• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಲಜೀವನ್‌ ಮೆಷಿನ್‌ ಕಾಮಗಾರಿಗಳಲ್ಲಿ ಲೋಪವಾಗದಂತೆ ಎಚ್ಚರವಹಿಸಲು ಸೂಚನೆ: ಸಚಿವ ಪ್ರಿಯಾಂಕ್‌ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
December 3, 2024
in Top Story, ಅಂಕಣ, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಗ್ರಾಮ ಪಂಚಾಯತಿಗಳ ಆಸ್ತಿ ತೆರಿಗೆ ಸಂಗ್ರಹಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಮೂಲಕ ಈ ತಿಂಗಳಾಂತ್ಯದೊಳಗೆ ನಿಗದಿತ ಗುರಿಯನ್ನು ಸಾಧಿಸಲು ಮುಂದಾಗಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ (Priyanka Kharge) ಅಧಿಕಾರಿಗಳಿಗೆ ಸೂಚಿಸಿದರು. ಪಂಚಾಯತಿಗಳ ಅಭಿವೃದ್ಧಿಯ ದೃಷ್ಟಿಯಿಂದ ಗ್ರಾಮ ಪಂಚಾಯತಿಗಳ ತೆರಿಗೆಯನ್ನು ಸಮರ್ಪವಾಗಿ ಸಂಗ್ರಹಿಸುವ ಅನಿವಾರ್ಯತೆ ಇದೆ ಎಂದೂ ಸಚಿವರು ಹೇಳಿದರು. ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ತಿಂಗಳಿಗೊಮ್ಮೆ ತೆರಿಗೆ ಸಂಗ್ರಹ ಸಲುವಾಗಿಯೇ ಸಭೆ ನಡೆಸಬೇಕೆಂದು ಸಚಿವರು ಸೂಚಿಸಿದರಲ್ಲದೆ, ಆದ್ಯತಾ ಕೆಲಸಗಳತ್ತ ವಿಶೇಷ ಗಮನ ನೀಡುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಸದೃಢಗೊಳಿಸಬೇಕೆಂದು ಹೇಳಿದರು.

ADVERTISEMENT

ಸಚಿವರು ಇಂದು ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಮ್ಮೇಳನ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪ್ರಗತಿ ವಿಮರ್ಶಿಸಿದರು.

Nirmala Sitharaman: ಸಂಸತ್‌ನಲ್ಲಿ ಸೀತಾರಾಮನ್ ಭಾಷಣದ ವೇಳೆ ವಿಪಕ್ಷಗಳ ಗದ್ದಲ..! #priyankagandhi #mp

ಗ್ರಾಮಸಭೆಗಳನ್ನು ನಡೆಸುವಲ್ಲಿ ಕೆಲವು ಗ್ರಾಮ ಪಂಚಾಯತಿಗಳು ಆಸಕ್ತಿ ತೋರದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಸಚಿವರು ಸೋಷಿಯಲ್‌ ಆಡಿಟ್‌ ಆಗದೆ ಅನುದಾನ ನಿರೀಕ್ಷಿಸಲು ಸಾಧ್ಯವಿಲ್ಲ, ಇದರಿಂದ ಗ್ರಾಮಗಳ ಅಭಿವೃದ್ಧಿಗೆ ತೊಂದರೆಯಾಗುತ್ತದೆ ಎಂದು ಹೇಳಿದ ಸಚಿವರು ಗ್ರಾಮಸಭೆಗಳನ್ನು ನಡೆಸಲು ಸೂಕ್ತ ನಿರ್ದೇಶನ ನೀಡಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಜಲಜೀವನ್‌ ಮಿಷನ್‌ ಕಾರ್ಯಕ್ರಮದಡಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆವಹಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು. ಕಳಪೆ ಸಾಮಗ್ರಿಗಳ ಬಳಕೆ ಮಾಡದಂತೆ ಹಾಗೂ ಗುಣಮಟ್ಟವಿಲ್ಲದ ಕಾಮಗಾರಿಗಳು ನಡೆಯದಂತೆ ತಡೆಯಬೇಕೆಂದು ಸಚಿವರು ಹೇಳಿದರಲ್ಲದೆ, ಗ್ರಾಮೀಣ ಜನರ ಮನೆ ಮನೆಗೆ ನೀರು ತಲುಪಿಸುವ ಈ ಯೋಜನೆಯಲ್ಲಿ ಸರ್ಕಾರದ ಹಣ ಸಮರ್ಪವಾಗಿ ಬಳಕೆಯಾಗುವಂತೆ ಎಚ್ಚರವಹಿಸಬೇಕಾಗಿರುವುದು ಅಧಿಕಾರಿಗಳ ಹೊಣೆಗಾರಿಕೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ಸರ್ಕಾರ ಈ ವರ್ಷದ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಘೋಷಿಸಿದ ಕಲ್ಯಾಣಪಥ ಯೋಜನೆಯನ್ನು ಈ ತಿಂಗಳು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದಾರೆ ಎಂದೂ ಸಚಿವರು ಸಭೆಯಲ್ಲಿ ಪ್ರಕಟಿಸಿದರು.

ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಕಚೇರಿ ಸೂಚಿಸಿರುವ ಮಾನದಂಡಗಳಂತೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕೆಂದು ನಿರ್ದೇಶನ ನೀಡಿದ ಸಚಿವರು ಮಾನದಂಡಗಳನ್ನು ಬದಲಿಸಿ ಕಾಮಗಾರಿಗಳನ್ನು ಕೈಗೊಳ್ಳುವ ಎಂಜನಿಯರುಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.

ಈಚೆಗೆ ಬೆಂಗಳೂರಿನಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಅಧಿಕಾರಿಗಳ ರಾಜ್ಯ ಮಟ್ಟದ ಶೃಂಗಸಭೆಯಲ್ಲಿ ಪಂಚಸೂತ್ರಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸಲು ಸೂಚಿಸಲಾಗಿತ್ತು, ಅದರಂತೆ ಜಿಲ್ಲಾ ಮಟ್ಟದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಜಿಲ್ಲೆಯ 19 ಗ್ರಾಮ ಪಂಚಾಯತಿಗಳನ್ನು ದತ್ತು ಪಡೆದು ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ಹಾಕಿಕೊಳ್ಳಲು ಸೂಚಿಸಲಾಗಿತ್ತು, ಈ ಬಗ್ಗೆ ಯಾವುದೇ ಕ್ರಮ ಆಗಿಲ್ಲ ಎಂಬುದನ್ನು ನೆನಪಿಸಿದ ಸಚಿವರು ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

Tags: BJPCongress PartyMallikarjun KhargePriyank Khargepriyank kharge audiopriyank kharge interviewpriyank kharge latest newspriyank kharge newspriyank kharge on bjppriyank kharge on modipriyank kharge on pm modipriyank kharge press meetpriyank kharge speechpriyank kharge statementpriyank kharge today newspriyank kharge todays newspriyank kharge todays speechpriyank kharge updatespriyank kharge videopriyank kharge vs bjpPriyanka Khargeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್, ಎನ್. ಚಲುವರಾಯಸ್ವಾಮಿ..

Next Post

ಟೈಗರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ‘ಬಲರಾಮನ ದಿನಗಳು’ ಚಿತ್ರದ ಫಸ್ಟ್ ಲುಕ್,

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

ಟೈಗರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು 'ಬಲರಾಮನ ದಿನಗಳು’ ಚಿತ್ರದ ಫಸ್ಟ್ ಲುಕ್,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada