• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿರೋಧ ಪಕ್ಷ ನಾಯಕತ್ವಕ್ಕೆ ಅಟಲ್ ಮಾದರಿ ಎಂದ ಹೆಚ್.ಡಿ.ದೇವೇಗೌಡರು

ಪ್ರತಿಧ್ವನಿ by ಪ್ರತಿಧ್ವನಿ
December 26, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ವಿರೋಧ ಪಕ್ಷ ಎನ್ನುವುದಕ್ಕೆ ಕಾಂಗ್ರೆಸ್ ಕಳಂಕ ತರುತ್ತಿದೆ ಎಂದು ಆಕ್ರೋಶ

ADVERTISEMENT

ಮೋದಿ, ಅಮಿತ್ ಶಾ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಕಿಡಿ

ಮಾಜಿ ಪ್ರಧಾನಿಗಳಿಗೆ ಅಟಲ್ ಪುರಸ್ಕಾರ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದರು.

ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ಳುತ್ತಿದೆ ಎಂದರೆ ದೇಶದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ. ಅಧಿವೇಶನದಲ್ಲಿ ‌ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ.ಅವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ತಪ್ಪು ಮಾಡುತ್ತಿದೆ ಅಂತೂ ಅವರು ಆರೋಪಿಸಿದರು.

ಅಟಲ್ ಜೀ ಅವರು ವಿರೋಧ ಪಕ್ಷದಲ್ಲಿದ್ದಾಗ ನಾನು ಅವರ ಭಾಷಣ ಕಾರಿನಲ್ಲಿ ಹೋಗುವಾಗ ಕೇಳುತ್ತಿದ್ದೆ. ಅವರ ಭಾಷಣ ಕೇಳುತ್ತಾ ನಾನು ವಿರೋಧ ಪಕ್ಷ ನಾಯಕನಾದಾಗ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳುತ್ತಿದ್ದೆ. ಅವರು ವಿರೋಧ ಪಕ್ಷ ನಾಯಕರಾಗಿ ಬಹಳ ಗೌರವಯುತವಾಗಿ ನಡೆದುಕೊಳ್ಳುತ್ತಿದ್ದರು. ಅವರು ಮಾದರಿಯಾಗಿದ್ದರು ಎಂದು ದೇವೇಗೌಡರು ಆ ಸಂದರ್ಭವನ್ನು ನೆನಪು ಮಾಡಿಕೊಂಡರು.

ನಾನು ವಾಜಪೇಯಿ ಅವರ ಬಗ್ಗೆ ಬಹಳಷ್ಟು ಹೇಳಬಲ್ಲೆ. ನಾನು ಆಳುವ ಪಕ್ಷದ ನಾಯಕನಾಗಿದ್ದಾಗ ಅಟಲ್ ಜೀ ವಿರೋಧ ಪಕ್ಷದ ನಾಯಕರಾಗಿದ್ದರು. ನಾನು ವಿರೋಧ ಪಕ್ಷದಲ್ಲಿದ್ದಾಗ ಅವರು ನನ್ನನ್ನು ತುಂಬಾ ಗೌರವದಿಂದ ಕಾಣುತ್ತಿದ್ದರು. ಅವರ ಹಿಂದಿ ಭಾಷಣದ ಅರ್ಥ ತಿಳಿದುಕೊಳ್ಳುತ್ತಿದ್ದೆ. ಬಹಳ ಸೊಗಸಾಗಿ ಅವರು ಹಿಂದಿ ಮಾತನಾಡುತ್ತಿದ್ದರು. ನಾನು ಆಗಾಗ ಅವರ ತಮಾಷೆಗೆ ‘ಸರ್ ನಿಮ್ಮ ಹಿಂದಿಯಿಂದ ದೇಶದ ಸಮಸ್ಯೆ ಬಗೆಹರಿಯಲ್ಲ’ ಅಂತ ಹೇಳುತ್ತಿದ್ದೆ. ಅವರು ನಗುತ್ತಿದ್ದರು. ಬಹಳ ದೊಡ್ಡ ವ್ಯಕ್ತಿ, ದೂರದೃಷ್ಟಿ ಇದ್ದ ನಾಯಕ ಎಂದು ವಾಜಪೇಯಿ ಅವರ ಗುಣಗಾನ ಮಾಡಿದರು ಮಾಜಿ ಪ್ರಧಾನಿಗಳು.

ನಾನು ಕನಸು ಮನಸ್ಸಿನಲ್ಲಿಯೂ ಪ್ರಧಾನಿ ಆಗುತ್ತೇನೆ ಎಂದು ಆಲೋಚನೆ ಮಾಡಿರಲಿಲ್ಲ. ಅವರು ಬರೀ 13 ದಿನ ಅಧಿಕಾರದಲ್ಲಿದ್ದರು. ಕಾಕತಾಳೀಯ ಎಂದರೆ, ಅವರ ನಂತರ 13 ಪಕ್ಷಗಳು ಸೇರಿ ಸಂಯುಕ್ತ ರಂಗ ರಚನೆ ಮಾಡಿ ನನ್ನನ್ನು ಪ್ರಧಾನಿ ಮಾಡಿದರು. ಆಗ ಏನೆಲ್ಲಾ ನಡೆಯಿತು ಎಂದು ನಾನು ಹೇಳಲು ಹೋಗಲ್ಲ. ನಾನು ಬರೀ 320 ದಿನ ಪ್ರಧಾನಿ ಆಗಿದ್ದೆ ಅಷ್ಟೇ ಎಂದು ದೇವೇಗೌಡರು ಹೇಳಿದರು.

ನಾನು ವಾಜಪೇಯಿ ಅವರು ಅಧಿಕಾರದಿಂದ ಇಳಿದ ಮೇಲೆ ಅವರ ಮನೆಗೆ ಹೋಗಿದ್ದೆ. ನನ್ನ ಕಾಲದಲ್ಲಿ ಅಷ್ಟು ಕೆಲಸ ಮಾಡಲು ಆಗಿಲ್ಲ, ನೀವು ದೇಶವನ್ನು ಎಷ್ಟು ಎತ್ತರಕ್ಕೆ ಕೊಂಡೊಯ್ದಿದ್ದೀರಿ ಎಂದು ಅವರಿಗೆ ಹೇಳಿದ್ದೆ. ನಾನು ಆರ್ಡಿನರಿ ಡಿಪ್ಲೊಮಾ ಮಾಡಿದವನು, ರೈತನ ಮಗ. ನೀರನ್ನು ಹೇಗೆ ಉಳಿಸಿಕೊಳ್ಳಬೇಕು, ಬಳಸಿಕೊಳ್ಳಬೇಕು ಎಂದು ತೋರಿಸಿದೆ. ಜನ ಕೊಟ್ಟ ಶಕ್ತಿಯಿಂದ ಈ ಎಲ್ಲ ಕೆಲಸ‌ ಮಾಡಿದೆ ಎಂದು ಅವರಿಗೆ ಹೇಳಿದೆ ಎಂದು ಮಾಜಿ ಪ್ರಧಾನಿಗಳು ಅಂದಿನ ನೆನಪುಗಳನ್ನು ಸಭಿಕರ ಮುಂದೆ ಹಂಚಿಕೊಂಡರು.

ಬಿ.ಎಲ್ ಸಂತೋಷ್ ಬಗ್ಗೆ ಮಾಜಿ ಪ್ರಧಾನಿಗಳ ಮೆಚ್ಚುಗೆ:

ಸಭೆಯಲ್ಲಿ ತಮಗೂ ಮೊದಲು ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಮಾತುಗಳನ್ನು ಬಹುವಾಗಿ ಮೆಚ್ಚಿಕೊಂಡರು ಮಾಜಿ ಪ್ರಧಾನಿಗಳು.

ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ಕೇಂದ್ರ, ರಾಜ್ಯದಲ್ಲಿ ಮಂತ್ರಿ ಆಗಬೇಕು ಎಂದು ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ. ಮೊದಲ ಬಾರಿಗೆ ನಿಮ್ಮ ಭಾಷಣ ಕೇಳಿದ್ದೇನೆ. ಪ್ರಜಾಪ್ರಭುತ್ವದ ಬಗ್ಗೆ, ಮೋದಿ, ಶಾ ಅವರ ಬಗ್ಗೆ ಎದುರಾಳಿಗಳು ಮಾತನಾಡುತ್ತಾರೆ. ಅವರ ಮಾತು ಪೊಳ್ಳು. ಅದಕ್ಕೆ ಬೆಲೆ ಇಲ್ಲ ಎನ್ನುವುದನ್ನು ಜನರ ಮನ ಮುಟ್ಟುವಂತೆ ಮಾತಾಡಿದ್ದೀರಿ. ಮೊದಲ ಬಾರಿಗೆ ನಿಮ್ಮ ಜೊತೆ ನಾನು ವೇದಿಕೆ ಹಂಚಿಕೊಂಡಿದ್ದೇನೆ. ನಿಮ್ಮಲ್ಲಿ ಏನು ಶಕ್ತಿ ಇದೆ ಎಂದು ಅರ್ಥ ಮಾಡಿಕೊಂಡಿದ್ದೇನೆ ಎಂದು ಸಂತೋಷ್ ಅವರನ್ನು ಉದ್ದೇಶಿಸಿ ಮಾಜಿ ಪ್ರಧಾನಿಗಳು ಹೇಳಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ನಿವೃತ್ತ ಐಎಎಸ್ ಅಧಿಕಾರಿ ಮದನ ಗೋಪಾಲ್, ಉನ್ನತ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ತಿಮ್ಮೇಗೌಡ ಅವರೂ ಇದೇ ಸಂದರ್ಭದಲ್ಲಿ ಅಟಲ್ ಪುರಸ್ಕಾರಕ್ಕೆ ಪಾತ್ರರಾದರು.

ಸಭೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೃಷ್ಣೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಮುಕ್ತಾಯ

Tags: Atal bihar ವಾಜಪೇಯಿBJPCongress PartyHD Devegowdaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅನುತ್ತೀರ್ಣರಹಿತ ನೀತಿ’ಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ..!!

Next Post

ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಅಂತಿಮ ಗೌರವ

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post

ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಅಂತಿಮ ಗೌರವ

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada