• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
January 10, 2025
in ಕರ್ನಾಟಕ, ದೇಶ, ರಾಜಕೀಯ
0
ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

“ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಹಿರಿಯ ನಾಯಕರ ಸಭೆಯಲ್ಲಿ ಚರ್ಚಿಸಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ತಮ್ಮ ಸರ್ಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಈಗಾಗಲೇ 72 ಕಡೆ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಅರ್ಜಿ ಬಂದಿವೆ. ಉಳಿದ ಕಡೆಗಳು ಸೇರಿ 100 ಕಚೇರಿ ನಿರ್ಮಾಣ ಮಾಡಲಾಗುವುದು. ಸಚಿವರು ಪಕ್ಷದ ಹಿರಿಯ ನಾಯಕರಿಗೆ ಇದರ ಜವಾಬ್ದಾರಿ ನೀಡಲಾಗಿದೆ. ಶಾಸಕರಿಗೂ ಬೇರೆ ಬೇರೆ ಜವಾಬ್ದಾರಿ ನೀಡಲಾಗಿದೆ” ಎಂದು ತಿಳಿಸಿದರು.

ಸರ್ಕಾರದ ಬಗ್ಗೆ ಭವಿಷ್ಯ ನುಡಿಯವುದು ಬೇಡ

ಇದೇ ಅವಧಿಯಲ್ಲಿ ನೀವು ಸಿಎಂ ಆಗುತ್ತೀರಿ ಎಂಬ ವಿನಯ್ ಗುರೂಜಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

DK Shivakumar :ಕುಮಾರಸ್ವಾಮಿ ಕದ್ದು ಪೂಜೆ ಮಾಡ್ತಾನೆ ನಾನ್ ನೇರವಾಗಿ ಪೂಜೆ ಮಾಡ್ತೀನಿ  Dks ವಾರ್ನಿಂಗ್.! #dks #hdk

ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿರುವಾಗ ಈ ಹೇಳಿಕೆ ಬಂದಿದೆ ಎಂದು ಕೇಳಿದಾಗ, “ಯಾವ ಪವರ್ ಇಲ್ಲ, ಶೇರು ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ” ಎಂದರು.

ಸಂಪುಟ ಸಭೆಯಲ್ಲಿ ಜಾತಿ ಗಣತಿ ಚರ್ಚೆ

ಜಾತಿ ಗಣತಿ ವಿರೋಧಿಸಿ ಒಕ್ಕಲಿಗ ಹಾಗೂ ಲಿಂಗಾಯತ ನಾಯಕರ ಸಭೆ ನಡೆಯುವುದೇ ಎಂದು ಕೇಳಿದಾಗ, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಈ ಬಗ್ಗೆ ಯಾವುದೇ ಸಭೆ ಇಲ್ಲ. ಅದರ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದು, ಅಲ್ಲಿ ನಾವು ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ನಾನು, ಸಿಎಂ ಚರ್ಚಿಸಿ ಸಿಎಲ್ ಪಿ ಸಭೆ

13ರಂದು ಕರೆಯಲಾಗುವ ಸಿಎಲ್ ಪಿ ಸಭೆ ಬಗ್ಗೆ ಕೇಳಿದಾಗ, “ನಾನು ಹಾಗೂ ಸಿಎಂ ಚರ್ಚೆ ಮಾಡಿಯೇ ಕರೆದಿದ್ದೇವೆ. ಅಂದು ಇಡೀ ದಿನ ಪಕ್ಷಕ್ಕೆ ಮುಡಿಪಾಗಿಡಬೇಕು ಎಂದು ಹೇಳಿ, ಅಂದಿನ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಬೆಳಗ್ಗೆ 11 ಗಂಟೆಗೆಭಾರತ ಜೋಡೋ ಭವನದಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ಸಭೆ ಕರೆಯಲಾಗಿದೆ. ಸಂಜೆ 4 ಗಂಟೆಗೆ ಪದಾಧಿಕಾರಿಗಳ ಸಭೆ ಕರೆದಿದ್ದೇವೆ. ಸಂಜೆ 6 ಗಂಟೆಗೆ ಶಾಸಕರು, ಸಚಿವರ ಸಭೆ ಮಾಡಿ ಜವಾಬ್ದಾರಿ ನೀಡಲಾಗುವುದು. 14ರಂದು ನಾನು ಹಾಗೂ ಸಿಎಂ ದೆಹಲಿಗೆ ತೆರಳಲಿದ್ದು, 15ರಂದು ದೆಹಲಿಯಲ್ಲಿ ಕಾಂಗ್ರೆಸ್ ನೂತನ ಕಚೇರಿ ಉದ್ಘಾಟನೆ ಮಾಡಲಾಗುವುದು” ಎಂದು ತಿಳಿಸಿದರು.

Kumaraswamy  : ಸೈನಿಕನಿಗೆ ಖಡಕ್ ಸವಾಲ್ ಹಾಕಿದ ಕುಮಾರಣ್ಣ #pratidhvani

ತಮ್ಮ ಅನುಭವದ ಮೇಲೆ ಕುಮಾರಸ್ವಾಮಿ ಹೇಳಿಕೆ:

ಪ್ರತಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ನಮಗೆ ಈ ವಿಚಾರ ಗೊತ್ತಿಲ್ಲ. ಅವರು ತಮ್ಮ ಅನುಭವದ ಮೇಲೆ ಮಾತನಾಡುತ್ತಿರಬೇಕು” ಎಂದು ತಿಳಿಸಿದರು.

ಶತ್ರುಗಳ ನಾಶಕ್ಕೆ ಪೂಜೆ ಮಾಡಿಸಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಅನುಭವವಲ್ಲವೇ. ಅವರು ಕದ್ದು ಮುಚ್ಚಿ ಹೋಮ ಮಾಡುತ್ತಾರೆ. ನಾನು ಬಹಿರಂಗವಾಗಿ ಮಾಡುತ್ತೇನೆ. ದಿನ ಬೆಳಗಾದರೆ ನಾನು ದೇವರಿಗೆ ಪೂಜೆ ಮಾಡುತ್ತೇನೆ” ಎಂದರು.

ದೊಡ್ಡವರ ಬಗ್ಗೆ ಮಾತನಾಡುವುದು ಬೇಡ:

ನಮ್ಮ ಸಭೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಿನಗೆ ಈ ಬಗ್ಗೆ ಗೊತ್ತಿಲ್ಲ. ನಾವು ಯಾರನ್ನೂ ತಡೆದಿಲ್ಲ. ಅದರ ಅವಶ್ಯಕತೆ ನಮಗಿಲ್ಲ. ದೊಡ್ಡವರ ಬಗ್ಗೆ ಮಾತನಾಡುವುದು ಬೇಡ” ಎಂದು ತಿಳಿಸಿದರು.

ಡಿನ್ನರ್ ಸಭೆ ಬಗ್ಗೆ ಕೇಳಿದಾಗ, “ಯಾವ ಡಿನ್ನರ್ ಸಭೆ ಇಲ್ಲ” ಎಂದು ತಿಳಿಸಿದರು.

Tags: :congress leader siddaramaiah100 crore relief fund for kodaguchief minister of karnatakacm announces 100 crore for kodagucongress cm candidatecongress cm candidate in karnatakaCongress High CommandDK Shivakumarkarnataka election resultKarnataka Election Result 2023karnataka election result 2023 datekarnataka election result liveKarnataka Election Resultskarnataka election results livekumaraswamy press meet in kodagu
Previous Post

ಕೋರ್ಟ್‌ ಕಟಕಟೆಯಲ್ಲಿ ಸಿಕ್ಕ ಗೆಳಯನಿಗೆ ಕಣ್ಣಲ್ಲೇ ಹೇಳಿಕೊಂಡ ಗೆಳತಿ..

Next Post

ಕಾಂಗ್ರೆಸ್‌ನಲ್ಲಿ ಯಾವ ಸಭೆಯೂ ನಡೆಯಲ್ಲ.. ಪಕ್ಷ ವಿಪಕ್ಷಕ್ಕೆ ಡಿಸಿಎಂ ಡಿಚ್ಚಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಕಾಂಗ್ರೆಸ್‌ನಲ್ಲಿ ಯಾವ ಸಭೆಯೂ ನಡೆಯಲ್ಲ.. ಪಕ್ಷ ವಿಪಕ್ಷಕ್ಕೆ ಡಿಸಿಎಂ ಡಿಚ್ಚಿ

ಕಾಂಗ್ರೆಸ್‌ನಲ್ಲಿ ಯಾವ ಸಭೆಯೂ ನಡೆಯಲ್ಲ.. ಪಕ್ಷ ವಿಪಕ್ಷಕ್ಕೆ ಡಿಸಿಎಂ ಡಿಚ್ಚಿ

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada