• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿ.ಎಲ್.ಡಿ.ಸಿ. ಫ್ಯಾನ್ ಬಳಸಿ, ವಿದ್ಯುತ್ ಜತೆ ಹಣವೂ ಉಳಿಸಿ: ಬೆಸ್ಕಾಂ ಎಂಡಿ ಶಿವಶಂಕರ್‌

ಪ್ರತಿಧ್ವನಿ by ಪ್ರತಿಧ್ವನಿ
February 27, 2025
in ಕರ್ನಾಟಕ, ರಾಜಕೀಯ, ವಾಣಿಜ್ಯ, ಶೋಧ
0
Share on WhatsAppShare on FacebookShare on Telegram
  • ಬೆಸ್ಕಾಂನಿಂದ ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್‌ ಲೋಕಾರ್ಪಣೆ

ಬೆಂಗಳೂರು, ಫೆಬ್ರುವರಿ 27, 2025: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್‌ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ.

ADVERTISEMENT

ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಬೆಸ್ಕಾಂನ ಬೇಡಿಕೆ ನಿರ್ವಹಣಾ ವಿಭಾಗದ (ಡಿಎಸ್‌ಎಂ) ವತಿಯಿಂದ ಗುರುವಾರ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಅನ್ನು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ “ಬೇಸಿಗೆ ಆರಂಭದಲ್ಲೇ ಬಿ.ಎಲ್‌.ಡಿ.ಸಿ. ಫ್ಯಾನ್‌ಗಳನ್ನು ಬಿಡುಗಡೆ ಮಾಡಿ, ಬಳಕೆಗೆ ಗ್ರಾಹಕರನ್ನು ಉತ್ತೇಜಿಸಲಾಗುತ್ತಿದೆ. ಸಾಮಾನ್ಯ ಫ್ಯಾನ್‌ಗಳಿಗಿಂತ ಅತಿ ಕಡಿಮೆ ವಿದ್ಯುತ್ ಬಳಸಿಕೊಳ್ಳುವಂತೆ ಈ ಫ್ಯಾನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆ ವಿದ್ಯುತ್ ಬೇಡಿಕೆ ಕಡಿತಗೊಳಿಸುವ ನಮ್ಮ ಈ ಪ್ರಯತ್ನ ಗ್ರಾಹಕರ ವಿದ್ಯುತ್ ವೆಚ್ಚವನ್ನೂ ಕಡಿಮೆ ಮಾಡಲಿದೆ. ಸುಸ್ಥಿರ ಹಾಗೂ ಇಂಧನ ದಕ್ಷತೆಯ ಭವಿಷ್ಯಕ್ಕೆ ಇದು ಮಹತ್ವದ ಹೆಜ್ಜೆಯಾಗಿದೆ,” ಎಂದು ಹೇಳಿದರು.

“ಇಂಧನ ದಕ್ಷತೆಯೆಡೆಗಿನ ನಮ್ಮ ಪ್ರಯತ್ನವು ಪಾಲುದಾರರ ಸಹಕಾರವಿಲ್ಲದೇ ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ಬಿಇಇ, ಕ್ರೆಡಲ್, ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್‌ಸಿ) ಹಾಗೂ ಇನ್ನಿತರ ಪಾಲುದಾರರ ಪ್ರೋತ್ಸಾಹಕ್ಕೆ ಧನ್ಯವಾದ. ವಿದ್ಯುತ್ ಬಳಕೆಯಲ್ಲಿ ಜಾಗೃತಿ ಹಾಗೂ ಸುಸ್ಥಿರ ನಾಳೆಗಾಗಿ, ನಾವು ಒಂದಾಗಿ ನಡೆಯಬೇಕಿದೆ,” ಎಂದು ಡಾ. ಎನ್‌. ಶಿವಶಂಕರ್‌ ಕರೆ ನೀಡಿದರು.

ಕ್ರೆಡಲ್ ವ್ಯವಸ್ಥಾಪಕ ನಿರ್ದೆಶಕ ಕೆ.ಪಿ.ರುದ್ರಪ್ಪಯ್ಯ ಮಾತನಾಡಿ, “ಒಂದು ಯೂನಿಟ್ ವಿದ್ಯುತ್‌ ಉಳಿಸಿದರೆ, ಎರಡು ಯೂನಿಟ್ ವಿದ್ಯುತ್‌ ಉತ್ಪಾದಿಸಿದಂತೆ. ವಿದ್ಯುತ್ ಉತ್ಪಾದನೆ ಎಷ್ಟು ಮುಖ್ಯವೋ, ಅದನ್ನು ಸಂರಕ್ಷಿಸುವುದೂ ಅಷ್ಟೇ ಮುಖ್ಯವಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ ವಿದ್ಯುತ್ ಸಂರಕ್ಷಣೆ ಮತ್ತು ದಕ್ಷತೆ ನೀತಿ-2022-27 ಜಾರಿಗೊಳಿಸಿದ ಹೆಮ್ಮೆ ಕರ್ನಾಟಕದ್ದು . ಈ ನೀತಿಯು 744 ಬಿಲಿಯನ್ ಕಿಲೋ ವ್ಯಾಟ್ ಅವರ್ ವಿದ್ಯುತ್ ಉಳಿತಾಯ ಜತೆಗೆ 6 ಲಕ್ಷ ಟನ್ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆ ತಡೆಯುವ ಗುರಿ ಹೊಂದಿದೆ,” ಎಂದು ತಿಳಿಸಿದರು.

“ಇಂಧನ ದಕ್ಷತೆ ಹಾಗೂ ಸಂರಕ್ಷಣೆಯ ಗುರಿ ತಲುಪಲು ವಿವಿಧ ವಲಯಗಳಿಗೆ ಗುರಿಗಳನ್ನು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಬೆಸ್ಕಾಂ ಸಾಧನೆ ಮಹತ್ವದ್ದಾಗಿದೆ. ಬಿ.ಎಲ್‍.‍‍‍ಡಿ.ಸಿ. ಫ್ಯಾನ್‌ಗಳ ಬಳಕೆ ಹೆಚ್ಚಬೇಕಿದ್ದು, ವಿದ್ಯುತ್ ಉಳಿತಾಯ ಪ್ರಯತ್ನಗಳು ನಮ್ಮಿಂದಲೇ ಆರಂಭವಾಗಲಿ,” ಎಂದರು.

ಪಿ.ಡ್ಲ್ಯೂ.ಸಿ. ಭಾರತದ ಕ್ಲೀನ್ ಎನರ್ಜಿ ವಿಭಾಗದ ಮುಖ್ಯಸ್ಥರಾದ ರಾಜೀವ್ ರಲ್ಹಾನ್ ಮಾತನಾಡಿ, ” ಸದ್ಯ ಬಳಕೆಯಲ್ಲಿರುವ ಹಳೆಯ ತಂತ್ರಜ್ಞಾನದ ಫ್ಯಾನ್‌ಗಳಿಗೆ ಹೋಲಿಸಿದರೆ ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆಯಿಂದ ಶೇಕಡ 50ರಷ್ಟು ವಿದ್ಯುತ್ ಬಳಕೆ ಕಡಿಮೆಗೊಳಿಸಬಹುದಾಗಿದೆ. ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆ ಉತ್ತೇಜಿಸುತ್ತಿರುವ ಸರ್ಕಾರದ ಜತೆ ಸಹಕರಿಸಲು ಹೆಮ್ಮೆಯಾಗುತ್ತಿದೆ,” ಎಂದು ಹೇಳಿದರು.

ಇಇಎಸ್‌ಎಲ್ ರಾಜ್ಯ ಮುಖ್ಯಸ್ಥರಾದ ದೀಪಕ್ ಸಹನಿ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ. ರಮೇಶ್‌, ಬೆಸ್ಕಾಂ ಡಿಎಸ್‌ಎಂ ಪ್ರಧಾನ ವ್ಯವಸ್ಥಾಪಕರಾದ ರಮೇಶ್ ವಿ.ಎಸ್., ಪಿಎಂಎಸ್ ನಿರ್ದೇಶಕರಾದ ಅಮೇಯ ಸುಬೋಧ್ ಉದ್ಘಾಂವ್ಕರ್ ಸೇರಿದಂತೆ ಬೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಬಿ.ಎಲ್‌.ಡಿ.ಸಿ. ಸೀಲಿಗ್‌ ಫ್ಯಾನ್‌ ಖರೀದಿ ಹೇಗೆ?
ಹೆಚ್ಎಸ್ಆರ್‌ ಲೇಔಟ್‌ನಲ್ಲಿರುವ ಬೆಸ್ಕಾಂನ ಸೆಂಟರ್ ಆಫ್ ಎಕ್ಸಲೆನ್ಸ್ ಕಚೇರಿ ಮತ್ತು ಬೆಸ್ಕಾಂ ಅಧಿಕೃತ ಜಾಲತಾಣದಲ್ಲಿನ ಇಇಎಸ್‌ಎಲ್‌ ಲಿಂಕ್ (https://eeslmart.in/fan?affiliateid=13285)
(website link: eeslmart.in) ಮೇಲೆ ಕ್ಲಿಕ್ ಮಾಡುವುದರ ಮೂಲಕ ಆನ್‌ಲೈನ್‌ನಲ್ಲಿ ಫ್ಯಾನ್ ಖರೀದಿಸಬಹುದಾಗಿದೆ. 5 ಸ್ಟಾರ್ ಪ್ರಮಾಣೀಕೃತ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಬೆಲೆ 2,699 ರೂ. ಇದೆ.

Tags: arasikere shivalingegowdaCheluvarayaswamyex mla shivalingegowdaharish sivaramakrishnanK. J. Georgekannada live newskannada live streamingkarnataka live channelkarnataka newslatest kannada newsmlas & mps are with #siddaramaiah.nhshivashankarreddynjan gandharvanRamesh Jarkiholirathinkalshivalinge gowdashivashankar reddyshivashankar reddy on bs yediyurappashivashankar reddy on karnataka cabinet expansion
Previous Post

ಗೋವಾ ಬೀಚ್ ನಲ್ಲಿ ಇಡ್ಲಿ ಸಾಂಬಾರ್ ಮಾರಾಟ – ಪ್ರವಾಸಿಗರ ಸಂಖ್ಯೆ ಕುಸಿಯಲು ಇದೇ ಕಾರಣ : ಶಾಸಕ ಮೈಕೆಲ್ ಲೋಬೋ 

Next Post

ನಾಳೆಯಿಂದ Second PU Final Exam: ಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ!

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ನಾಳೆಯಿಂದ Second PU Final Exam: ಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ!

ನಾಳೆಯಿಂದ Second PU Final Exam: ಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ!

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada