• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಂಭಾಲ್​ನಲ್ಲಿ 46 ವರ್ಷಗಳಿಂದ ಬಂದ್ ಆಗಿದ್ದ ದೇವಾಲಯ ಮತ್ತೆ ತೆರೆದ ಜಿಲ್ಲಾಡಳಿತ: ಭಕ್ತರಿಂದ ಪೂಜೆ

ಪ್ರತಿಧ್ವನಿ by ಪ್ರತಿಧ್ವನಿ
December 16, 2024
in Top Story, ಇತರೆ / Others
0
Share on WhatsAppShare on FacebookShare on Telegram

ಸಂಭಾಲ್ (ಉತ್ತರ ಪ್ರದೇಶ ; 46 ವರ್ಷಗಳಿಂದ ಬಂದ್ ಆಗಿದ್ದ ಮಂದಿರವನ್ನು ಜಿಲ್ಲಾಡಳಿತ ಇದೀಗ ಮತ್ತೆ ತೆರೆಯಿದ್ದು, ಹಿಂದೂ ಸಮುದಾಯದಲ್ಲಿ ಸಂತಸ ಮನೆಮಾಡಿದೆ. ಈಗ ದರ್ಶನಕ್ಕೆ ತೆರೆಯಲಾಗಿರುವ ಶಿವ ದೇವಾಲಯಕ್ಕೆ ದೂರದಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ಎಸ್​ಪಿ ಸಂಸದ ಜಿಯಾವುರ್ ರೆಹಮಾನ್ ಬರ್ಕ್ ಅವರಿಗೆ ಸೇರಿದ ಖಗ್ಗು ಸರೈ ಪ್ರದೇಶದಲ್ಲಿ ಅಧಿಕಾರಿಗಳು ಮತ್ತು ಪೊಲೀಸರು ವಿದ್ಯುತ್ ಕಳವು ತಪಾಸಣೆ ನಡೆಸುತ್ತಿದ್ದಾಗ ಈ ಶಿವ ದೇವಾಲಯ ಪತ್ತೆಯಾಗಿದೆ. ಮುಚ್ಚಿ ಬೀಗ ಹಾಕಿದ್ದ ಈ ದೇವಸ್ಥಾನದ ಬಾಗಿಲು ಈಗ 46 ವರ್ಷಗಳ ನಂತರ ತೆರೆಯಲಾಗಿದೆ. ದೇವಾಲಯದಲ್ಲಿ ಶಿವಲಿಂಗ ಮತ್ತು ಹನುಮಾನ್‌ ವಿಗ್ರಹಗಳನ್ನು ಕಾಣುವ ಸಾಧ್ಯವಾಗಿದೆ.

ದುಡ್ಡಿದ ದಶಕಗಳ ನಂತರ ದೇವಾಲಯ ತೆರೆದಿರುವುದರ ಸುದ್ದಿ ಕೇಳಿ ಹಿಂದೂ ಧರ್ಮೀಯರು ದೌಡಾಯಿಸಿದ್ದಾರೆ. ಪುರೋಹಿತರನ್ನು ಕರೆಸಿಕೊಂಡು ದೇವಸ್ಥಾನವನ್ನು ಶುದ್ಧೀಕರಿಸಲಾಯಿತು, ನಂತರ ಪೂಜೆ ಪ್ರಾರಂಭವಾಯಿತು. ದೇವಾಲಯದ ಸುರಕ್ಷತೆಯನ್ನು ದೃಢಪಡಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಭಾನುವಾರ, ದೇವಾಲಯ ತೆರೆದ ಎರಡನೇ ದಿನವೇ ಬೆಳಗ್ಗೆ ಭಕ್ತರು ಪೂಜೆಗಾಗಿ ಆಗಮಿಸತೊಡಗಿದರು.

ಸ್ಥಳೀಯರ ಪ್ರಕಾರ, 1978ರಲ್ಲಿ ನಡೆದ ಕೋಮು ಗಲಭೆಯ ನಂತರ ಸ್ಥಳೀಯ ಹಿಂದೂ ಸಮುದಾಯ ಈ ಪ್ರದೇಶವನ್ನು ತ್ಯಜಿಸಿತ್ತು, ಇದರಿಂದ ಭಸ್ಮ ಶಂಕರ್ ದೇವಾಲಯ ಮುಚ್ಚಲ್ಪಟ್ಟಿತ್ತು.

ವಿದ್ಯುತ್ ಕಳ್ಳತನದ ತಪಾಸಣೆ ನಡೆಸುತ್ತಿದ್ದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್​ಡಿಎಂ) ವಂದನಾ ಮಿಶ್ರಾ, ತಪಾಸಣೆ ವೇಳೆ ಮಂದಿರ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದರು. “ಈ ವಿಷಯವನ್ನು ಜಿಲ್ಲಾಡಳಿತದ ಗಮನಕ್ಕೆ ತಂದೆ. ಅದಾದ ನಂತರ ದೇವಾಲಯವನ್ನು ತೆರೆಯುವ ನಿರ್ಧಾರ ಕೈಗೊಳ್ಳಲಾಯಿತು,” ಎಂದು ಅವರು ತಿಳಿಸಿದ್ದಾರೆ. ದೇವಸ್ಥಾನದ ಹತ್ತಿರ ಇರುವ ಬಾವಿಯನ್ನು ಪುನಶ್ಚೇತನಗೊಳಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ.

Tags: closed for 46 years in Sambhal:Deputy Divisional Magistrate (SDMdistrict administration reopenedSambhalShiva templeShivalinga and Hanuman idolsSP MP Ziaur Rehman Barkworship by devotees
Previous Post

ಯರ್ಮೌಕ್‌ ನಿರಾಶ್ರಿತ ಶಿಬಿರಕ್ಕೆ ಹಿಂತಿರುಗುತ್ತಿರುವ ಪ್ಯಾಲೆಸ್ತೈನ್‌ ನಿರಾಶ್ರಿತರು

Next Post

ಗ್ರಾಮಸ್ಥರಿಂದ ಮೂವರು ಶಂಕಿತ ಮಾವೋವಾದಿಗಳ ಹತ್ಯೆ

Related Posts

Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
0

ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಂಡಿದೆ. ಚಿನ್ನ ಕಳ್ಳಸಾಗಾಣೆ ವೇಳೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ...

Read moreDetails
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಗ್ರಾಮಸ್ಥರಿಂದ ಮೂವರು ಶಂಕಿತ ಮಾವೋವಾದಿಗಳ ಹತ್ಯೆ

Recent News

Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada