• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ

ಪ್ರತಿಧ್ವನಿ by ಪ್ರತಿಧ್ವನಿ
December 22, 2024
in Top Story, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ
0
₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ
Share on WhatsAppShare on FacebookShare on Telegram
ADVERTISEMENT

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ರಾಜ್ಯದಲ್ಲಿ ನಿರುದ್ಯೋಗ ನಿವಾರಣೆಗೆ ಮೋದಿ ಸರ್ಕಾರದ ಉಪಕ್ರಮಗಳ ಬಗ್ಗೆ ಮಾಹಿತಿ

ಮಂಡ್ಯದಲ್ಲಿ ಐಐಟಿ ಸ್ಥಾಪನೆಗೆ ಬಗ್ಗೆ ಸಚಿವರ ಸಕಾರಾತ್ಮಕ ಸ್ಪಂದನೆ

ದುರ್ಗಾಸ್ತಮಾನ ಕಾದಂಬರಿ ಓದಿ ರೋಮಾಂಚಿತನಾಗಿದ್ದೇನೆ ಎಂದ ಸಚಿವರು

ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಆ ನಿಟ್ಟಿನಲ್ಲಿಯೇ ಭದ್ರಾವತಿ ಕಾರ್ಖಾನೆಗೆ ಮರುಜೀವ ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.

ಮೈಸೂರು ಮಹಾ ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಫಲವಾಗಿ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಸ್ಥಾಪನೆ ಆಗಿತ್ತು. ಸಾವಿರಾರು ಜನರಿಗೆ ಅಲ್ಲಿ ಉದ್ಯೋಗ ಅವಕಾಶ ಸಿಕ್ಕಿತ್ತು. ಲಕ್ಷಾಂತರ ಜನರು ಪರೋಕ್ಷವಾಗಿ ಬದುಕು ಕಟ್ಟಿಕೊಂಡಿದ್ದರು. ಅಂತಹ ವೈಭವದ ದಿನಗಳು ಮರುಕಳಿಸುವ ದಿನಗಳು ದೂರವಿಲ್ಲ ಎಂದು ಕೇಂದ್ರ ಸಚಿವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕಿನಂತಹ ಎರಡು ಮಹತ್ವದ ಖಾತೆಗಳನ್ನು ನೀಡಿದ್ದಾರೆ. ಎರಡೂ ಜವಾಬ್ದಾರಿಗಳನ್ನು ನಾನು ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿ ನಿರ್ವಹಣೆ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿಯವರು ಹೇಳಿದರು.

ಐಐಟಿ ಸ್ಥಾಪನೆಗೆ ಸಚಿವರ ಸ್ಪಂದನೆ:

ಮಂಡ್ಯದ ಕೆಆರ್ ಎಸ್ ಬಳಿ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಶಾಸಕ ದಿನೇಶ್ ಗೂಳಿಗೌಡ ಮಾಡಿದ ಮನವಿಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು; ಈ ಬಗ್ಗೆ ಪರಿಶೀಲನೆ ಮಾಡೋಣ. ಸಂಬಂಧಪಟ್ಟ ಕೇಂದ್ರ ಸಚಿವರ ಜತೆ ಖಂಡಿತಾ ಚರ್ಚೆ ಮಾಡುತ್ತೇನೆ. ರಾಜ್ಯದಲ್ಲಿ ಈಗಾಗಲೇ ಒಂದು ಐಐಟಿ ಸ್ಥಾಪನೆಯಾಗಿದೆ, ಇನ್ನೊಂದು ಐಐಟಿ ಬರಲಿ, ಬರಬೇಕು ಕೂಡ. ಎಲ್ಲರೂ ಒಟ್ಟಿಗೆ ಪ್ರಯತ್ನ ಮಾಡಿ ರಾಜ್ಯಕ್ಕೆ ಮತ್ತೊಂದು ಐಐಟಿ ತರೋಣ. ಅದಕ್ಕೆ ಎಲ್ಲರ ಸಹಕಾರ ಇರಲಿ ಎಂದು ಹೇಳಿದರು.

ಮಂಡ್ಯ ಜಿಲ್ಲೆ ಅಪ್ಪಟ ಕನ್ನಡತನ, ಅಪ್ಪಟ ಕನ್ನಡಿಗರೇ ಇರುವ ಜಿಲ್ಲೆ. ನಾನು ಕೇಂದ್ರ ಸಚಿವನಾಗಿ ನಾನು ಇಲ್ಲಿಗೆ ಬಂದಿಲ್ಲ, ಅಪ್ಪಟ ಕನ್ನಡಿಗನಾಗಿ, ಸಾಮಾನ್ಯ ಕನ್ನಡಿಗನಾಗಿ ಇಲ್ಲಿಗೆ ಬಂದಿದ್ದೇನೆ. ಸಮ್ಮೇಳನದಲ್ಲಿ ಭಾಗಿಯಾಗಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಸಮ್ಮೇಳನ ಸರ್ವಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರು ಸಮ್ಮೇಳನದ ಪ್ರಧಾನ ಭಾಷಣದಲ್ಲಿ ಅನೇಕ ಮಹತ್ವದ ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ. ನಾಡಿಗೆ ಅವರು ಕೊಟ್ಟಿರುವ ಸಂದೇಶಗಳನ್ನು ಜಾರಿಗೆ ತರಬೇಕು, ಅದು ಆಡಳಿತ ನಡೆಸುವವರ ಕರ್ತವ್ಯ. ಅವರ ಆಶಯಗಳನ್ನು ಅನುಷ್ಟಾನಕ್ಕೆ ತರಬೇಕು ಎನ್ನುವುದು ನನ್ನ ಬಲವಾದ ಒತ್ತಾಸೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

Kannada Sahitya Sammelana : ಅನುಕೂಲಕ್ಕೆ ಒಬ್ಬ ಗಂ**... ಎಂದ ಮುಸ್ಲಿಂ ನಾಯಕ #pratidhvani #bjpvscongress

ತ್ರಿಭಾಷಾ ಸೂತ್ರಕ್ಕಿಂತ ದ್ವಿಭಾಷಾ ಸೂತ್ರ ಅಗತ್ಯ ಎಂದು ಸಮ್ಮೇಳನ ಅಧ್ಯಕ್ಷರು ಪ್ರತಿಪಾದಿಸಿದ್ದಾರೆ. ಆದರೆ, ಗ್ರಾಮಿಣ ಪ್ರದೇಶದ ಪೋಷಕರಿಗೆ ಬೃಹತ್ತಾದ ಸವಾಲು ಇದೆ. ಒಂದು ಕಡೆ ತಮ್ಮ ಮಾತೃಭಾಷೆ ಕನ್ನಡವನ್ನು ಉಳಿಸಬೇಕು, ಇನ್ನೊಂದು ಕಡೆ ಜಾಗತಿಕ ಓಟಕ್ಕೆ ಅನುಗುಣವಾಗಿ ತಮ್ಮ ಮಕ್ಕಳ ಭವಿಷ್ಯವನ್ನೂ ಕಟ್ಟಿಕೊಡಬೇಕು. ಇಂತಹ ತಳಮಳ, ಸವಾಲು, ಆತಂಕದಲ್ಲಿ ಪೋಷಕರು ಇದ್ದಾರೆ. ಅದಕ್ಕೆ ಪರಿಹಾರವೇನು ಎಂಬ ಬಗ್ಗೆ ನಾವೆಲ್ಲರೂ ಆಲೋಚನೆ ಮಾಡಬೇಕು ಎಂದು ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.

ಅನ್ಯಭಾಷೆಗಳ ಹೇರಿಕೆಯ ಬಗ್ಗೆ ಇರುವ ಆತಂಕಗಳ ಬಗ್ಗೆ ಅಧ್ಯಕ್ಷರು ಚರ್ಚೆ ಮಾಡಿದ್ದಾರೆ. ಅವರ ಅಷ್ಟೂ ಭಾಷಣವನ್ನು ಓದಿದ್ದೇನೆ. ನಾನು ಯಾವುದೇ ಕಾರಣಕ್ಕೂ ರಾಜಕೀಯ ಭಾಷಣಕ್ಕೆ ಈ ವೇದಿಕೆಯನ್ನು ಬಳಕೆ ಮಾಡಿಕೊಳ್ಳಲಾರೆ, ಮಾಡಿಕೊಳ್ಳಬಾರದು ಕೂಡ. ಕನ್ನಡ ಶಾಲೆಗಳಿಗೆ ಪ್ರೋತ್ಸಾಹ ಕೊಡುವ ವಿಷಯದಲ್ಲಿ ಲೋಪಗಳಾಗಿವೆ. ಅದನ್ನು ನಾವು ಸರಿ ಮಾಡಿಕೊಳ್ಳಬೇಕು. ಇಲ್ಲವಾದರೆ ಮಕ್ಕಳು, ಪೋಷಕರು ಮಾತೃಭಾಷೆಯಿಂದ ವಿಮುಖರಾಗುತ್ತಾರೆ ಎಂದು ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

2006ರಲ್ಲಿ ನಾನು ಬಿಜೆಪಿ ಪಕ್ಷದ ಜತೆ ಮೈತ್ರಿ ಸರಕಾರ ರಚನೆ ಮಾಡಿದ್ದಾಗ ಈ ವೇದಿಕೆಯಲ್ಲಿರುವ ಹಾಲಿ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಪ್ರಾಥಮಿಕ ಶಿಕ್ಷಣ ಖಾತೆ ಸಚಿವರಾಗಿದ್ದರು. ಆಗ ರಾಜ್ಯದಲ್ಲಿ 169 ಪ್ರಥಮ ದರ್ಜೆ ಕಾಲೇಜುಗಳು ಇದ್ದವು, ಆಗ ಕಾಲೇಜುಗಳ ಕೊರತೆ ಹೆಚ್ಚಾಗಿತ್ತು. ಅದಕ್ಕೆ ಅಂದಿನ ನಮ್ಮ ಸರಕಾರ ಸ್ಪಂದಿಸಿತು. ಹೊಸದಾಗಿ 189 ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪನೆ ಮಾಡಲಾಯಿತು. ಅದರಲ್ಲಿ ವಿಜ್ಞಾನ ಕಾಲೇಜುಗಳನ್ನು ಹೆಚ್ಚು ತೆರೆಯಲಾಯಿತು. 500 ಜ್ಯೂನಿಯರ್ ಕಾಲೇಜುಗಳು, ಆರು ಎಂಜಿನಿಯರಿಂಗ್ ಕಾಲೇಜ್ ಹಾಗೂ ಸಾವಿರಾರು ಶಾಲೆಗಳನ್ನು ಆರಂಭ ಮಾಡಿದ್ದೆವು. ಇದರಿಂದ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಯೇ ಆಯಿತು ಎನ್ನುವುದು ನನ್ನ ಭಾವನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪೋಷಕರ ಮನಸ್ಥಿತಿ ಹಾಗೂ ಪೈಪೋಟಿ ಮನೋಭಾವನೆಯಿಂದ ಗ್ರಾಮೀಣ ಭಾಗದ ಮಕ್ಕಳ ಮಾತೃಭಾಷಾ ಕಲಿಕೆ ಪ್ರಮಾಣ ಕುಸಿಯುತ್ತಿದೆ. ನಗರ ಪ್ರದೇಶಗಳ ಮಕ್ಕಳ ಜತೆ ಅವರು ಪೈಪೋಟಿ ನಡೆಸಬೇಕಿದೆ. ಹೀಗಾಗಿ ಪೋಷಕರ ಆಲೋಚನೆಯೇ ಬೇರೆಯಾಗಿದೆ. ಅವರಿಗೆ ಮಕ್ಕಳ ಭವಿಷ್ಯವನ್ನು ರೂಪಿಸುವುದೇ ಸವಾಲಿನ ಕೆಲಸವಾಗಿದೆ. ಇಂತಹ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ನಾನು ಎರಡನೇ ಬಾರಿಗೆ ಮುಖ್ಯಮಂತ್ರಿ ಆದಾಗ, ಸಾವಿರ ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲು ಹೊರಟಿದ್ದು ನಿಜ. ಕನ್ನಡಕ್ಕೆ ಅಪಾಯ ಉಂಟು ಮಾಡಬೇಕು ಎಂದು ಆ ನಿರ್ಧಾರ ಮಾಡಲಿಲ್ಲ. ನಗರ ಪ್ರದೇಶಗಳ ಮಕ್ಕಳ ಜತೆ ಪೈಪೋಟಿಗೆ ಹಳ್ಳಿ ಮಕ್ಕಳನ್ನು ಸಜ್ಜು ಮಾಡುವ ಸದುದ್ದೇಶದಿಂದ ನಾನು ಆ ನಿರ್ಧಾರ ಮಾಡಿದ್ದೆ. ಜತೆಗೆ, ಕಲಿಕೆಯಲ್ಲಿ ಕನ್ನಡಕ್ಕೆ ಒತ್ತು ಕೊಡುವ ಕೆಲಸವನ್ನು ನಾನು ಮಾಡಿದ್ದೆ ಎಂದು ಕೇಂದ್ರ ಸಚಿವರು ವಿವರಿಸಿದರು.

ದುರ್ಗಾಸ್ತಮಾನ ಕಾದಂಬರಿ ಓದಿ ರೋಮಾಂಚಿತನಾಗಿದ್ದೇನೆ:

ಸಾಹಿತ್ಯ ಕುರಿತಾದ ತಮ್ಮ ಆಸಕ್ತಿಯನ್ನು ಸಭಿಕರ ಮುಂದೆ ಹಂಚಿಕೊಂಡ ಕೇಂದ್ರ ಸಚಿವರು; ‘ದುರ್ಗಾಸ್ತಮಾನ’ ನಾನು ಬಹುವಾಗಿ ಇಷ್ಟಪಟ್ಟು ಓದಿದ ಬೃಹತ್ ಕಾದಂಬರಿ. ಸಾವಿರ ಪುಟಗಳ ಆ ಮಹಾನ್ ಕಾದಂಬರಿಯನ್ನು ಓದಿ ರೋಮಾಂಚನಗೊಂಡಿದ್ದೇನೆ. ಆ ಕಾದಂಬರಿಯಲ್ಲಿ ವೀರ ಮದಕರಿನಾಯಕರ ಅಂತ್ಯದ ಕಥನ ಓದಿದರೆ ಎಂತಹವರ ಹೃದಯವೂ ಕರಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ವ್ಯಾಸರಾಯ ಬಲ್ಲಾಳರ ಕಾದಂಬರಿಗಳಿಗೆ ನಾನು ಹೆಚ್ಚು ಆಕರ್ಷಿತನಾಗಿದ್ದೇನೆ. ಗಜಾನನ ಶರ್ಮ ಅವರ ‘ಚನ್ನಾಭೈರಾದೇವಿ’ ಕಾದಂಬರಿ, ಗೋಪಾಲಕೃಷ್ಣ ಪೈ ಅವರ ‘ಸ್ವಪ್ನ ಸಾರಸ್ವತ’, ಬೊಳುವಾರು ಮುಹಮ್ಮದ್ ಕುಂಞಿ ಅವರ ‘ಸ್ವಾತಂತ್ರ್ಯದ ಓಟ’ ಇತ್ಯಾದಿ ಕಾದಂಬರಿಗಳನ್ನು ಓದಿದ್ದೇನೆ ಎಂದರು ಕೇಂದ್ರ ಸಚಿವರು.

ಸಮಾಜದ ಶಾಂತಿ ಕಾಪಾಡುವ ಸಿನಿಮಾಗಳು ಬರಲಿ:

ಕನ್ನಡ ಚಿತ್ರರಂಗದಿಂದ ಬಂದವನು ನಾನು, ಅಂದಿನ ಚಿತ್ರ ಕಥೆಗಳು ಇಂದಿನ ಚಿತ್ರ ಕಥೆಗಳ ನಡುವೆ ಬಹಳ ವ್ಯತ್ಯಾಸವಿದೆ. ಸಮಾಜವನ್ನು ಯಾವ ದಿಕ್ಕಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ ಎಂದು ಬೇಸರವಾಗುತ್ತದೆ. ಡಾ.ರಾಜ್ ಕುಮಾರ್ ಅವರು ಹಾಡಿರುವ ‘ಹಾಲಿನ ಹೊಳೆಯೋ.. ಜೇನಿನ ಮಳೆಯೋ..’ ಹಾಡನ್ನು ಕೇಳುತ್ತಾ ಅನೇಕ ಸಲ ಮೈಮರೆತಿದ್ದೇನೆ ಎಂದು ಕೇಂದ್ರ ಸಚಿವರು.

ಇಂದಿನ ಚಿತ್ರರಂಗದಲ್ಲಿ ಉತ್ತಮ, ಸದಭಿರುಚಿಯ ಚಿತ್ರಗಳು ಬರಬೇಕು, ಉತ್ತಮ ಕಥೆಗಳ, ಸಮಾಜಕ್ಕೆ ಒಳ್ಳೆಯದು ಮಾಡುವ ಸಿನಿಮಾಗಳು ಹೆಚ್ಚೆಚ್ಚು ಬರಬೇಕು. ಸಮಾಜದಲ್ಲಿ ನೆಮ್ಮದಿಯ ವಾತಾವರಣ ನೆಲೆಸಬೇಕಿದೆ. ಮನುಷ್ಯ ಸಂಬಂಧಗಳು ಹಾಳಾಗಬಾರದು. ಅವುಗಳನ್ನು ಕಾಪಾಡಿಕೊಳ್ಳಬೇಕು. ಹಳ್ಳಿಗಳಲ್ಲಿ ಎಲ್ಲರೂ ಕೂತು ಪಂಕ್ತಿಭೋಜನ ಮಾಡುವ ದಿನಗಳು ಮತ್ತೆ ಬರಬೇಕು. ಈಗ ಎಲ್ಲವೂ ಇದೆ, ಆದರೆ ಏನೂ ಇಲ್ಲದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಹಿಂದಿನ ನಮ್ಮ ಸಂಸ್ಕೃತಿ, ಬಾಂಧವ್ಯ, ಸಂಬಂಧಗಳು ಮರುಕಳಿಸಬೇಕು ಎಂಬ ಆಶಯವನ್ನು ಕುಮಾರಸ್ವಾಮಿ ಅವರು ವ್ಯಕ್ತಪಡಿಸಿದರು.

ಗೊರುಚ ಅವರು ಶತಾಯುಷಿ ಆಗಲಿ; ಕೇಂದ್ರ ಸಚಿವರ ಹಾರೈಕೆ

ಸಮ್ಮೇಳನ ಸರ್ವಾಧ್ಯಕ್ಷರಾದ ಗೊರುಚ ಅವರು ಶತಾಯುಷಿ ಆಗಬೇಕು ಎನ್ನುವುದು ನನ್ನ ಹಾರೈಕೆ. ಅವರಿಗೆ ಜ್ಯೋತಿಷಿ ಹೇಳಿರುವ ಭವಿಷ್ಯ ನಿಜವಾಗಲಿ. ಅವರು ಶತಾಯುಷ್ಯ ಮೀರಿ ನಮ್ಮ ಜತೆಯಲ್ಲಿ ಬಾಳಲಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಆಶಿಸಿದರು.

ಗೊರುಚ ಅವರ ಬದುಕು ನಮಗೆ ಪ್ರೇರಣೆ. ನಾನು ನೂರು ವರ್ಷ ಬದುಕುತ್ತೇನೆ, ಹಾಗೆಂದು ಜ್ಯೋತಿಷಿ ಹೇಳಿದ್ದಾರೆ ಎಂದು ಅವರು ಹೇಳಿದ ಮಾತನ್ನು ನಾನು ವೇದಿಕೆಯಲ್ಲಿ ಗಮನಿಸಿದ್ದೇನೆ. ಅವರಿಗೆ ಆಯುಷ್ಯದ ಆತಂಕ ಬೇಡ. ಜ್ಯೋತಿಷಿ ಭವಿಷ್ಯದ ಜತೆಗೆ ನಮ್ಮೆಲ್ಲರ ಹಾರೈಕೆಯೂ ಇದೆ. ನನ್ನ ಪಿತೃ ಸಮಾನರಾದ ಗೊರುಚ ಅವರು ಇನ್ನೂ ಅನೇಕ ವರ್ಷಗಳ ಕಾಲ ನಮ್ಮ ಜತೆಯಲ್ಲಿಯೇ ಇರುತ್ತಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

CT Ravi: ಡಿಕೆ ಶಿವಕುಮಾರ್‌ಗೆ ಹೇಳಿಕೆ ಸಿ.ಟಿ.ರವಿ ಟಾಂಗ್‌..! #lakshmihebbalkar #dkshivakumar #pratidhvani
Tags: #bhadravathi#bhadravathi #kodagu#bhadravathi #visl #loss #accidents #iijnm #2017bhadravathibhadravathi steel plantbhadravathi visl factoryBhadravatibhadravati vislbhilai steel plantbokaro steel plantkarnataka gk questions and answersmpm bhadravatisteel authority of indiasteel authority of india limitedvisl bhadravathivisl bhadravativisl factoryvisvesvaraya iron and steel plant visvesvaraya steel plant
Previous Post

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಹೋರಾಡಲು ಸನ್ನದ್ಧರಾಗಬೇಕು:ಬಸವರಾಜ ಬೊಮ್ಮಾಯಿ

Next Post

ನಕಲಿ ಎನ್‌ಕೌಂಟರ್‌ ಆರೋಪ.. ತಿರುಗಿ ಬಿದ್ದ ಕಾಂಗ್ರೆಸ್‌‌ ಅಟ್ಯಾಕ್‌‌..

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ನಕಲಿ ಎನ್‌ಕೌಂಟರ್‌ ಆರೋಪ.. ತಿರುಗಿ ಬಿದ್ದ ಕಾಂಗ್ರೆಸ್‌‌ ಅಟ್ಯಾಕ್‌‌..

ನಕಲಿ ಎನ್‌ಕೌಂಟರ್‌ ಆರೋಪ.. ತಿರುಗಿ ಬಿದ್ದ ಕಾಂಗ್ರೆಸ್‌‌ ಅಟ್ಯಾಕ್‌‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada