• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಲಹೆ ಕೊಡಲಿ, ಟೀಕೆ ಬಿಡಲಿ: ಎಂ‌ ಬಿ ಪಾಟೀಲ.!!

ಪ್ರತಿಧ್ವನಿ by ಪ್ರತಿಧ್ವನಿ
February 27, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಮೋಹನದಾಸ್ ಪೈಗೆ ಕುಟುಕಿದ ಸಚಿವ

ADVERTISEMENT

ಬೆಂಗಳೂರು: ಉದ್ಯಮಿ ಮೋಹನದಾಸ್ ಪೈ ಅವರು ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ಕೊಡಲಿ, ಆದರೆ ವಿನಾ ಕಾರಣ ಟೀಕಿಸುವುದನ್ನು ಬಿಡಲಿ. ಪದೇ ಪದೇ ಹೀಗೆ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕುಟುಕಿದ್ದಾರೆ.

ಗುರುವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಪೈ ಕೂಡ ಬೆಂಗಳೂರಿನಿಂದಲೇ ಲಾಭ ಮಾಡಿಕೊಂಡಿರುವವರು. ಇಲ್ಲಿಂದಲೇ ಎಲ್ಲವನ್ನೂ ಪಡೆದುಕೊಂಡಿರುವವರು. ಈಗ ಅವರು ಇಲ್ಲಿಂದ ಹುಬ್ಬಳ್ಳಿಗಾಗಲಿ, ಮೈಸೂರಿಗಾಗಲಿ ಹೋಗಲು ತಯಾರಿಲ್ಲ’ ಎಂದು ಹರಿಹಾಯ್ದಿದ್ದಾರೆ.

ಸಂಚಾರ ದಟ್ಟಣೆ ಬರೀ ಬೆಂಗಳೂರಿನ ಸಮಸ್ಯೆಯಲ್ಲ. ಲಂಡನ್, ಸ್ಯಾನ್ ಫ್ರಾನ್ಸಿಸ್ಕೊ, ಚೆನ್ನೈ ಎಲ್ಲ ಕಡೆಗಳಲ್ಲೂ ಇದೆ. ಈ ಬಗ್ಗೆ ಪೈ ಯಾಕೆ ಮಾತನಾಡುವುದಿಲ್ಲ? ಲಂಡನ್ನಿನಲ್ಲಿ ನಾನೇ ಒಂದೂವರೆ ಮೈಲುದ್ದದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಹದಿನೈದಿಪ್ಪತ್ತು ಮೈಲಿ ಸಂಚಾರ ದಟ್ಟಣೆ ಸೃಷ್ಟಿಯಾಗಿದ್ದಿದೆ ಎಂದು ಅವರು ಉತ್ತರಿಸಿದ್ದಾರೆ.

ಬೆಂಗಳೂರು ‘ಗ್ರೋಯಿಂಗ್ ಸಿಟಿ’ಯ ಜತೆಗೆ ‘ಗ್ಲೋಬಲ್ ಸಿಟಿ’ ಕೂಡ ಆಗಿದೆ. ಹೀಗಾಗಿಯೇ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ. ಮೋದಿ ಸರಕಾರ ಏನು ಮಾಡಿದರೂ ಸರಿ, ಸಿದ್ದರಾಮಯ್ಯ ಸರಕಾರ ಮಾಡಿದ್ದೆಲ್ಲವೂ ತಪ್ಪು ಎನ್ನುವುದಲ್ಲ. ಇಂತಹ ಟೀಕೆಗಳಿಂದ ಪೈ ದೊಡ್ಡ ಮನುಷ್ಯರಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಯಾರೇ ಆಗಲಿ, ಸರಕಾರಕ್ಕೆ ರಚನಾತ್ಮಕ ಸಲಹೆ ಕೊಡಬಹುದು. ಪೈ ಅವರು ನನ್ನನ್ನಗಾಲಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಗಳನ್ನಾಗಲಿ ಅಥವಾ ಐಟಿ ಸಚಿವರನ್ನೇ ಆಗಲಿ ಕಾಣಬಹುದು. ಇದೇ ಪೈ ಮಳೆಗಾಲದಲ್ಲಿ ಬೆಂಗಳೂರಿನ ಒಂದು ಕಡೆ ಪ್ರವಾಹ ಉಂಟಾದಾಗ ವಾಗ್ದಾಳಿ ಮಾಡಿದ್ದರು. ಆದರೆ ಆಗ ಇಡೀ ಚೆನ್ನೈ ನಗರವೇ ಜಲಾವೃತವಾದರೂ ಜಾಣಮೌನ ವಹಿಸಿದ್ದರು. ಬಿಜೆಪಿ ನಮ್ಮ‌ ಕಾರ್ಯಕ್ರಮಗಳನ್ನೇ ನಕಲು ಮಾಡುತ್ತಿದೆ. ಇದನ್ನು ಕಂಡರೂ ಇವರೇಕೆ ಸುಮ್ಮನಿದ್ದಾರೆ ಎಂದು ಪಾಟೀಲ ನೆನಪಿಸಿದ್ದಾರೆ.

ತೆಲಂಗಾಣಕ್ಕೆ ಕೃಷ್ಣಾ ನೀರು, ತಪ್ಪೇನಿಲ್ಲ

ಕುಡಿಯುವ ನೀರಿನ ಉದ್ದೇಶಕ್ಕಾಗಿ ಆಲಮಟ್ಟಿ ಆಣೆಕಟ್ಟೆಯಿಂದ ತೆಲಂಗಾಣಕ್ಕೆ 1.24 ಟಿಎಂಸಿ ಅಡಿ ನೀರನ್ನು ಬಿಟ್ಟಿರುವುದರಲ್ಲಿ ತಪ್ಪೇನೂ‌ ಇಲ್ಲ. ಕೆಲವೊಂದು ವಿಚಾರಗಳನ್ನು ನಾವು ಮಾನವೀಯವಾಗಿ ನೋಡಬೇಕಾಗುತ್ತದೆ ಎಂದು ಸಚಿವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

Tags: BengaloreFrancelandanMB PatilMohan Das Pai
Previous Post

ವಕ್ಫ್ ತಿದ್ದುಪಡಿ ಕಾಯ್ದೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್ ..! ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಲಿದೆ ಮಸೂದೆ 

Next Post

ಯಡಿಯೂರಪ್ಪ ಹುಟ್ಟು ಹಬ್ಬದ ಸಂಭ್ರಮ ಅಚ್ಚರಿ ಹೇಳಿಕೆ ಕೊಟ್ಟ ಮಾಜಿ ಸಿಎಂ..!

Related Posts

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!
ವಿಶೇಷ

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

by ಪ್ರತಿಧ್ವನಿ
April 15, 2026
0

ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮೃತದೇಹಗಳ ಅಂತ್ಯಕ್ರಿಯೆಗಾಗಿ ಶವದಹನ ಅಥವಾ ಸಮಾಧಿ ಮಾಡುವ ಪದ್ಧತಿ ಸಾಮಾನ್ಯವಾಗಿದೆ. ಆದರೆ ಜಗತ್ತಿನ ಕೆಲವು ಭಾಗಗಳಲ್ಲಿ ಅಚ್ಚರಿ ಹುಟ್ಟಿಸುವ ರೀತಿಯ ವಿಭಿನ್ನ...

Read moreDetails
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

April 15, 2026
ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post

ಯಡಿಯೂರಪ್ಪ ಹುಟ್ಟು ಹಬ್ಬದ ಸಂಭ್ರಮ ಅಚ್ಚರಿ ಹೇಳಿಕೆ ಕೊಟ್ಟ ಮಾಜಿ ಸಿಎಂ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada