• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸತ್ಯದ ದಾಖಲೆಗಳನ್ನು ಜನರ ಮುಂದಿಟ್ಟು ಎದೆ ಎತ್ತಿ ಸತ್ಯ ಹೇಳಿ: CM ಕರೆ

ಪ್ರತಿಧ್ವನಿ by ಪ್ರತಿಧ್ವನಿ
December 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿ:ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದ್ದು, ಬಿಜೆಪಿ ಅಧಿಕಾರವಧಿಯಲ್ಲಿ ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು.ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ ಎಂದು ಸಿಎಂ(CM) ಸಿದ್ದರಾಮಯ್ಯ ಹೇಳಿದರು.ಬೆಳಗಾವಿ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದರು.

ADVERTISEMENT

ಯಡಿಯೂರಪ್ಪ, ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಗಳನ್ನು ಕೊಡಲಾಗಿದೆ. ಹೀಗಾಗಿ ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

once a waqf property Always a waqf property ಅಂತ ಸುಪ್ರೀಂಕೋರ್ಟ್ ಜಡ್ಜ್ ಮೆಂಟ್ ಬಂದಿವೆ ಎಂದ ಅವರು, ಸಚಿವ ಜಮೀರ್ ಈ ಬಗ್ಗೆ ಸಮರ್ಥವಾಗಿ ಉತ್ತರ ನೀಡುತ್ತಾರೆ. ಅಲ್ಲದೇ, ಪರಿಷತ್​ನಲ್ಲಿ ಈಗಾಗಲೇ ಉತ್ತರ ಕೊಟ್ಟಿದ್ದಾರೆ ಎಂದರು. ಸತ್ಯದ ದಾಖಲೆಗಳನ್ನು, ಅಂಕಿ ಅಂಶಗಳನ್ನು ಜನರ ಮುಂದಿಟ್ಟು ಎದೆ ಎತ್ತಿ ಸತ್ಯ ಹೇಳಿ ಎಂದು ತಮ್ಮ ಸಚಿವರಿಗೆ ಕರೆ ಸಿಎಂ ಕರೆ ನೀಡಿದರು.

ಉತರ ಕರ್ನಾಟಕ ಅಭಿವೃದ್ಧಿ ಬಿಜೆಪಿ ಮಾಡಿಲ್ಲ:

ಬಿಜೆಪಿ 9 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ. ನಂಜುಂಡಪ್ಪ ಅವರ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ 176 ರಲ್ಲಿ 116 ತಾಲ್ಲೂಕುಗಳು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು ಅಂತಲೂ ಹೇಳಿದ್ದಾರೆ ಎಂದು ವರದಿ ಆಧರಿಸಿ ಸಿದ್ದರಾಮಯ್ಯ ಮಾತನಾಡಿದರು.

ನಂಜುಂಡಪ್ಪ ಅವರ ವರದಿಯ ಅನುಷ್ಠಾನ ಮತ್ತು ಸಾಮಾಜಿಕ, ಆರ್ಥಿಕ ಬದಲಾವಣೆ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿಯನ್ನು ರಚಿಸಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ 371ಜೆ ಸಂವಿಧಾನ ತಿದ್ದುಪಡಿ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಎಲ್.ಕೆ.ಅಡ್ವಾಣಿ ಅವರು ತಿರಸ್ಕರಿಸಿದ್ದರು. ಇದು ಬಿಜೆಪಿಯ ಸತ್ಯವಾದ ಮುಖ. ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ನಡೆಸಿದ್ದು, ಕಾನೂನು ಮಾಡಿದ್ದು, ಜಾರಿ ಮಾಡಿದ್ದೆಲ್ಲಾ ಕಾಂಗ್ರೆಸ್ ಸರ್ಕಾರವೇ. ಈಗ ಹೊಸದಾದ ಗೋವಿಂದರಾವ್ ಸಮಿತಿ ರಚಿಸಿರುವುದೂ ನಮ್ಮದೇ ಸರ್ಕಾರ ಎಂದರು.

ರೋಣದಲ್ಲಿ 200 ಕೋಟಿ, ಹೆಚ್.ಡಿ.ಕೋಟೆಯಲ್ಲಿ ನೂರಾರು ಕೋಟಿ, ತುಮಕೂರಿನಲ್ಲಿ 1700 ಕೋಟಿ ರೂಪಾಯಿಯ ಅಭಿವೃದ್ಧಿ ಕೆಲಸಗಳನ್ನು ನಾವೇ ಉದ್ಘಾಟಿಸಿದ್ದೀವಿ. ಇವು ಉದಾಹರಣೆಗಳಷ್ಟೆ. ಪ್ರತೀ ಜಿಲ್ಲೆ, ಪ್ರತೀ ತಾಲ್ಲೂಕುಗಳಲ್ಲೂ ನೂರಾರು ಕೋಟಿಯ ಅಭಿವೃದ್ಧಿ ಕಡಲಸಗಳು ನಿರಂತರವಾಗಿ ಉದ್ಘಾಟನೆ ಆಗುತ್ತಲೇ ಇವೆ.ಬಜೆಟ್ಟಿನಲ್ಲಿ 120000 ಕೋಟಿ ಅಭಿವೃದ್ಧಿ ಹಣ ತೆಗೆದಿಡಲಾಗಿದೆ. ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇವೆ. 52009 ಕೋಟಿ ರೂಪಾಯಿ ಗ್ಯಾರಂಟಿಗಳ ಮೂಲಕ ಜನರ ಜೇಬಿಗೆ, ಜನರ ಖಾತೆಗೆ ನೇರವಾಗಿ ಜಮೆ ಆಗುತ್ತಿದೆ. ಹೀಗಾಗಿ ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ.

ಅವರು ಅಧಿಕಾರದಲ್ಲಿದ್ದಾಗ ನಾವು ಕೇಳಿದ ಒಂದನ್ನೂ CBI ತನಿಖೆಗೆ ಕೊಡಲಿಲ್ಲ. ಈಗ ಮತ್ತೆ ಅದೇ CBI ರಾಗ ಎಖೆಯುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು CBI ಅನ್ನು “ಚೋರ್ ಬಚಾವೋ ಸಂಸ್ಥೆ” ಎಂದಿದ್ದರು. ಈಗ ಇವರಿಗೆ CBI ಮೇಲೆ ಪ್ರೀತಿ ಬಂದಿದೆ ಎಂದರು.

ಜನ ಸಂಪರ್ಕ ಸಭೆ ಹೆಚ್ಚೆಚ್ಚು ಮಾಡಿ:ನಮ್ಮ ಸಚಿವರು ಮತ್ತು ಶಾಸಕರು ಅವರವರ ಉಸ್ತುವಾರಿಯ ಜಿಲ್ಲೆಗಳಲ್ಲಿ, ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ಜನಸಂಪರ್ಕ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಿ. ಹಣಕ್ಕೆ ಸಮಸ್ಯೆ ಇಲ್ಲ. ಹಣ ಇದೆ. ಜನರ ಕೆಲಸ ಮಾಡಿ ಎಂದರು.

Tags: 176 taluks are backward.9 yearsBelgaum Congress LegislatureBJP.CM Siddaramaiah.Congress PartyMinister JameerWaqf property.Yeddyurappa and Bommai were the Chief Ministers.
Previous Post

ಅನ್ವರ್‌ ಮಾಣಿಪ್ಪಾಡಿ ಹೇಳಿಕೆ..U ಟರ್ನ್‌ ಹೇಳಿಕೆ.. ಮತ್ತೆ ಕಾಂಗ್ರೆಸ್‌ ವಿರುದ್ಧ ಕಿಡಿ..

Next Post

ಡಿ ಬಾಸ್‌ ಅಂತಾ ಹೋದ..ಬೇಲ್‌ ಸಿಕ್ಕಿದೆ ಶ್ಯೂರಿಟಿ ಸಿಗ್ತಿಲ್ಲ..ಕಣ್ಣೀರು

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
Next Post
ಡಿ ಬಾಸ್‌ ಅಂತಾ ಹೋದ..ಬೇಲ್‌ ಸಿಕ್ಕಿದೆ ಶ್ಯೂರಿಟಿ ಸಿಗ್ತಿಲ್ಲ..ಕಣ್ಣೀರು

ಡಿ ಬಾಸ್‌ ಅಂತಾ ಹೋದ..ಬೇಲ್‌ ಸಿಕ್ಕಿದೆ ಶ್ಯೂರಿಟಿ ಸಿಗ್ತಿಲ್ಲ..ಕಣ್ಣೀರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada