
ಹಾಸನದಲ್ಲಿ (CM Siddaramaiah)ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಹಿಂದುಳಿದ ವರ್ಗಗಳು ಆಯೋಜಿಸಿದ್ದ ಸ್ವಾಭಿಮಾನಿ ಸಮಾವೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (KPCC President DK Shivakumar)ಹೈಜಾಕ್ (Hijack)ಮಾಡಿದ್ದಾರೆ.ಕಾಂಗ್ರೆಸ್ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮದ ಪೂರ್ವ ತಯಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಅರಸೀಕೆರೆ ರಸ್ತೆಯ ಕೃಷ್ಣಾ ನಗರದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.

ಡಿಸೆಂಬರ್ 5 ರಂದು ಹಾಸನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ಮೊದಲು ಸ್ವಾಭಿಮಾನಿ ಸಮಾವೇಶ ಎಂಬ ಹೆಸರಿನಿಂದ ಪ್ರಾರಂಭವಾಗಿತ್ತು. ಇದೀಗ ಕಾಂಗ್ರೆಸ್ ಕಾರ್ಯಕ್ರಮವಾಗಿ ಪರಿವರ್ತಿಸಿರುವ ಕಾಂಗ್ರೆಸ್ ಹೈಕಮಾಂಡ್, ಕಾಂಗ್ರೆಸ್ ಆಶ್ರಯದಲ್ಲಿ ಜನಕಲ್ಯಾಣ ಸಮಾವೇಶ ಎಂಬ ಹೆಸರಿನಲ್ಲಿ ಆಯೋಜನೆ ಮಾಡಲು ಸೂಚನೆ ಕೊಟ್ಟಿದೆ.
ಹಾಸನದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿ-ಜೆಡಿಎಸ್ ಸ್ನೇಹಿತರು ಟೀಕೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ನಾನು ಅವರಿಗೆ ಉತ್ತರಿಸಿದೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಅಂತಾ. ಈಗ ಟೀಕೆಯೆಲ್ಲ ಸತ್ತೋಗಿ ನಮ್ಮ ಮತದಾರರು ಮೂರು ಕ್ಷೇತ್ರಗಳಲ್ಲೂ ಏನೂ ತೀರ್ಪು ಕೊಡಬೇಕು ಕೊಟ್ಟಿದ್ದಾರೆ. ಮತದಾರರೇ ದೇವರುಗಳು ಅವರ ಕೊಟ್ಟ ತೀರ್ಪಿಗೆ ತಲೆಗೆ ಬಾಗುತ್ತೇವೆ ಎಂದಿದ್ದಾರೆ.
ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಮುಖಂಡತ್ವದಲ್ಲಿ ಈ ಸಮಾವೇಶ ನಡೆಯುತ್ತಿದೆ. ನಮ್ಮ ಹಿತೈಷಿಗಳು ಸ್ವಾಭಿಮಾನಿಗಳ ಒಕ್ಕೂಗಳು ಸಿಎಂ ಕೆಲಸ ಮೆಚ್ಚಿ ಸಿಎಂ ಜೊತೆ ಇದ್ದೇವೆ ಎಂದು ಗುರುತಿಸಿಕೊಂಡಿದ್ದಾರೆ. ಬೆಂಬಲ ನೀಡಿದ್ದಾರೆ. ಒಬ್ಬ ಇರಲಿ ಒಂದು ಲಕ್ಷ ಜನ ಇರಲಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇದು ಜನಕಲ್ಯಾಣ ಸಮಾವೇಶ, ಜನತೆಗೋಸ್ಕರ, ಜನರ ಕಲ್ಯಾಣಕ್ಕಾಗಿ ಸಮಾವೇಶ ಮಾಡುತ್ತಿದ್ದೇವೆ ಎಂದಿದ್ದಾರೆ.
ಕಳೆದ ಇಪ್ಪತ್ತೈದು ವರ್ಷಗಳಿಂದ ಹಾಸನದಲ್ಲಿ ಕಾಂಗ್ರೆಸ್ ಸಂಸದ ಇರಲಿಲ್ಲ. ಈಗ ಲೋಕಸಭಾ ಸದಸ್ಯರನ್ನು ಕೊಟ್ಟಿದ್ದಾರೆ. ಮುಂದೆ ಲೋಕಲ್ ಬಾಡಿ ಎಲೆಕ್ಷನ್ ಬರ್ತಿದೆ. 2028ಕ್ಕೆ ವಿಧಾನ ಸಭೆ ಚುನಾವಣೆ ಬರುತ್ತದೆ. ಲೋಕಸಭಾ ಚುನಾವಣೆ ವೇಳೆ ಹಾಸನದ ಬಹಳ ಕುಟುಂಬಗಳು ನೋವು ಕಂಡಿದ್ದಾರೆ. ಇಡೀ ದೇಶದಾದ್ಯಂತ ಚರ್ಚೆ ನಡೆದಿದೆ. ಅವರಿಗೆ ಧೈರ್ಯ ಹೇಳಲು ಸಮಾವೇಶ ಹಮ್ಮಿಕೊಂಡಿದ್ದೇನೆ. ನನ್ನ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯುತ್ತದೆ ಎಂದಿದ್ದಾರೆ.