• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಮ್ಮದು ಸ್ವಚ್ಛ ಆಡಳಿತದ ಸರ್ಕಾರ, ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 30, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

“ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಆತ್ಮಹತ್ಯೆ ಪತ್ರದಲ್ಲಿಅವರ ವಿರುದ್ಧ ನೇರ ಆರೋಪವಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ಬಗ್ಗೆ ನಮಗೆ ಗೊತ್ತಿದೆ. ಗುತ್ತಿಗೆದಾರನ ಸಾವಿನ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ” ಎಂದರು.

ವಿಜಯೇಂದ್ರ, ಯಡಿಯೂರಪ್ಪ ಅವರ ಫೋಟೋ ಬಿಡುಗಡೆ ಮಾಡಲೇ:

ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಎಂಬುವವರು ನಿಮ್ಮ ಜತೆ, ಸಿಎಂ, ಪ್ರಿಯಾಂಕ ಖರ್ಗೆ ಅವರ ಜತೆ ಇರುವ ಫೋಟೋಗಳನ್ನು ವಿಜಯೇಂದ್ರ ಅವರು ಬಿಡುಗಡೆ ಮಾಡಿದ್ದಾರೆ ಎಂದು ಕೇಳಿದಾಗ, “ನನ್ನ ಜೊತೆ ವಿಜಯೇಂದ್ರ, ಯಡಿಯೂರಪ್ಪ ಅವರು ಇರುವ ಫೋಟೋಗಳಿವೆ. ನಮ್ಮ ಮನೆಗೆ ಬಂದವರು, ಮದುವೆ ಕಾರ್ಯಕ್ರಮಕ್ಕೆ ಹೋದಾಗ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ವಿಜಯೇಂದ್ರ, ಯಡಿಯೂರಪ್ಪ ಅವರು ಕ್ರಿಮಿನಲ್, ರೌಡಿಗಳು ಸೇರಿದಂತೆ ಯಾರೆಲ್ಲರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ನಾನು ಬಿಡುಗಡೆ ಮಾಡಲೇ? ಅವರಿಗೆ ಬೇಕು ಎಂದರೆ ಬಿಡುಗಡೆ ಮಾಡುತ್ತೇನೆ. ಆರೋಪಿಗಳು ಹಾಗೂ ನಮ್ಮ ಜತೆ ಮಾತುಕತೆ, ವ್ಯವಹಾರ ನಡೆದಿರುವುದಕ್ಕೆ ದಾಖಲೆ ಇದ್ದರೆ ಆರೋಪ ಮಾಡಲಿ. ನಾವು ಉತ್ತಮವಾಗಿ ಸರ್ಕಾರ ನಡೆಸುತ್ತಿದ್ದು, ವಿರೋಧ ಪಕ್ಷದವರು ಸುಮ್ಮನೆ ಮಾತಾಡಬೇಕು ಎಂಬ ಕಾರಣಕ್ಕೆ ಮಾತನಾಡುತ್ತಾರೆ. ಮಾತಾಡಲಿ ಬಿಡಿ” ಎಂದು ಹೇಳಿದರು.

ಬಿಜೆಪಿ ಅವಧಿಯಲ್ಲಿ ಯಾಕೆ ಸಿಬಿಐ ತನಿಖೆಗೆ ನೀಡಲಿಲ್ಲ?:ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಮುತ್ತಿಗೆ ಹಾಕುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಮುತ್ತಿಗೆ ಹಾಕಲಿ. ನನ್ನ ಸಹೋದರ ಸುರೇಶ್, ರಾಜರಾಜೇಶ್ವರಿ ನಗರದ ಕೆಲವು ಪ್ರಕರಣಗಳನ್ನು ಪ್ರಸ್ತಾಪಿಸಿದ್ದಾರೆ. ಅವೆಲ್ಲವನ್ನು ಸೇರಿಸಿ ಸಿಬಿಐಗೆ ವಹಿಸೋಣ. ಬಿಜೆಪಿ ಸರ್ಕಾರ ಇದ್ದಾಗ ನನ್ನ ಪ್ರಕರಣವನ್ನು ಮಾತ್ರ ಸಿಬಿಐಗೆ ನೀಡಿದ್ದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಸಾವು, ಸೌಜನ್ಯ ಸಾವು, ಪರೇಶ್ ಮೆಸ್ತಾ ಪ್ರಕರಣ ಸೇರಿದಂತೆ ಸುಮಾರು 12 ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿದ್ದೆವು. ಬಿಜೆಪಿಯವರು ನನ್ನ ಪ್ರಕರಣದ ಜತೆ ಬಿಜೆಪಿ ಸಚಿವರ ಪ್ರಕರಣಗಳನ್ನು ಸಿಬಿಐಗೆ ನೀಡಬೇಕಿತ್ತು. ಯಾಕೆ ನೀಡಲಿಲ್ಲ” ಎಂದರು.

ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಬಿಜೆಪಿಗೆ ಅಸೂಯೆ:

ಬಿಜೆಪಿಯವರು ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುತ್ತಿರುವ ಬಗ್ಗೆ ಕೇಳಿದಾಗ, “ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಯಾವ ತಪ್ಪು ಮಾಡಿದ್ದಾರೆ ಎಂದು ರಾಜೀನಾಮೆ ನೀಡಬೇಕು? ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಧ್ವನಿ. ಅವರ ಮೇಲಿನ ಅಸೂಯೆಗೆ ವಿರೋಧ ಪಕ್ಷಗಳು ಈ ರೀತಿ ನಡೆದುಕೊಳ್ಳುತ್ತಿವೆ. ದಲಿತ ಸಮುದಾಯದ ನಾಯಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಐಟಿ-ಬಿಟಿ ಇಲಾಖೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಕೃಷ್ಣ ಅವರ ಸರ್ಕಾರದ ನಂತರ ಐಟಿ-ಬಿಟಿ ಕ್ಷೇತ್ರದಲ್ಲಿ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ. ಹೀಗಾಗಿ ಅವರನ್ನು ಕೆಳಗಿಳಿಸುವ ಸಂಚು ಮಾಡುತ್ತಿದ್ದಾರೆ” ಎಂದರು.

ಕೆಪಿಎಸ್ ಸಿ ಪರೀಕ್ಷೆಯಲ್ಲಿ ಗೊಂದಲದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಗಮನ ಹರಿಸುತ್ತೇವೆ. ಅನ್ಯಾಯ ಆಗಿರುವರಿಗೆ ನ್ಯಾಯ ಒದಗಿಸಲಾಗುವುದು” ಎಂದು ತಿಳಿಸಿದರು.

ರಾಜ್ಯಪಾಲರನ್ನು ಭೇಟಿ ಮಾಡಿ ಬಿಜೆಪಿ ನಾಯಕರು ದೂರು ನೀಡಿದ ಬಗ್ಗೆ ಕೇಳಿದಾಗ, “ಅವರು ನಿತ್ಯ ನಮ್ಮನ್ನು ನೆನೆಯಬೇಕು. ನೆನೆಯಲಿ ಬಹಳ ಸಂತೋಷ” ಎಂದರು.

ಪ್ರಿಯಾಂಕ್ ಖರ್ಗೆ ಅವರ ವಿರುದ್ಧದ ಪ್ರಕರಣ ಸಿಬಿಐಗೆ ಯಾಕೆ ಕೊಡಬಾರದು ಎಂದು ಕೇಳಿದಾಗ, “ಇದು ಸಿಬಿಐಗೆ ನೀಡಬೇಕಾದ ಪ್ರಕರಣವಲ್ಲ. ನಮ್ಮ ತನಿಖಾ ಸಂಸ್ಥೆಗಳು ಈ ಪ್ರಕರಣಗಳ ತನಿಖೆ ಮಾಡಲು ಸಮರ್ಥವಾಗಿವೆ. ಅಧಿಕಾರಿಗಳು ಸಮರ್ಥರಾಗಿದ್ದಾರೆ. ಸಿಬಿಐ ತನಿಖೆ ವೈಖರಿ ನಮಗೂ ಗೊತ್ತಿದೆ” ಎಂದು ತಿಳಿಸಿದರು.

ಹೊಸವರ್ಷದ ಶುಭಾಶಯಗಳು:“ರಾಜ್ಯದ ಜನತೆಗೆ ಹೊಸವರ್ಷದ ಹಾರ್ದಿಕ ಶುಭಾಶಯಗಳು. 2025 ರ ವರ್ಷ ಎಲ್ಲರ ಪಾಲಿಗೂ ಉತ್ತಮವಾಗಿರಲಿ. ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದೆ. ಯಾವುದೇ ದುರ್ವರ್ತನೆ, ಅಹಿತಕರ ಘಟನೆಗೆ ಅವಕಾಶ ಇಲ್ಲ. ನಮಗೆ ಬೆಂಗಳೂರಿನ ಘನತೆ ಬಹಳ ಮುಖ್ಯ. ಯಾರೇ ಕಾನೂನು ಉಲ್ಲಂಘನೆ ಮಾಡಿದರೂ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಾರೆ” ಎಂದು ತಿಳಿಸಿದರು.

Tags: BJP is jealous of Priyank Kharge:BJP leadersCBI investigated during BJP?:contractor's deathDalit community growingDCM D.K ShivakumarHappy New Year:IT-BT departmentMinister Priyank Kharge
Previous Post

ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ವರೆಗೆ ಸಂಜು ವೆಡ್ಸ್ ಗೀತಾ ಕಥೆ..

Next Post

ಸ್ಟೀಮ್ ತೆಗೆದುಕೊಳ್ಳುವುದರಿಂದ ತ್ವಚೆಗೆ ಸಿಗುವಂತಹ ಪ್ರಯೋಜನಗಳೇನು?

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಸ್ಟೀಮ್ ತೆಗೆದುಕೊಳ್ಳುವುದರಿಂದ ತ್ವಚೆಗೆ ಸಿಗುವಂತಹ ಪ್ರಯೋಜನಗಳೇನು?

ಸ್ಟೀಮ್ ತೆಗೆದುಕೊಳ್ಳುವುದರಿಂದ ತ್ವಚೆಗೆ ಸಿಗುವಂತಹ ಪ್ರಯೋಜನಗಳೇನು?

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada