• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
November 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ದರ್ಶನ್‌ಗೆ ಜಾಮೀನು ಕೊಡಿಸಲು ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ಹೈಕೋರ್ಟ್‌ನಲ್ಲಿ ಇಂದು ವಾದ ಮಂಡಿಸಿದ್ದಾರೆ. ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆ ನಾಗೇಶ್ ಪ್ರಸ್ತಾಪಿಸಿದ್ದಾರೆ. ವಿಚಾರಣೆಯನ್ನು ಮತ್ತೆ ನ.29ಕ್ಕೆ ಮುಂದೂಡಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ವಾದವನ್ನು ಆಲಿಸಿದ ನ್ಯಾ.ವಿಶ್ವಜೀತ್‌ ಶೆಟ್ಟಿ ಅವರು, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ್ದಾರೆ.

ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಗುರುವಾರ (ನ.28 ರಂದು) ಹೈಕೋರ್ಟ್‌ನ ಏಕಸದಸ್ಯ ಪೀಠದಲ್ಲಿ ನಡೆದಿದೆ.ದರ್ಶನ್‌ ಪರ ಹಿರಿಯ ವಕೀಲ ಸಿ.ವಿ ನಾಗೇಶ್‌ ಹಿಂದಿನಂತೆಯೇ ಈ ಸಲಿಯೂ ಪ್ರಬಲ ಅಂಶವನ್ನು ಮುಂದಿಟ್ಟುಕೊಂಡು ವಾದವನ್ನು ಮುಂದುವರೆಸಿದ್ದಾರೆ.

ರೇಣುಕಾಸ್ವಾಮಿಯನ್ನು ಬಲವಂತವಾಗಿ ಕಿಡ್ನ್ಯಾಪ್‌ ಮಾಡಿಲ್ಲ. ಕೊಲೆ ಮಾಡುವ ಉದ್ದೇಶದಿಂದ ಆತನ ಅಪಹರಣ ನಡೆದಿಲ್ಲ. ಆತನೇ ಬಾರ್‌ವವೊಂದಕ್ಕೆ ಹಣ ಪಾವತಿಸಿದ್ದಾನೆ. ಹಾಗಾಗಿ ಇದನ್ನು ಒತ್ತಾಯಪೂರ್ವಕವಾಗಿ ನಡೆದ ಅಪಹರಣವೆಂದು ಹೇಳಲ್ಲು ಆಗುವುದಿಲ್ಲ. ದರ್ಶನ್‌ ಬಟ್ಟೆಯ ಮೇಲೆ ರಕ್ತದ ಕಲೆ ಇದೆ ಎಂದಿದ್ದಾರೆ. ಆದರೆ ಅದನ್ನು ಸರ್ಫ್‌ನಲ್ಲಿ ಹಾಕಿ ಕುಕ್ಕಿ ಕುಕ್ಕಿ ಒಗೆದಿದ್ದಾರೆ. ಹೀಗೆ ಮಾಡಿದರೆ ರಕ್ತದ ಕಲೆ ಇರುವುದು ಹೇಗೆ? ಎನ್ನುವ ಕೆಲ ಪ್ರಬಲ ಅಂಶಗಳನ್ನಿಟ್ಟುಕೊಂಡು ಈ ಹಿಂದಿನ ವಾದದಲ್ಲಿ ನಾಗೇಶ್‌ ಉಲ್ಲೇಖಿಸಿದ್ದರು.

ಗುರುವಾರ ಕೂಡ ಇದೇ ರೀತಿಯ ಅಂಶಗಳೊಂದಿಗೆ ವಾದವನ್ನು ಮುಂದುವರೆಸಿದ್ದಾರೆ.ಪ್ರಾಸಿಕ್ಯೂಷನ್‌ನವರು ನರೇಂದ್ರ ಸಿಂಗ್‌, ಮಲ್ಲಿಕಾರ್ಜುನ, ವಿಜಯ್‌ ಕುಮಾರ್‌ ಸೇರಿ 6 ಜನರನ್ನು ಪ್ರತ್ಯಕ್ಷದರ್ಶಿಗಳೆಂದು ಹೆಸರಿಸಿದ್ದಾರೆ. ನರೇಂದ್ರ ಸಿಂಗ್‌ ನ ಸಿಆರ್‌ ಪಿಸಿ 164ರ ಅಡಿ ಹೇಳಿಕೆ ದಾಖಲಿಸಿದ್ದಾರೆ. ಈತ ಹಲ್ಲೆಯ ಬಗ್ಗೆ ಏನನ್ನೂ ಹೇಳಿಲ್ಲ. 164ರ ಹೇಳಿಕೆಗೆ 161ರ ಹೇಳಿಕೆಗಿಂತ ಹೆಚ್ಚಿನ ಮೌಲ್ಯವಿದೆ.

ಪ್ರತ್ಯಕ್ಷದರ್ಶಿ ಮಧುಸೂದನ್ ಹೇಳಿಕೆಯನ್ನ ಇಲ್ಲಿ ಉಲ್ಲೇಖಿಸಿದ್ದಾರೆ. ಕೆಲವು ಕಾರು ಬರುತ್ತವೆ. ಅದರಲ್ಲಿ ದರ್ಶನ್ ಸರ್ ಇರ್ತಾರೆ. ಅಲ್ಲಿಗೆ ಹೋಗ್ಬೇಡಿ ಎಂದಿದ್ದೆ. ನಂತರ ಸಂಜೆ‌ ಮನೆಗೆ ಹೋಗಿದ್ದೆ ಎಂದು ಮಧುಸೂದನ್ ಹೇಳಿಕೆ ನೀಡಿದ್ದಾರೆ. ಕೊಲೆಯಾದ ಬಗ್ಗೆ 10ನೇ ತಾರೀಕು ಮೊಬೈಲ್ ನಲ್ಲಿ ನೋಡಿಯೇ ತಿಳಿದುಕೊಂಡೆ ಎಂದು ಅವರು ಹೇಳಿದ್ದಾರೆ ಎಂದು ನಾಗೇಶ್‌ ವಾದದಲ್ಲಿ ಉಲ್ಲೇಖಿಸಿದ್ದಾರೆ.

ಈ ವೇಳೆ ಜಡ್ಜ್‌ ವಿಶ್ವಜಿತ್‌ ದರ್ಶನ್‌ ಆರೋಗ್ಯ ಸ್ಥಿತಿಯ ಬಗ್ಗೆ ಕೇಳಿದ್ದಾರೆ. ಎಂಆರ್‌ ಐ ಸ್ಕ್ಯಾನ್‌ ಆಗಿದೆ. ಬಿಪಿ ವ್ಯತ್ಯಾಸವಾಗುತ್ತಿದೆ. ಅದು ಸರಿಯಾದ ಬಳಿಕವಷ್ಟೇ ಮುಂದಿನ ಚಿಕಿತ್ಸೆ. ಈ ಕಾರಣದಿಂದ ಸರ್ಜರಿ ವಿಳಂಬವಾಗುತ್ತಿದೆ ಎಂದು ನಾಗೇಶ್‌ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ.

ದರ್ಶನ್‌ ಮ್ಯಾನೇಜರ್‌ ನಾಗರಾಜು ಪರ ವಕೀಲರು ವಾದ ಮಂಡಸಿದ್ದಾರೆ.ವಿಚಾರಣೆಯನ್ನು ಶುಕ್ರವಾರ(ನ.29) ಕ್ಕೆ ನ್ಯಾಯಾಧೀಶರು ಮುಂದೂಡಿದ್ದಾರೆ.

ದರ್ಶನ್‌ ಅವರಿಗೆ ಸದ್ಯ ಅನಾರೋಗ್ಯ ಕಾರಣದಿಂದ ಮಧ್ಯಂತರ ಜಾಮೀನು ನೀಡಲಾಗಿದೆ. ಅವರು ಖಾಸಗಿ ಆಸ್ಪತ್ರೆಯಲ್ಲಿ ಬೆನ್ನುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಜರಿ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಆದರೆ ಇದುವರೆಗೆ ಸರ್ಜರಿ ಮಾಡಿಸಿಕೊಂಡಿಲ್ಲ.

Tags: actor darshan arrested in murder caseActor Darshan Bailbail to Darshanhigh courtJustice Vishwajeet ShettyNovember 29.Senior lawyer CV Nagesh
Previous Post

ಮುಹೂರ್ತ ನೆರವೇರಿಸಿದ ಯುವರಾಜ್‌ ಕುಮಾರ್‌ ಬಹು ನಿರೀಕ್ಷಿತ ಚಿತ್ರ “ಎಕ್ಕ”

Next Post

ಕ್ಯಾಪ್ಟನ್ಸಿ ಓಟದಿಂದ ಹೊರಗುಳಿದ ಸ್ಪರ್ಧಿಗಳು ಯಾರು? ಮಹಾರಾಜ ಅಲ್ಲ ರೋಗಿಷ್ಟರಾಜ ಮಂಜು.!

Related Posts

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
0

https://youtu.be/FH4phfSAt_4

Read moreDetails

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025
Next Post
ಕ್ಯಾಪ್ಟನ್ಸಿ ಓಟದಿಂದ ಹೊರಗುಳಿದ ಸ್ಪರ್ಧಿಗಳು ಯಾರು? ಮಹಾರಾಜ ಅಲ್ಲ ರೋಗಿಷ್ಟರಾಜ ಮಂಜು.!

ಕ್ಯಾಪ್ಟನ್ಸಿ ಓಟದಿಂದ ಹೊರಗುಳಿದ ಸ್ಪರ್ಧಿಗಳು ಯಾರು? ಮಹಾರಾಜ ಅಲ್ಲ ರೋಗಿಷ್ಟರಾಜ ಮಂಜು.!

Recent News

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

July 31, 2025

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada