• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ : ಸಚಿವ ಜಾರ್ಜ್‌

ಪ್ರತಿಧ್ವನಿ by ಪ್ರತಿಧ್ವನಿ
January 22, 2025
in Top Story, ಇದೀಗ, ದೇಶ, ರಾಜಕೀಯ, ವಾಣಿಜ್ಯ
0
ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ : ಸಚಿವ ಜಾರ್ಜ್‌
Share on WhatsAppShare on FacebookShare on Telegram

ಬಾಗಲಕೋಟೆ: ಜ.22,2025: ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು.

ADVERTISEMENT

ನೂತನ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಬುಧವಾರ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆ ಮನೆಗಳಿಗೂ ನಿರಂತರ ಜ್ಯೋತಿ ಮೂಲಕ ವಿದ್ಯುತ್ ಸಂಪರ್ಕ ಅಗತ್ಯವಿದದೆ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು,” ಎಂದು ತಿಳಿಸಿದರು.

“ತೋಟದ ಮನೆಗಳಿಗೆ ಸದ್ಯ 7 ಗಂಟೆ ತ್ರೀ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಉಳಿದಂತೆ ಸಂಜೆ 6 ರಿಂದ ಬೆಳಗ್ಗೆ 6 ಗಂಟೆವರೆಗೆ ಸಿಂಗಲ್ ಫೇಸ್ ಓಪನ್ ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಪೂರೈಸಲಾಗುತ್ತಿದೆ,” ಎಂದು ತಿಳಿಸಿದರು.

“ರಾಜ್ಯದಲ್ಲಿ ಕಳೆದ ವರ್ಷದ ಬೇಸಿಗೆಯಲ್ಲಿ ಒಂದು ತಿಂಗಳು ಮಾತ್ರ ವಿದ್ಯುತ್ ಸಮಸ್ಯೆಯಿತ್ತು. ಆದರೂ ಜನರಿಗೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. ಪಂಜಾಬ್‌ ಹಾಗೂ ಉತ್ತರ ಪ್ರದೇಶಗಳ ಜತೆ ವಿದ್ಯುತ್‌ ವಿನಿಮಯ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮುಂಬರುವ ಬೇಸಿಗೆಯಲ್ಲೂ ಜನರಿಗೆ ವಿದ್ಯುತ್ ಪೂರೈಸಲು ಇಲಾಖೆ ಸನ್ನದ್ದವಾಗಿದೆ,” ಎಂದರು.

ಸಚಿವರಿಗೆ ಮನವಿ
ಹುನಗುಂದ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮರೋಳ – ರಾಮಥಾಳ ಏತ ನೀರಾವರಿ, ನಂದವಾಡಗಿ ಏತ ನೀರಾವರಿ ಇರುವದರಿಂದ ಈ ಭಾಗದಲ್ಲಿ 220 ಕೆವಿ ಸಬ್ ಸ್ಟೇಷನ್ ಅಗತ್ಯವಿದೆ. ಇದಕ್ಕೆ ಅನುಮೋದನೆ ದೊರೆತಿದ್ದರೂ ಕಾಮಗಾರಿ ಪ್ರಾರಂಭವಾಗಿಲ್ಲ. ಈ ನಿಟ್ಟಿನಲ್ಲಿ ಕ್ರಮವಹಿಸಬೇಕು. ಹಾಗೂ, ಇಳಕಲ್ಲ ನಗರದಲ್ಲಿ 6 ಎಕರೆ ಜಾಗದಲ್ಲಿ ಸುಸಜ್ಜಿತವಾದ ಕ್ರೀಡಾಂಗಣ ನಿರ್ಮಿಸಲಾಗುತ್ತಿದ್ದು, ಅದರ ಮೇಲೆ ಹಾದುಹೋಗಿರು ಹೈ ಓಲ್ಟೇಜ್ ಲೈನ್‌ ತೆರವುಗೊಳಿಸುವಂತೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರು ಸಚಿವರಲ್ಲಿ ಮನವಿ ಮಾಡಿದರು.

ಸಬ್‌ ಸ್ಟೇಷನ್‌ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭಿಸುವುದರ ಜತೆಗೆ ಇತರೆ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸಲು ಸಚಿವ ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.

ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಮಾತನಾಡಿ, ” ಐತಿಹಾಸಿಕ ಪ್ರವಾಸಿ ತಾಣ ಬಾದಾಮಿಯಲ್ಲಿ ಕೈಗಾರಿಕೆಗಳು ಅದರಲ್ಲೂ ವಿಶೇಷವಾಗಿ ಗುಳೇದಗುಡ್ಡ, ಕೆರೂರ ಭಾಗದಲ್ಲಿ ಫವರ್ ಲೂಮ್ ಹೆಚ್ಚಿವೆ. ಹಾಗಾಗಿ ಇಲ್ಲಿ 220 ಕೆ.ವಿ ವಿದ್ಯುತ್‌ ಉಪಕೇಂದ್ರ ಅಗತ್ಯವಿದ್ದು, ಅದಕ್ಕೆ ಅವಶ್ಯವಾಗಿರುವಷ್ಟು ಭೂಮಿಯನ್ನು ನೀಡಲಾಗುವುದು.
ಈ ಭಾಗದ ಬೇಲೂರ, ನಂದಿಕೇಶ್ವರ 33/11 ಕೆ.ವಿಯಿಂದ 110 ಕೆವಿ ಮೇಲ್ದರ್ಜೆಗೆ ಏರಿಸಬೇಕಾಗಿದೆ. ಅಲ್ಲದೇ, ಬಾದಾಮಿ ಹಾಗೂ ಗುಳೇದಗುಡ್ಡ ಉಪ ವಿಭಾಗಗಳನ್ನು ಸೇರಿಸಿ ಬಾದಾಮಿಯಲ್ಲಿ ನೂತನ ವಿಭಾಗೀಯ ಕಚೇರಿ ಅಗತ್ಯವಾಗಿದೆ,” ಎಂದು ಮನವಿ ಮಾಡಿದರು.

ಬೀಳಗಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿ, “ಬೀಳಗಿಯ 220 ಕೆವಿ ಹಾಗೂ 110 ಕೆ.ವಿ ಸುನಗ ವಿದ್ಯುತ್ ವಿತರಣಾ ಕೇಂದ್ರಗಳ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕೂಡಲೇ ಪೂರ್ಣಗೊಳಿಸಿ ಚಾಲನೆಗೊಳಿಸಲು ಕ್ರಮವಹಿಸುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡರು.

ಅಲ್ಲದೇ ಸಿದ್ದಾಪೂರ, ಅರಕೇರಿ, ಚಿಕ್ಕಹಂಚಿನಾಳ ಮತ್ತು ಚಿಕ್ಕಾಲಗುಂಡಿಯಲ್ಲಿ ಹೊಸದಾಗಿ 110 ಕೆವಿ ವಿದ್ಯುತ್ ಕೇಂದ್ರ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿಸಿದರು.

ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ಸಚಿವ ಜಾರ್ಜ್‌ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ಎಚ್.ಟಿ. ಹಾಗೂ ಎಲ್‌ಟಿ ಮಾರ್ಗದ ವಾಹನ ಬದಲಾವಣೆ ಕಾಮಗಾರಿಗಳು ಮಂಜೂರಾಗಿದ್ದು, ಆದ್ಯತೆ ಮೇರೆಗೆ ಕಾಮಗಾರಿ ಕೈಗೆತ್ತಿಗೊಳ್ಳಬೇಕಿದೆ. ಅಲ್ಲದೇ ಹೆಚ್ಚುವರಿಯಾಗಿ ಪರಿವರ್ತಕಗಳನ್ನು ಸಹ ಅಳವಡಿಸಲು ಬಾಕಿ ಇದ್ದು, ತುರ್ತಾಗಿ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲು ಇಂಧನ ಸಚಿವರಿಗೆ ತಿಳಿಸಿದರು.

ಈ ಬಗ್ಗೆ ಆದ್ಯತೆ ಮೇರೆಗೆ ಕ್ರಮವಹಿಸಲು ಜಾರ್ಜ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಹೆಸ್ಕಾಂ ಅಧ್ಯಕ್ಷರಾದ ಸೈಯದ್‌ ಅಜೀಮ್‌ಪೀರ್‌ ಖಾದ್ರಿ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕನ್ನವರ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ವೈಶಾಲಿ ಎಂ.ಎಲ್, ಕೆಪಿಟಿಸಿಎಲ್‌ನ ವ್ಯವಸ್ಥಾಪಕ‌ ನಿರ್ದೇಶಕರಾದ ಪಂಕಜಕುಮಾರ ಪಾಂಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಲೋಡ್‌ ಶೆಡ್ಡಿಂಗ್‌ ಇಲ್ಲ
ಈ ವರ್ಷ ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ಕಳೆದ ವರ್ಷ ಬರಗಾಲ ಇದ್ದಾಗಲೇ ಲೊಡ್‌ ಶೆಡ್ಡಿಂಗ್‌ ಮಾಡಿರಲಿಲ್ಲ. ಈ ವರ್ಷ ಜಲಾಶಯಗಳಲ್ಲಿಯೂ ನೀರಿನ ಸಂಗ್ರಹ ಚನ್ನಾಗಿದೆ. ಒಂದು ವೇಳೆ ವಿದ್ಯುತ್‌ ಕೊರತೆ ಎದುರಾದರೆ ಬೇರೆ ರಾಜ್ಯಗಳಿಂದ ವಿದ್ಯುತ್‌ ವಿನಿಮಯ ಒಪ್ಪಂದ ಅಥವಾ ಖರೀದಿ ಮಾಡಿ ಸರಬರಾಜು ಮಾಡಲಾಗುವುದು ಎಂದು ಇಂಧನ ಇಲಾಖೆಯ ಸಚಿವ ಕೆ.ಜೆ ಜಾರ್ಜ್‌ ಅವರು ಬುಧವಾರ ಬಾಗಲಕೋಟೆಯ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

Tags: BJPCongress PartyKJ Geoargeಎಚ್ ಡಿ ಕುಮಾರಸ್ವಾಮಿತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ : ಸಚಿವ ಜಾರ್ಜ್‌ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ತಾಯಿ ಮಕ್ಕಳ ಮರಣ ಪ್ರಮಾಣ ಕಡಿಮೆಗೊಳಿಸಲು ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

ರಾತ್ರಿ ಊಟಕ್ಕೆ ಗೋಧಿ ಚಪಾತಿ ಸೇವಿಸುದರಿಂದ, ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Related Posts

7 ಕೋಟಿ ರೂ. ದರೋಡೆ: ಖಾಲಿ ಬಾಕ್ಸ್ ಗಳು ಪತ್ತೆ
ಇದೀಗ

7 ಕೋಟಿ ರೂ. ದರೋಡೆ: ಖಾಲಿ ಬಾಕ್ಸ್ ಗಳು ಪತ್ತೆ

by ಪ್ರತಿಧ್ವನಿ
November 22, 2025
0

ಬೆಂಗಳೂರು: ನಗರದಲ್ಲಿ ನಡೆದ 7.11 ಕೋಟಿ ರೂ ದರೋಡೆ ಪ್ರಕರಣ ಸಂಬಂಧ ಹಣ ತುಂಬಲು ಬಳಸುತ್ತಿದ್ದ ಬಾಕ್ಸ್ ಗಳು ಆಂದ್ರಪ್ರದೇಶದ ಚಿತ್ತೂರು ಬಳಿ ಪತ್ತೆಯಾಗಿವೆ. ಆದರೆ ಸಿಕ್ಕಿರೋ...

Read moreDetails
ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ

ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ

November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
Next Post
ರಾತ್ರಿ ಊಟಕ್ಕೆ ಗೋಧಿ ಚಪಾತಿ ಸೇವಿಸುದರಿಂದ, ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ರಾತ್ರಿ ಊಟಕ್ಕೆ ಗೋಧಿ ಚಪಾತಿ ಸೇವಿಸುದರಿಂದ, ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Recent News

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

7 ಕೋಟಿ ರೂ. ದರೋಡೆ: ಖಾಲಿ ಬಾಕ್ಸ್ ಗಳು ಪತ್ತೆ

7 ಕೋಟಿ ರೂ. ದರೋಡೆ: ಖಾಲಿ ಬಾಕ್ಸ್ ಗಳು ಪತ್ತೆ

November 22, 2025
ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ

ಡಿಸಿಎಂ ಡಿಕೆಶಿ ಮನೆಯಲ್ಲಿ ಸಿದ್ದೇಶ್ವರ ಪಾದುಕೆ ಪೂಜೆ

November 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada