• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರೀರಾಮುಲು ಅಧ್ಯಕ್ಷ ಆದರೆ ಬಂಡಾಯ ಪಡೆ ಬೆಂಬಲ.. ಬಹಿರಂಗವಾಗಿ ಘೋಷಣೆ..

ಕೃಷ್ಣ ಮಣಿ by ಕೃಷ್ಣ ಮಣಿ
February 4, 2025
in Top Story, ಕರ್ನಾಟಕ, ರಾಜಕೀಯ
0
ಶ್ರೀರಾಮುಲು ಅಧ್ಯಕ್ಷ ಆದರೆ ಬಂಡಾಯ ಪಡೆ ಬೆಂಬಲ.. ಬಹಿರಂಗವಾಗಿ ಘೋಷಣೆ..
Share on WhatsAppShare on FacebookShare on Telegram

ದೆಹಲಿಯಲ್ಲಿ ಬಂಡಾಯರು ಬೀಡುಬಿಟ್ಟಿದ್ದು, ಬಂಡಾಯ ಟೀಂ ನಾಯಕ ಯತ್ನಾಳ್‌ ಕೂಡ ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಯತ್ನಾಳ್‌, ವಿಜಯೇಂದ್ರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರೆಯತ್ತೆನೆ ಅನ್ನೊ ಬಿ.ವೈ ವಿಜಯೇಂದ್ರ ಹೇಳಿಕೆಗೆ ಕೌಂಟರ್‌ ಕೊಟ್ಟಿದ್ದು, ಮೊದಲು ರಾಜ್ಯಧ್ಯಕ್ಷ ಸ್ಥಾನಕ್ಕೆ ಚುನಾವಣೆಯಾಗಲಿ, ಅಲ್ಲಿಯವರೆಗೂ ಕೈ ಮುಗಿದುಕೊಂಡು ಓಡಾಡಲಿ ಎಂದಿದ್ದಾರೆ.

ADVERTISEMENT

ನಮ್ಮಲ್ಲಿ ತೀರ್ಮಾನ ಮಾಡಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಹಾಕ್ತೆವೆ ಎಂದಿರುವ ಯತ್ನಾಳ್‌, ಲಿಂಗಾಯತ ಕೋಟಾ ಬಂದ್ರೆ ಐ ಆ್ಯಮ್‌ ರೆಡಿ ಎಂದಿದ್ದಾರೆ. ನಮಗೆ ಎಲ್ಲಾ ರಾಷ್ಟ್ರೀಯ ನಾಯಕರು ಸಮಯ ನೀಡಿದ್ದಾರೆ. ಸುಮ್ನೆ ದೆಹಲಿಗೆ ಹೋಗೊಕೆ ನಾವೇನು ಹುಚ್ಚರಾ…? ಎಂದಿರುವ ಯತ್ನಾಳ್‌, ಯಾರು ತೆಲೆ ಕೆಡಿಸಿಕೊಳ್ಳಬೇಡಿ ಎಲ್ಲ ಒಳೆಯದಾಗುತ್ತೆ ಎಂದಿದ್ದಾರೆ. ವಿಜಯೇಂದ್ರ ಹೋದ್ರೆ ನಾಲ್ಕೈದು ದಿನದಲ್ಲಿ ಪಾರ್ಟಿಯಲ್ಲಿ ಎಲ್ಲವೂ ಒಳ್ಳೆಯದಾಗುತ್ತದೆ ಎನ್ನುವ ಮೂಲಕ ವಿಜಯೇಂದ್ರರನ್ನು ಹೊರಹಾಕ್ತೀವಿ ಅನ್ನೋ ಸುಳಿವು ನೀಡಿದ್ದಾರೆ.

H. D. Kumaraswamy : ಲೋಕಸಭೆಯಲ್ಲಿ ಮೋದಿ ಭಾಷಣ ಶುರು..! ಕುಮಾರಸ್ವಾಮಿ ನಿದ್ದೆ ....!#pratidhvani

ನಮ್ಮದು ಮೂರು ಅಜೆಂಡಾ ಇದೆ, ಹಿಂದುತ್ವ, ಕುಟುಂಬ ರಾಜಕಾರಣ, ಭ್ರಷ್ಟಾಚಾರದ ವಿರುದ್ದ ನಮ್ಮ ಹೋರಾಟ. ಕೇಂದ್ರದ ನಾಯಕರು ಇದಕ್ಕೆ ಉತ್ತರ ನೀಡಬೇಕು. ಕುಟುಂಬ ರಾಜಕಾರಣದ ಬಗ್ಗೆ ಮಾತನಾಡ್ತಿರಿ. ಇಲ್ಲಿ ಯಡಿಯೂರಪ್ಪ ಮಗನ್ನ ಅಧ್ಯಕ್ಷ ಮಾಡಿದ್ದಿರಿ. ಹೀಗೆಲ್ಲಾ ಮಾಡೋದಿದ್ದರೇ ಇನ್ಮೇಲೆ ಕುಟುಂಬ ರಾಜಕಾರಣ, ಭ್ರಷ್ಟಾಚಾರ, ಹಿಂದುತ್ವ ಬಗ್ಗೆ ಮಾತನಾಡಬೇಡಿ ಎಂದು ಕೇಂದ್ರದ ನಾಯಕರ ವಿರುದ್ಧವೂ ಗುಡುಗಿದ್ದಾರೆ.

ಯತ್ನಾಳ್‌ರಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿ ಹೋಗಿದೆ ಎನ್ನುವ ವಿಜಯೇಂದ್ರ ಹೇಳಿಕೆಗೆ ಶಾಸಕ ಯತ್ನಾಳ್ ತಿರುಗೇಟು ಕೊಟ್ಟಿದ್ದು, ನಮ್ಮಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿಲ್ಲ. ಯತ್ನಾಳರಿಂದಲೇ ನಮ್ಮ ಪಾರ್ಟಿಯ ಕಾರ್ಯಕರ್ತರು ಜೀವಂತವಾಗಿದ್ದಾರೆ. ನಮಗೆ ಬೇರೆಯವರಂತೆ ದೇಶ ವಿದೇಶಗಳಲ್ಲಿ ಆಸ್ತಿ ಮಾಡಿಡುವ ಆಸಕ್ತಿ ಇಲ್ಲ. ವಿಜಯೇಂದ್ರ ದುಬೈನಲ್ಲಿ, ಸಿಂಗಾಪೂರನಲ್ಲಿ ಆಸ್ತಿ ಮಾಡಿಟ್ಟು ಏನು ಮಾಡ್ತಾನೆ. ಜನರಿಗೆ ದಾನ ಕೊಡು ಒಳ್ಳೆಯದಾಗುತ್ತೆ. ಆದ್ರೆ ಯಾರಿಗಾದರೂ ಒಳ್ಳೆಯದಾಗಲಿ ಅಂತ ಹೇಳೊಕೆ ಅವರಿಂದ ಸಾಧ್ಯವೇ ಇಲ್ಲ ಎಂದ ವ್ಯಂಗ್ಯವಾಡಿದ್ದಾರೆ.

ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರೆಯುತ್ತೇನೆ ಎನ್ನುವ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಚುನಾವಣೆ ನಡೆದು ಅವರೇ ರಾಜ್ಯಾಧ್ಯಕ್ಷ ಮತ್ತೊಮ್ಮೆ ಆಗಲಿ.. ಬೇಡ ಅಂದವರಾರು ? ಅಲ್ಲಿವರೆಗೂ ನನಗೆ ಓಟ್ ಹಾಕಿ ನನಗೆ ಓಟ್ ಹಾಕಿ ಅಂತ ಕೈ ಮುಗಿದು ಅವರು ಓಡಾಡಬೇಕಲ್ವಾ ? ಕೆಲವರಿಗೆ ಕೈ ಮುಗಿಯೋದಾದ್ರೂ ನಾವು ಕಲಿಸದಂಗೆ ಆಗುತ್ತೆ ಅಲ್ವಾ..? ನಮ್ಮ ಬಣದಿಂದ ಯಾರು ಸ್ಪರ್ದೆ ಮಾಡ್ತಿವಿ ಅನ್ನೋದು ಚರ್ಚೆ ಮಾಡಿ ನಿರ್ಣಯ ತಗೋತಿವಿ. ಹೈಕಮಾಂಡ್‌ ಜಾತಿ ಲೆಕ್ಕಾಚಾರ ನೋಡಿಕೊಂಡು ಅದೇ ಜಾತಿಯವರನ್ನು ನಾವು ಕಣಕ್ಕೆ ಇಳಿಸುತ್ತೇವೆ ಎಂದಿದ್ದಾರೆ.

ಶ್ರೀ ರಾಮಲು ರಾಜ್ಯಾಧ್ಯಕ್ಷ ಆದರೆ ನಮ್ಮದೇನೂ ತಕರಾರಿಲ್ಲ. ಅವರೂ ನಮ್ಮ ಮನುಷ್ಯರೇ.. ಅವರಾದ್ರೆ ನಮ್ಮ ಬೆಂಬಲ ಇರುತ್ತದೆ. ರಾಜ್ಯದ ಎಲ್ಲಾ ಸಂಸದರು ನಮ್ಮ ಜೊತೆಗಿದ್ದಾರೆ.. ವಿಜಯೇಂದ್ರ ಸಹೋದರ ಒಬ್ಬರನ್ನು ಬಿಟ್ಟು ಎಂದಿದ್ದಾರೆ. ಯತ್ನಾಳ್ ರಾಜ್ಯಾಧ್ಯಕ್ಷ ಆಗಬೇಕು ಅನ್ನೋರೂ ಇದ್ದಾರೆ.. ಏನಾಗುತ್ತೋ ನೋಡೋಣ ಎಂದಿರುವ ಯತ್ನಾಳ್‌, ನಾನೇನು ಇವತ್ತು ನಿನ್ನೆಯಿಂದ ರಾಜಕೀಯ ಮಾಡುತ್ತಿಲ್ಲ. ನಾನು ಯಡಿಯೂರಪ್ಪ ಸಮಕಾಲಿನವನು. ಒಂದು ವೇಳೆ ವಿಜಯೇಂದ್ರರನ್ನು ಮತ್ತೆ ರಾಜ್ಯಾಧ್ಯಕ್ಷ ಮಾಡಿದ್ರೆ ನಮ್ಮ ನಿರ್ಣಯ ತಿಳಿಸುತ್ತೇವೆ.. ನಮ್ಮ ಹೋರಾಟವಂತೂ ಮುಂದುವರೆಯುತ್ತದೆ ಎಂದಿದ್ದಾರೆ.

Tags: b sriramulu slams janardhan reddyJanardhan reddyjanardhan reddy and sriramulujanardhan reddy newsjanardhan reddy vs sriramuluJanardhana Reddyjanardhana reddy vs b sriramulujanardhana reddy vs sriramuluramulu about janardhana reddyramulu vs reddyreddy vs ramuluSri Ramulusriramulu expresses ire against janardhan reddysriramulu janardhan reddysriramulu vs bjp leaderssriramulu vs janardhan reddysriramulu vs reddy
Previous Post

ಟಾಕ್ಸಿಕ್‌ ಚಿತ್ರದ ಶೂಟಿಂಗ್‌ ಸೆಟ್‌ನಲ್ಲೇ ನಿದ್ರೆ ಮಾಡುತ್ತಿರುವ ಯಶ್..

Next Post

ರಾಜನಾಥ್ ಸಿಂಗ್ ಭೇಟಿಯಾದ HDK – ಬೆಂಗಳೂರು ಏರ್ ಶೋ ಬಗ್ಗೆ ಸಂಕ್ಷಿಪ್ತ ಚರ್ಚೆ ! 

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post
ರಾಜನಾಥ್ ಸಿಂಗ್ ಭೇಟಿಯಾದ HDK – ಬೆಂಗಳೂರು ಏರ್ ಶೋ ಬಗ್ಗೆ ಸಂಕ್ಷಿಪ್ತ ಚರ್ಚೆ ! 

ರಾಜನಾಥ್ ಸಿಂಗ್ ಭೇಟಿಯಾದ HDK - ಬೆಂಗಳೂರು ಏರ್ ಶೋ ಬಗ್ಗೆ ಸಂಕ್ಷಿಪ್ತ ಚರ್ಚೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada