• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳ

ಪ್ರತಿಧ್ವನಿ by ಪ್ರತಿಧ್ವನಿ
February 23, 2025
in ಕರ್ನಾಟಕ, ರಾಜಕೀಯ, ಸ್ಟೂಡೆಂಟ್‌ ಕಾರ್ನರ್
0
ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳ
Share on WhatsAppShare on FacebookShare on Telegram

ಕೂಡ್ಲಿಗಿಯಲ್ಲಿ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬೃಹತ್‌ ಉದ್ಯೋಗ ಮೇಳ

ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳ ಸಹಕಾರಿ: ಸಂತೋಷ್‌ ಲಾಡ್‌

ADVERTISEMENT

ಕೂಡ್ಲಿಗಿ, ಫೆಬ್ರುವರಿ 23: ಗ್ರಾಮೀಣ ಯುವ ಜನತೆಯ ಭವಿಷ್ಯ ಉಜ್ವಲವಾಗಲೂ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕಾರ್ಮಿಕ ಸಚಿವ ಎಸ್.ಸಂತೋಷ ಲಾಡ್ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂತೋಷ್‌ ಲಾಡ್ ಫೌಂಡೇಷನ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಿಂದುಳಿದ ತಾಲೂಕಿನಲ್ಲಿ ಉದ್ಯೋಗ ಎನ್ನುವುದು ಗಗನ ಕುಸುಮವಾಗಿದೆ, ಇದನ್ನು ಮನಗಂಡು ಫೌಂಡೇಷನ್ ಈಗಾಗಲೇ ಜಿಲ್ಲೆಯಾದ್ಯಂತ 5 ನೇ ಉದ್ಯೋಗ ಮೇಳ ಹಮ್ಮಿಕೊಂಡು ಸಾವಿರಾರು ನಿರುದ್ಯೋಗಿ ಯುವಕ, ಯುವತಿಯರಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯ ಮಾಡಲಾಗಿದೆ ಎಂದರು.

ಈ ಮೇಳದಲ್ಲಿ ಪ್ರತಿಷ್ಠಿತ 45 ಕಂಪನಿಗಳು ಆಗಮಿಸಿದ್ದು, ವಿಧ್ಯಾರ್ಥಿಗಳು ಕೌಶಲ್ಯದ ಮೇಲೆ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ತಿಳಿಸಿದರು. ಆಯ್ಕೆಯಾಗದ ಯುವಕ, ಯುವತಿಯರು ನಿರುತ್ಸಾಹವಾಗಬೇಡಿ, ನಿಮ್ಮ ಕೌಶಲ್ಯ ಆಧರಿಸಿ ಪುನಃ ಉದ್ಯೋಗ ಮೇಳ ಆಯೋಜಿಸಿ ನಿಮಗೆ ಅವಕಾಶ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿದರು.

ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿ, ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಅತಿ ಹೆಚ್ಚು ಪದವೀಧರರು ಇಲ್ಲಿ ಇದ್ದು, ನಿರುದ್ಯೋಗ ಇಲ್ಲಿ ತಾಂಡವವಾಡುತ್ತಿದೆ. ಇದನ್ನು ಮನಗಂಡು ಸಚಿವ ಸಂತೋಷ ಲಾಡ್ ಅವರೊಂದಿಗೆ ಚರ್ಚಿಸಿ ಈ ಮೇಳ ಆಯೋಜಿಸಲಾಗಿದೆ. ಗ್ರಾಮೀಣ ನಿರುದ್ಯೋಗ ಯುವತಿಯರನ್ನು ಕೇಂದ್ರೀಕರಿಸಿ ಈ ಮೇಳ ಏರ್ಪಡಿಸಿದ್ದು, ಇದರಲ್ಲಿ ಆಯ್ಕೆಯಾದವರು ವಿನಾಃ ಕಾರಣ ಸಬುಬೂ ಹೇಳದೆ ಕಂಪನಿಯು ಸ್ಥಳ ನಿಯೋಜನೆ ಮಾಡಿದಲ್ಲಿ ಹೋಗಿ ಕರ್ತವ್ಯ ನಿರ್ವಹಿಸಿ ಎಂದು ತಿಳಿಸಿದರು.

ಬೇಡಿಕೆಗೆ ಅನುಗುಣವಾಗಿ ಮುಂಬರುವ ದಿನಗಳಲ್ಲಿ ಮತ್ತೇ ಈ ಉದ್ಯೋಗ ಮೇಳ ಹಮ್ಮಿಕೊಂಡು ನಿರುದ್ಯೋಗಿಗಳಿಗೆ ಅವಕಾಶ ಒದಗಿಸುವುದಾಗಿ ತಿಳಿಸಿದರು. ಸಂಸದ ಈ ತುಕಾರಾಂ, ಪಪಂ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಹೊಸಹಳ್ಳಿ ಬ್ಲಾಕ್ ಅಧ್ಯಕ್ಷ ಕುಮಾರಗೌಡ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಯ್ಯದ್ ಶುಕೂರ್, ಸದಸ್ಯರಾದ ಲಕ್ಷ್ಮಿದೇವಿ, ಕೆ.ಈಶಪ್ಪ, ಬಾಸೂನಾಯ್ಕ್, ಮುಖಂಡರಾದ ಎನ್.ಟಿ.ತಮ್ಮಣ್ಣ, ಕುರಿ ಶಿವಮೂರ್ತಿ, ಹಿರೇಕುಂಬಳಗುಂಟೆ ಉಮೇಶ್, ನಾಗಮಣಿ ಜಿಂಕಾಲ್, ಉದಯ ಜನ್ನು, ಮಾದಿಹಳ್ಳಿ ನಜೀರ್ ಇದ್ದರು.

203 ಪದವಿ ವಿದ್ಯಾರ್ಥಿಗಳು, 121ಸ್ನಾತಕೋತ್ತರ ಪದವೀಧರರು, 213 ಐಟಿಐ ಹಾಗೂ ಡಿಪ್ಲೊಮಾ, 166 ಎಸ್ಎಸ್ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು ಸಂದರ್ಶನದಲ್ಲಿ ಭಾಗಿಯಾಗಿದ್ದರು.

Tags: santhosh ladSanthosh lad foundationsanthosh lad foundation kas videossanthosh lad foundation todays classsanthosh lad foundation youtube channelsanthosh lada foundationsSantosh Ladsantosh lad foundationsantosh lad foundation videossantosh lad helpingsantosh lad interviewsantosh lad latest newssantosh lad newssantosh lad speechsantosh lad videostoday class santhosh lad foundation
Previous Post

ಅಲೋವೆರಾ ಮತ್ತು ಅಕ್ಕಿ ನೀರಿನ ಫೇಸ್ ಪ್ಯಾಕ್ ಬಳಸಿ, ತ್ವಚೆಯ ಸಮಸ್ಯೆಗಳಿಗೆ ಗುಡ್ ಬೈ ಹೇಳಿ.!

Next Post

ಗರ್ಭಿಣಿಯರು ABC ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು?

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ಗರ್ಭಿಣಿಯರು ABC ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು?

ಗರ್ಭಿಣಿಯರು ABC ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada