• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಸುಮ್- ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು: ಸಚಿವ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
January 26, 2025
in Top Story, ಜೀವನದ ಶೈಲಿ, ದೇಶ, ರಾಜಕೀಯ, ವಿದೇಶ, ವಿಶೇಷ
0
ಕುಸುಮ್- ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು: ಸಚಿವ ಕೆ.ಜೆ.ಜಾರ್ಜ್
Share on WhatsAppShare on FacebookShare on Telegram
  • ರಾಜ್ಯದಲ್ಲಿ ಟ್ರಾನ್ಸ್ ಫಾರ್ಮರ್ ಸಮಸ್ಯೆ ಇಲ್ಲ: ಸಮರ್ಪಕ ವಿದ್ಯುತ್ ಪೂರೈಕೆ ಇಂಧನ ಇಲಾಖೆ ಗುರಿ

ಚಿಕ್ಕಮಗಳೂರು, ಜ. 26, 2025: ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮತ್ತು ರೈತರ ಕೃಷಿ ಪಪ್ ಸೆಟ್ ಗಳಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಕುಸುಮ್-ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ADVERTISEMENT

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕುಸುಮ್- ಬಿ ಯೋಜನೆಯಡಿ ರೈತರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವುದು ಮತ್ತು ಕುಸುಮ್- ಸಿ ಯೋಜನೆಯಡಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಫೀಡರ್ ಗಳನ್ನು ಸೋಲರೈಸೇಷನ್ ಮಾಡಲಾಗುತ್ತಿದೆ. ಕುಸುಮ್-ಸಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿ ರೈತರಿಗೆ ಪೂರೈಸಲಾಗುತ್ತದೆ”, ಎಂದು ತಿಳಿಸಿದರು.

“ರಾಜ್ಯದಲ್ಲಿ ಪ್ರಸ್ತುತ 17,500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಅದಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆಗೂ ಕ್ರಮ ಕೈಗೊಳ್ಳಲಾಗಿದೆ. ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವುದು ಮತ್ತು ಕುಸುಮ್-ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ ರೈತರಿಗೆ ವಿದ್ಯುತ್ ಪೂರೈಸುವುದರಿಂದ ಬೇಡಿಕೆಯ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತಿದೆ”, ಎಂದು ತಿಳಿಸಿದರು.

“ಕುಸುಮ್-ಸಿ ಯೋಜನೆಯಡಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಜಾಗ ಬೇಕಾಗುತ್ತದೆ. ಸರ್ಕಾರಿ ಜಾಗ ಇದ್ದರೆ ಅದನ್ನು ಉಚಿತವಾಗಿ ಗುತ್ತಿಗೆದಾರರಿಗೆ ನೀಡಲಾಗುವುದು. ಅವರು ಪ್ರತಿ ಎಕರೆಗೆ ವಾರ್ಷಿಕ 25 ಸಾವಿರ ರೂ.ನಂತೆ ನೀಡಬೇಕು.ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಇಟ್ಟು ಸೋಲಾರ್ ಘಟಕ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿ ಅಭಿವೃದ್ಧಿ ಅಥವಾ ನೀರು ಪೂರೈಕೆ ಕಾಮಗಾರಿಗೆ ಬಳಸಿಕೊಳ್ಳಲಾಗುವುದು. ಸರ್ಕಾರಿ ಭೂಮಿ ಲಭ್ಯವಿಲ್ಲದಿದ್ದರೆ ಖಾಸಗಿಯವರಿಂದ ಭೂಮಿ ಪಡೆದು ಅವರಿಗೆ ಪ್ರತಿ ಎಕರೆಗೆ ವಾರ್ಷಿಕ 25 ಸಾವಿರ ರು. ಪಾವತಿಸಲಾಗುವುದು”, ಎಂದು ಹೇಳಿದರು.

ರಾಜ್ಯದಲ್ಲಿ ಟ್ರಾನ್ಸ್ ಫಾರ್ಮರ್ ಸಮಸ್ಯೆ ಇಲ್ಲ:
“ರಾಜ್ಯದಲ್ಲಿ ಟ್ರಾನ್ಸ್ ಫಾರ್ಮರ್ ಗಳ ಕೊರತೆ ಇಲ್ಲ. ಈಗಾಗಲೇ ರಾಜ್ಯಾದ್ಯಂತ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಗಳನ್ನು ಸ್ಥಾಪಿಸಿ ದಾಸ್ತಾನು ಮಾಡಲಾಗಿದೆ. ಟ್ರಾನ್ಸ್ ಫಾರ್ಮರ್ ಗಳ ಸಮಸ್ಯೆ ಎದುರಾದರೆ ಟೋಲ್ ಫ್ರೀ ನಂಬರ್ 1912ಗೆ ಕರೆ ಮಾಡಿದ 72 ಗಂಟೆಗಳಲ್ಲಿ ಟ್ರಾನ್ಸ್ ಫಾರ್ಮರ್ ಆಳವಡಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ”, ಎಂದರು.

“ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನ ಸಭೆ ನಡೆಸಿದ್ದೇನೆ. ಎಲ್ಲಿಯೂ ಟ್ರಾನ್ಸ್ ಫಾರ್ಮರ್ ಗಳ ಕೊರತೆ ಇರುವ ಬಗ್ಗೆ ಮಾಹಿತಿ ಬಂದಿಲ್ಲ. ಜನರಿಗೆ ಸಮರ್ಪಕವಾಗಿ ವಿದ್ಯುತ್ ಒದಗಿಸುವುದು ಇಂಧನ ಇಲಾಖೆಯ ಗುರಿಯಾಗಿದೆ”, ಎಂದರು.

“ರಾಜ್ಯದಲ್ಲಿ 4.50 ಲಕ್ಷ ಅಕ್ರಮ ಪಂಪ್ ಸೆಟ್ ಗಳಿದ್ದವು. ಈ ಪೈಕಿ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಬೇಕಾಗಿದೆ. ಹೀಗಾಗಿ ವಿದ್ಯುತ್ ಲೈನ್ ನಿಂದ 500 ಮೀಟರ್ ಒಳಗಡೆ ಇರುವ ಕೊಳವೆ ಬಾವಿಗಳಿಗೆ ಸಂಪರ್ಕ ಸಕ್ರಮಗೊಳಿಸಲಾಗುವುದು. 500 ಮೀಟರ್ ಗಿಂತ ದೂರ ಇರುವ ಕೊಳವೆ ಬಾವಿಗಳಿಗೆ ಕುಸುಮ್- ಬಿ ಯೋಜನೆ ಅಡಿ ಸೌರ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ”, ಎಂದು ಮಾಹಿತಿ ನೀಡಿದರು.

“ಗಣರಾಜ್ಯೋತ್ಸವ ಅಂಗವಾಗಿ ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಏರ್ಪಡಿಸಿರುವುದರಿಂದಾಗಿ ಗಣರಾಜ್ಯೋತ್ಸವ ಒಂದು ರೀತಿಯ ಹಬ್ಬವಾಗಿ ಪರಿವರ್ತನೆಯಾಗಿದೆ. ಇಲ್ಲಿ ನಮ್ಮ ಸಂಸ್ಕೃತಿ ಹಾಗೂ ಆಹಾರ ಪದ್ಧತಿಯನ್ನು ಪರಿಚಯ ಮಾಡುವ ಕೆಲಸ ಮಾಡಲಾಗಿದೆ ಎಂದರು.ಅವರಿಗೆ ಮನವಿ ಮಾಡಲಾಗಿದೆ”, ಎಂದು ಹೇಳಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಚಿವ ಕೆ.ಜೆ.ಜಾರ್ಜ್ಸಿದ್ದರಾಮಯ್ಯ
Previous Post

ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ: ಸಚಿವ ಕೆ.ಜೆ.ಜಾರ್ಜ್

Next Post

ನಟ ಶಿವರಾಜ್ ಕುಮಾರ್ ಅವರು ಬದುಕಿನ ಯುದ್ಧ ಗೆದ್ದು ಬಂದಿರುವುದು ನಮಗೆಲ್ಲಾ ಸಂಭ್ರಮದ ಕ್ಷಣ: ಕೆ.ವಿ.ಪ್ರಭಾಕರ್

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ನಟ ಶಿವರಾಜ್ ಕುಮಾರ್ ಅವರು ಬದುಕಿನ ಯುದ್ಧ ಗೆದ್ದು ಬಂದಿರುವುದು ನಮಗೆಲ್ಲಾ ಸಂಭ್ರಮದ ಕ್ಷಣ: ಕೆ.ವಿ.ಪ್ರಭಾಕರ್

ನಟ ಶಿವರಾಜ್ ಕುಮಾರ್ ಅವರು ಬದುಕಿನ ಯುದ್ಧ ಗೆದ್ದು ಬಂದಿರುವುದು ನಮಗೆಲ್ಲಾ ಸಂಭ್ರಮದ ಕ್ಷಣ: ಕೆ.ವಿ.ಪ್ರಭಾಕರ್

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada