• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇನ್ವೆಸ್ಟ್ ಕರ್ನಾಟಕ: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ,

ಪ್ರತಿಧ್ವನಿ by ಪ್ರತಿಧ್ವನಿ
February 13, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
`ನಾವೀನ್ಯತೆಗಳ ಭವಿಷ್ಯ’ ಪ್ರದರ್ಶನ, 40ಕ್ಕೂ ಹೆಚ್ಚು ಕಂಪನಿ ಭಾಗಿ (ಬಾಕ್ಸ್)
Share on WhatsAppShare on FacebookShare on Telegram

ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ. ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

ADVERTISEMENT

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಉಪಸ್ಥಿತಿಯಲ್ಲಿ ಈ ಪ್ರಕ್ರಿಯೆ ನೆರವೇರಿತು. ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೊ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದರು.

ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿರುವ ವೊಲ್ವೊ ಸಂಸ್ಥೆ, ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, `ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ ಹಾಡಿತು. ಈಗ ನಮ್ಮಲ್ಲಿ ವೋಲ್ವೊ ಎನ್ನುವುದು ಉತ್ಕೃಷ್ಟ ಗುಣಮಟ್ಟದ ಬಸ್ಸುಗಳಿಗೆ ಇನ್ನೊಂದು ಹೆಸರಾಗಿದೆ. ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ. ವೋಲ್ವೊ ಕಂಪನಿಗೆ ಸರಕಾರ ಅಗತ್ಯ ಸೌಲಭ್ಯ ಮತ್ತು ನೆರವು ಒದಗಿಸಲಿದೆ. ಕಂಪನಿಯು ತನ್ನಲ್ಲಿ ಹೆಚ್ಚಿನ ಕನ್ನಡಿಗರಿಗೆ ಕೆಲಸ ಕೊಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ಎರಡನ್ನೂ ಸಾಧಿಸಬಹುದು’ ಎಂದರು.

ವೋಲ್ವೊ ಸಿಇಒ ಮಾರ್ಟಿನ್ ಲುಂಡ್ಸ್ಟೆಡ್ ಮಾತನಾಡಿ, `ಕರ್ನಾಟಕದಲ್ಲಿ ಕಂಪನಿಯು ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಸಮೀಪದ ಪೀತಂಪುರದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಈಗ ನಾವು ವರ್ಷಕ್ಕೆ ಇಲ್ಲಿ 3,000 ಬಸ್/ಟ್ರಕ್ ತಯಾರಿಸುತ್ತಿದ್ದೇವೆ. ಹೊಸಕೋಟೆ ಸ್ಥಾವರದ ವಿಸ್ತರಣೆಯಿಂದ ನಾವು ವರ್ಷಕ್ಕೆ 20 ಸಾವಿರ ಬಸ್/ಟ್ರಕ್ ತಯಾರಿಸಬಹುದು. ಈ ಸಾಮರ್ಥ್ಯ ವೃದ್ಧಿಯಿಂದ ಉದ್ಯೋಗಸೃಷ್ಟಿಯೂ ಆಗಲಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ. ಜತೆಗೆ ಸ್ಥಳೀಯ ಮಾರುಕಟ್ಟೆ ಅಗತ್ಯಗಳನ್ನೂ ಸರಾಗವಾಗಿ ಪೂರೈಸಲು ಸಾಧ್ಯವಾಗಲಿದೆ’ ಎಂದರು.

ಬೆಂಗಳೂರು ವೋಲ್ವೋ ಕಂಪನಿಯ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 4ನೇ ಅತಿದೊಡ್ಡ ತಾಣವಾಗಿದೆ. ಇಲ್ಲಿರುವ ನಮ್ಮ ಜಿಸಿಸಿ ಕೇಂದ್ರದಲ್ಲಿ 3,500ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದು, ಇಲ್ಲಿ ಆರ್ & ಡಿ, ಐಟಿ, ಖರೀದಿ, ಲಾಜಿಸ್ಟಿಕ್ಸ್ ಮತ್ತು ಹಣಕಾಸು ಸೇವೆಗಳನ್ನು ನಿರ್ವಹಿಸಲಾಗುತ್ತಿದೆ. ಇದಲ್ಲದೆ ಮಧ್ಯಪ್ರದೇಶದಲ್ಲಿ ಕೂಡ ಜಂಟಿ ಸಹಭಾಗಿತ್ವದ ಯೋಜನೆ ಜಾರಿಯಲ್ಲಿದೆ. ಕಂಪನಿಯ ವಹಿವಾಟು ಈಗ ವರ್ಷಕ್ಕೆ 50 ಬಿಲಿಯನ್ ಡಾಲರ್ ದಾಟಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Tags: DK ShivakumarGIMHosakoteInvest KarnatakaKamal BaliM B PatilSelva KumarsiddaramaiahVolvo
Previous Post

Fact news ಹೋಗಿ Fact check ಬರುವಂತಾಗಿದೆ: ಕೆವಿಪಿ

Next Post

ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada