ಯಾಸಿರಿ ಯೋಜನೆಯಡಿ ನೀಡುವ ಮೊತ್ತ ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಕೆ:ಸಿಎಂ ಸಿದ್ದರಾಮಯ್ಯ

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada