• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನ ಮೆಚ್ಚಿದ ಚಿತ್ರ”ಶಾನುಭೋಗರ ಮಗಳು”

ಪ್ರತಿಧ್ವನಿ by ಪ್ರತಿಧ್ವನಿ
February 28, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಸ್ವಾತಂತ್ರ್ಯ ಪೂರ್ವದಲ್ಲಿ ನಡೆಯುವ ಸಾಧ್ವಿ ಹೆಣ್ಣುಮಗಳು ಶರಾವತಿಯ ಕಥೆಯನ್ನು ನಿರ್ದೇಶಕ ಕೂಡ್ಲು ರಾಮಕೃಷ್ಣ (Kodlu Ramakrishna) ಅವರು “ಶಾನುಭೋಗರ ಮಗಳು” ಚಿತ್ರದ ಮೂಲಕ ತೆರೆಮೇಲೆ ತಂದಿದ್ದಾರೆ. ಪತ್ರಕರ್ತೆ ಹಾಗೂ 33ಕ್ಕೂ ಹೆಚ್ಚು ಕಾದಂಬರಿಗಳನ್ನು ಬರೆದಂತಹ ಭಾಗ್ಯ ಕೃಷ್ಣಮೂರ್ತಿ (Bhagya Krishnamurthy) ಅವರ ಇದೇ ಹೆಸರಿನ ಕಾದಂಬರಿಯನ್ನಾಧರಿಸಿ “ಶಾನುಭೋಗರ ಮಗಳು” ಚಿತ್ರ ತಯಾರಾಗಿದೆ. ಭುವನ್ ಫಿಲಂಸ್ (Bhuvan Films) ಲಾಂಛನದಲ್ಲಿ ಸಿ.ಎಂ.ನಾರಾಯಣ್ (CM Narayan) ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ‌

ADVERTISEMENT

ನಟಿ ರಾಗಿಣಿ ಪ್ರಜ್ವಲ್(Ragini Prajwal), ಕಿಶೋರ್(Kishor), ನಿರಂಜನ್ ಶೆಟ್ಟಿ(Niranjan Shetty) ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಕಳೆದವಾರ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗೆ ನಡೆದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ ಚಿತ್ರತಂಡ ಮಾಹಿತಿ ಹಂಚಿಕೊಂಡಿತು.

ಚಿತ್ರ ನೋಡಿದ ಎಲ್ಲರೂ ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ‌ ಎಂದೇ ಹೇಳುತ್ತಿದ್ದಾರೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಬರುತ್ತಿಲ್ಲ ಎಂದು ನಿರ್ದೇಶಕ ಕೂಡ್ಲು ರಾಮಕೃಷ್ಣ ಹೇಳಿದರು.

ಲೇಖಕಿ ಭಾಗ್ಯಕೃಷ್ಣಮೂರ್ತಿ ಕೂಡ ಅದೇ ಮಾತನ್ನು ಹೇಳಿ ಮಾಧ್ಯಮದವರು ಪ್ರೋತ್ಸಾಹಿಸಿದರೆ ನಮ್ಮ ಚಿತ್ರ ಇನ್ನಷ್ಟು ಜನರಿಗೆ ತಲುಪುತ್ತದೆ. ಅದಕ್ಕೆ ನಿಮ್ಮ ಸಹಕಾರ ಬೇಕೆಂದು ಕೇಳಿಕೊಂಡರು.

ಹೆಣ್ಣನ್ನು ಕೇಂದ್ರವಾಗಿಟ್ಟುಕೊಂಡು ಬರುತ್ತಿರುವ ಚಿತ್ರಗಳು ಕಡಿಮೆಯಾಗುತ್ತಿರುವ ಈ ಸಮಯದಲ್ಲಿ ಮಹಿಳಾ‌ ಪ್ರಧಾನ ಚಿತ್ರವೊಂದು ಬಂದಿದೆ. ಚಿತ್ರದಲ್ಲಿ ಇತಿಹಾಸ, ಕಾಲ್ಪನಿಕ‌ ಇತಿಹಾಸ‌ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಕೆಲವು ವಿಷಯಗಳನ್ನು ತೋರಿಸಲಾಗಿದೆ. ಚಿತ್ರ ಚೆನ್ನಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಟ ಕಿಶೋರ್.

ನಾಯಕಿ ರಾಗಿಣಿ ಪ್ರಜ್ವಲ್ ಮಾತನಾಡಿ ಈ ವಾರ ೧೧ ಸಿನಿಮಾ ಬಂದಿದೆ. ಅದರ ನಡುವೆ ನಮ್ಮ ಚಿತ್ರವನ್ನು ಜನ ಇಷ್ಟಪಟ್ಟಿದ್ದಾರೆ. ಎಲ್ಲಾ ವರ್ಗದ ಜನರಿಗೂ ನಮ್ಮ ಸಿನಿಮಾ ಕನೆಕ್ಟ್ ಆಗುತ್ತೆ. ಮುಖ್ಯವಾಗಿ ನಾನು ಈ ಸಿನಿಮಾ ಒಪ್ಪಿದ್ದೇ ಕಥೆ ಹಾಗೂ ಕೂಡ್ಲು ಅವರ ನಿರ್ದೇಶನದ ಚಿತ್ರ ಎಂಬ ಕಾರಣಕ್ಕೆ. ಮೊನ್ನೆ ಆಡಿಯನ್ಸ್ ಜತೆ ಸಿನಿಮಾ ನೋಡಿದೆ. ಅವರ ರಿಯಾಕ್ಷನ್ ಕಂಡು ಖುಷಿಯಾಯ್ತು. ಪ್ರಜ್ವಲ್ ಕೂಡ ನನ್ನ ಜತೆ ಬಂದು ಸಿನಿಮಾ ನೋಡಿದರು. ಅತ್ತೆ ಮಾವ ಅವರಿಗೂ ಸಿನಿಮಾ ತೋರಿಸುತ್ತೇನೆ. ಶರಾವತಿ ಪಾತ್ರದ ಮೂಲಕ ಲಾಟ್ ಆಫ್ ಎಮೋಷನ್ಸ್ ಕನೆಕ್ಟ್ ಆದೆ. ಚಿತ್ರದ ಯಾವುದೇ ಅಳುವ ಸೀನ್ ನಲ್ಲಿ ನಾನು ಗ್ಲಿಸರಿನ್ ಹಾಕಿಲ್ಲ ಎಂದರು.

ಛಾಯಾಗ್ರಾಹಕ ಜೈ ಆನಂದ್ ಮಾತನಾಡಿ ಇದು ನನ್ನ ೩೦ನೇ ಸಿನಿಮಾ. ಇದರಲ್ಲಿ ಯಾವುದೇ ಸಿಜಿ ಉಪಯೋಗ ಮಾಡಿಲ್ಲ. ೩೫ ದಿನ ಶೂಟ್ ಮಾಡಿದ್ದೇವೆ. ಮೊದಲು ಪ್ರಜ್ವಲ್ ಅವರಿಗೆ ಈ ಸಬ್ಜೆಕ್ಟ್ ಬಗ್ಗೆ ಹೇಳಿದ್ದೆ. ಅವರು ರಾಗಿಣಿ ಮೇಡಂ ಒಪ್ಪಿಸಿದರು ಎಂದರು.

ನಿರಂಜನ್ ಶೆಟ್ಟಿ‌ ಮಾತನಾಡುತ್ತ. ಈ ಹಿಂದೆ ಕೂಡ್ಲು ಅವರ ಮಾರ್ಚ್ ೨೨ ಚಿತ್ರದಲ್ಲಿ ಆಕ್ಟ್ ಮಾಡಬೇಕಿತ್ತು. ಆಗಿರಲಿಲ್ಲ. ಇಂಥ ಪಾತ್ರ ಸಿಕ್ಕಿದ್ದೇ ನನ್ನ ಅದೃಷ್ಟ ಎಂದರು.

ಅಸೋಸೊಯೇಟ್ ಡೈರೆಕ್ಟರ್ ನಾಗರಾಜ್ ಮಾತನಾಡಿ ನಿರ್ಮಾಪಕರು ಸಿ.ಎಂ.ನಾರಾಯಣ್ ಅವರು ನೀಡಿದ ಸಹಕಾರವೇ ಸಿನಿಮಾ ಈ ಹಂತಕ್ಕೆ ಬರಲು ಕಾರಣ‌. ಜನತೆ ನಮ್ಮನ್ನು ಪ್ರೋತ್ಸಾಹಿಸಬೇಕು ಎಂದರು. ಹಿರಿಯ ನಿರ್ದೇಶಕ ಜೊಸೈಮನ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: BHagya Krishnamurthykannada cinemaKishoreKodlu RamakrishnaNiranjan ShettyRagini PrajwalsandalwoodShanabhogara magaluSharavathi
Previous Post

ಹಿಂದೂ ಆಗಿ ಹುಟ್ಟಿ ಸಾಯುವ ನೀವು ಯೇಸು ಬೆಟ್ಟ ಕೊಟ್ಟಿದ್ಯಾಕೆ..? ಶಾಸಕರ ಸವಾಲ್​..!!

Next Post

ಬಿಜೆಪಿ ಸರ್ಕಾರ ಮಾತು ಉಳಿಸಿಕೊಳ್ಳಲಿಲ್ಲ.. ನೀವಾದ್ರೂ ಕನ್ನಡಿಗರ ಕಾಪಾಡಿ..!

Related Posts

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು
Top Story

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

by ಪ್ರತಿಧ್ವನಿ
May 15, 2026
0

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೀಡಿರುವ ಹೇಳಿಕೆ ಜಾಗತಿಕ ಮಟ್ಟದಲ್ಲಿ ಹೊಸ ಚರ್ಚೆಗೆ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post

ಬಿಜೆಪಿ ಸರ್ಕಾರ ಮಾತು ಉಳಿಸಿಕೊಳ್ಳಲಿಲ್ಲ.. ನೀವಾದ್ರೂ ಕನ್ನಡಿಗರ ಕಾಪಾಡಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada