ಭ್ರಷ್ಟಾಚಾರ ಆರೋಪದ ಕೇಸ್ ನಲ್ಲಿ ಮಾಜಿ ಮುಖ್ಯಮಂತ್ರಿ BS ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. BSY ವಿರುದ್ಧ ಸಾಮಾಜಿಕ ಕಾರ್ಯಕರ್ತ TJ ಅಬ್ರಹಾಂ ಸಲ್ಲಿಸಿದ್ದ ಭ್ರಷ್ಟಾಚಾರ ಆರೋಪದ ದೂರಿನ ಬಗ್ಗೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದ್ದರು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ TJ ಅಬ್ರಹಾಂ ಆಗ್ರಹದಂತೆ ಬಿ.ಎಸ್.ಯಡಿಯೂರಪ್ಪ ಮೇಲಿನ ಆರೋಪದಲ್ಲಿ , ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿಸಿದ್ದು, ಮತ್ತೆ ಅವರ ಮೇಲೆ ಒತ್ತಡ ತಂತ್ರ ಹೇರಲು ಸರ್ಕಾರ ತೀರ್ಮಾನಿಸಿದೆ. ಇದು ಬಿಎಸ್ ವೈ ಗೆ ಟೆನ್ಶನ್ ಹೆಚ್ಚಿಸಿದೆ.