• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಡೆದ ಮಡಿಕೆಯನ್ನು ಮತ್ತೆ ರೆಡಿ ಮಾಡ್ತಾರಾ ಬಿಜೆಪಿ ನಾಯಕರು..?

ಪ್ರತಿಧ್ವನಿ by ಪ್ರತಿಧ್ವನಿ
December 4, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗು ಬಸನಗೌಡ ಪಾಟೀಲ್‌ ಯತ್ನಾಳ್‌ ನಡುವಿನ ಮಾತಿನ ಸಮರ ತಾರಕಕ್ಕೇರಿದೆ.. ಉಭಯ ನಾಯಕರ ನಡುವಿನ ಮಾತಿನ ಸಮರ ಬಿಜೆಪಿ ಹೈಕಮಾಂಡ್‌‌ ಪಾಲಿಗೆ ಬಿಸಿತುಪ್ಪ ಆಗಿದ್ದು, ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್‌ ಹಾಕಲು ಸರ್ಕಸ್‌ ಮಾಡುತ್ತಿದೆ. ಸಂಧಾನ ಮಾಡಲು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್‌ ಅವರನ್ನು ಬೆಂಗಳೂರಿಗೆ ಕಳುಹಿಸಿದೆ. ಇನ್ನೊಂದು ಕಡೆ ದೆಹಲಿಯಲ್ಲಿ ಯತ್ನಾಳ್‌ ಟೀಂ ಬೀಡುಬಿಟ್ಟಿದೆ.. ಆದರೆ ಯಾರ ಮಾತಿಗೂ ಬ್ರೇಕ್‌ ಬೀಳುವ ಲಕ್ಷಣ ಕಾಣಿಸ್ತಿಲ್ಲ. ಬೆಂಗಳೂರಿನಲ್ಲಿ ತರುಣ್‌ ಚುಗ್‌‌ ಎದುರಲ್ಲೇ ಯತ್ನಾಳ್‌ ಉಚ್ಛಾಟನೆಗೆ ಆಗ್ರಹಿಸಿದ್ರೆ, ಅತ್ತ ದಿಲ್ಲಿಯಲ್ಲಿರುವ ಯತ್ನಾಳ್‌ ಟೀಂ ವಿಜಯೇಂದ್ರ ಉಚ್ಛಾಟನೆಗೆ ಆಗ್ರಹ ಮಾಡಿದೆ.

ADVERTISEMENT

ರಾಜ್ಯ ಬಿಜೆಪಿಯ ಪರಿಸ್ಥಿತಿ ಒಡೆದ ಮಡಿಕೆ ಎನ್ನುವಂತಾಗಿದೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್​ ಬಿಜೆಪಿಯ ಸಂಘಟನಾ ಸಭೆ ಮಾಡಿದ್ದಾರೆ. ಈ ವೇಳೆ ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಬೇಕು ಎಂದು ಹಾಲಿ, ಮಾಜಿ ಶಾಸಕರು ಒತ್ತಾಯ ಮಾಡಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿಯ ಎಲ್ಲಾ ಜಿಲ್ಲಾಧ್ಯಕ್ಷರು ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಬೇಕು ಎಂದು ತರುಣ್‌ ಚುಗ್‌ಗೆ ಮನವಿ ಪತ್ರ ನೀಡಿದ್ದಾರೆ. ನಿನ್ನು ಯತ್ನಾಳ್‌ ಟೀಂ ಇಡೀ ಪಕ್ಷ ಸಂಘಟನೆಗೆ ಅಡ್ಡಿ ಮಾಡುತ್ತಿದೆ ಎಂದು ದೆಹಲಿ ನಾಯಕರಿಗೆ ಚುಗ್‌ ಮೂಲಕ ಪತ್ರ ನೀಡಿದ್ದಾರೆ. ಅತ್ತ ದೆಹಲಿಯಲ್ಲಿರುವ ಯತ್ನಾಳ್‌ ಟೀಂಕೂಡ ವಿಜಯೇಂದ್ರ ವಿರುದ್ಧ ಭರ್ಜರಿ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ.

ವಿಜಯೇಂದ್ರ ಕಾಂಗ್ರೆಸ್‌‌ ಸರ್ಕಾರ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ವಿಜಯೇಂದ್ರ ಸರ್ಕಾರದ ವಿರುದ್ಧ ಆಕ್ರಮಣಕಾರಿ ಹೋರಾಟ ಮಾಡ್ತಿಲ್ಲ. ಉಪ ಚುನಾವಣೆ ಸೋಲಿಗೆ ವಿಜಯೇಂದ್ರ ಹಾಗೂ ಯಡಿಯೂರಪ್ಪನವೇ ಕಾರಣ ಎಂದು ಆರೋಪಿಸಿದೆ. ಇನ್ನು ವಿಜಯೇಂದ್ರ ಏಕಪಕ್ಷೀಯ ನಿರ್ಧಾರ ಮಾಡುತ್ತಿದ್ದಾರೆ. ಹಿರಿಯರನ್ನ ಪಕ್ಷದಲ್ಲಿ ಕಡೆಗಣನೆ ಮಾಡಲಾಗುತ್ತಿದೆ. ಯಡಿಯೂರಪ್ಪ, ವಿಜಯೇಂದ್ರ ಆಪ್ತರಿಗೆ ಮಾತ್ರ ಪಕ್ಷದಲ್ಲಿ ಆದ್ಯತೆ ನೀಡಲಾಗುತ್ತಿದೆ. ವಿಜಯೇಂದ್ರ ಅಧಿಕಾರಕ್ಕೆ ಬ್ರೇಕ್ ಹಾಕಿ, ರಾಜ್ಯಾಧ್ಯಕ್ಷರನ್ನು ಕೂಡಲೇ ಬದಲಾವಣೆ ಮಾಡಿ ಅಂತ ಯತ್ನಾಳ್ ಟೀಂ ಮನವಿ ಮಾಡಲು ಸಿದ್ಧವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯವೈಖರಿ ವಿರುದ್ಧ ಪತ್ರ ರವಾನೆ ಆಗಿದ್ದು, ವಿಜಯೇಂದ್ರ ವಿರುದ್ಧ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್, ಪ್ರಧಾನಿ ನರೇಂದ್ರ ಮೋದಿ, ಬಿ.ಎಲ್ ಸಂತೋಷ್​ಗೆ ಪತ್ರ ಬರೆಯಲಾಗಿದೆ.ಬಿಜೆಪಿ ಸದಸ್ಯರ ಗುಂಪು ಎಂದು ಹೇಳಿಕೊಂಡಿರುವ ಪತ್ರ ವೈರಲ್ ಆಗಿದೆ.ಎರಡೂ ಬಣವನ್ನು ಒಂದು ಮಾಡುವ ಹೈಕಮಾಂಡ್‌ ಯೋಜನೆ ಯಶಸ್ಸು ಕಾನುವುದು ಅಷ್ಟು ಸುಲಭದ ಮಾತಲ್ಲ. ಇನ್ನು ಯಾವುದೇ ಬಣದ ಮೇಲೆ ಕ್ರಮ ತೆಗೆದುಕೊಂಡರೂ ಪಕ್ಷಕ್ಕೆ ಸಮಸ್ಯೆ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.ಯಾವ ಟೀಂ ವಿರುದ್ಧ ಕ್ರಮ ಎಷ್ಟರ ಪ್ರಮಾಣದಲ್ಲಿ ಪರಿಣಾಮ ಬೀರಲಿದೆ ಅನ್ನೋದ್ರ ಮೇಲೆ ಬಿಜೆಪಿ ಹೈಕಮಾಂಡ್‌ ಕ್ರಮಕ್ಕೆ ಮುಂದಾಗಬೇಕಿದೆ.

Tags: B.Y. Vijayendra and Basanagowda Patil Yatnal.BJPdemanded Vijayendra'sNational General Secretary Tarun ChughPrime Minister Narendra ModiYatnal team
Previous Post

ಮುಸ್ಲಿಂ ಮಹಿಳೆಗೆ ಒಂದೇ ದಿನದಲ್ಲಿ ಸೈಟ್‌ ಕೊಟ್ಟ ರಾಜ್ಯ ಸರ್ಕಾರ..

Next Post

ಲೋಕಾಯುಕ್ತರ ತನಿಖೆ ಎದುರಿಸಿದ ಜಮೀರ್‌ಗೆ ಮತ್ತೆ ಸಂಕಷ್ಟ ಎದುರಾಗುತ್ತಾ..?

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

ಲೋಕಾಯುಕ್ತರ ತನಿಖೆ ಎದುರಿಸಿದ ಜಮೀರ್‌ಗೆ ಮತ್ತೆ ಸಂಕಷ್ಟ ಎದುರಾಗುತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada