• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಾಂಬೆ ಹೈಕೋರ್ಟ್ ವಿಚಾರಣೆ ನಡುವೆ ತೀರ್ಪು ಕೊಟ್ಟಿದ್ದಕ್ಕೆ ಜಡ್ಜ್ ಕಳವಳ..!

ಕೃಷ್ಣ ಮಣಿ by ಕೃಷ್ಣ ಮಣಿ
February 28, 2025
in ದೇಶ, ಶೋಧ
0
ಬಾಂಬೆ ಹೈಕೋರ್ಟ್ ವಿಚಾರಣೆ ನಡುವೆ ತೀರ್ಪು ಕೊಟ್ಟಿದ್ದಕ್ಕೆ ಜಡ್ಜ್ ಕಳವಳ..!
Share on WhatsAppShare on FacebookShare on Telegram

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಥಾಣೆ ಕೋರ್ಟ್​ ನೀಡಿರುವ ಆದೇಶಕ್ಕೆ ಬಾಂಬೆ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದ್ದಾರೆ. ಬದ್ಲಾಪುರ ಎನ್‌ಕೌಂಟರ್ ನಕಲಿ ಎಂದಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್​ ತೀರ್ಪಿಗೆ ಥಾಣೆ ಕೋರ್ಟ್​ ತಡೆ ನೀಡಿದೆ. ಆರೋಪಿಯ ಪೋಷಕರು ತಮ್ಮ ಮಗನನ್ನು ನಕಲಿ ಎನ್‌ಕೌಂಟರ್​ನಲ್ಲಿ ಕೊಲ್ಲಲಾಗಿದೆ ಎಂದು ಆರೋಪಿಸಿದ್ದರು. ಪೋಷಕರ ಆರೋಪದಲ್ಲಿ ಸತ್ಯವಿದೆ ಎಂದು ಥಾಣೆ ಸೆಷನ್ಸ್ ನ್ಯಾಯಾಲಯ ಆದೇಶ ಮಾಡಿದ್ದು, ಈ ಆದೇಶ ನೀಡಿದ ನ್ಯಾಯಾಧೀಶರ ಬಗ್ಗೆ ಬಾಂಬೆ ಹೈಕೋರ್ಟ್ ಗುರುವಾರ ಆಘಾತ ವ್ಯಕ್ತಪಡಿಸಿದೆ.

ADVERTISEMENT

ಬಾಂಬೆ ಹೈಕೋರ್ಟ್​ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಡಾ. ನೀಲಾ ಗೋಖಲೆ ಅವರ ವಿಭಾಗೀಯ ಪೀಠವು, ಈಗಾಗಲೇ ಈ ವಿಚಾರ ಹೈಕೋರ್ಟ್​ ಮುಂದೆ ಬಾಕಿ ಇರುವಾಗ ಇಂತಹ ಆದೇಶವನ್ನು ಹೇಗೆ ಹೊರಡಿಸಬಹುದು ಎಂದು ಪ್ರಶ್ನಿಸಿದೆ. ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೊಂದ ಆರೋಪ ಹೊತ್ತಿರುವ ಐವರು ಪೊಲೀಸರು, ಥಾಣೆಯ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿ ಮ್ಯಾಜಿಸ್ಟ್ರೇಟ್ ವಿಚಾರಣೆಯ ಫಲಿತಾಂಶಗಳಿಗೆ ತಡೆ ನೀಡಬೇಕೆಂದು ಕೋರಿದ್ದರು. ಎನ್​ಕೌಂಟರ್​ ನಡೆದ ದಿನ ಪೊಲೀಸರು ಆರೋಪಿಯ ಮೇಲೆ ಬಲಪ್ರಯೋಗ ನಡೆಸಿದ್ದು ಸರಿಯಲ್ಲ, ಎನ್‌ಕೌಂಟರ್ ನಕಲಿ ಎಂದು ಕೋರ್ಟ್​ ತೀರ್ಮಾನಿಸಿದೆ.

ಫೆಬ್ರವರಿ 21ರ ಸೆಷನ್ಸ್ ನ್ಯಾಯಾಲಯದ ಆದೇಶದಿಂದ ಆಘಾತಕ್ಕೊಳಗಾದ ನ್ಯಾಯಮೂರ್ತಿಗಳು ಈ ಆದೇಶದಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ಸೆಷನ್ಸ್ ನ್ಯಾಯಾಧೀಶರು ಇಂತಹ ಆದೇಶವನ್ನು ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನಾವು ಈಗಾಗಲೇ ಈ ವಿಚಾರದಲ್ಲಿ ವಿಚಾರಣೆ ಮಾಡುತ್ತಿದ್ದೇವೆ. ಪ್ರತಿ ಎರಡು ವಾರಗಳಿಗೊಮ್ಮೆ ಈ ವಿಚಾರದ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರಿಗೆ ತಿಳಿದಿಲ್ಲವೇ..? ಇದು ನ್ಯಾಯಾಂಗ ಘನತೆಗೆ ತಕ್ಕದಾದ ವಿಚಾರವೇ..? ಈ ಆದೇಶ ಹೇಗೆ ಸರಿ..? ಈ ಆದೇಶ ನೀಡುವುದಕ್ಕೂ ಮೊದಲು ಈ ವಿಷಯವು ನಮ್ಮ ಮುಂದೆ ಬಾಕಿ ಇದ್ದರೂ ಪರಿಷ್ಕರಣಾ ಅರ್ಜಿಯನ್ನು ಹೇಗೆ ನಿರ್ವಹಿಸಬಹುದು? ಎಂದು ಪ್ರಶ್ನಿಸಿದೆ.

ನ್ಯಾಯಾಂಗ ಆಯೋಗವು ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿದೆ ಮತ್ತು ರಾಜ್ಯ ಸಿಐಡಿ ಕೂಡ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಸರ್ಕಾರದ ಪರ ವಾದಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ಸಾಧ್ಯವೇ ಅಥವಾ ಈ ಆಯೋಗದ ಸ್ಥಾಪನೆ ಅಥವಾ ಸಿಐಡಿ ವಿಚಾರಣೆಯು ಪೊಲೀಸರಿಗೆ ಎಫ್‌ಐಆರ್ ದಾಖಲಿಸಲು ಅಡ್ಡಿಯಾಗುತ್ತದೆಯೇ ಎಂದು ನೀವು ನಮಗೆ ತಿಳಿಸಬೇಕಾಗುತ್ತದೆ ಎಂದು ನ್ಯಾಯಮೂರ್ತಿಗಳು ಮೌಖಿಕವಾಗಿ ತಿಳಿಸಿದರು. ಜೊತೆಗೆ ವಿಚಾರಣೆಯನ್ನು ಮಾರ್ಚ್ 5ಕ್ಕೆ ಮುಂದೂಡಿತು.

ಡಿಸೆಂಬರ್ 19, 2024 ರಂದು, ಮೃತ ಆರೋಪಿಗಳ ಪೋಷಕರು ನ್ಯಾಯಾಲಯಕ್ಕೆ ಹಾಜರಾಗಿ, ಯಾರೂ ತಮಗೆ ಯಾವುದೇ ಕೆಲಸ ನೀಡದ ಕಾರಣ ನಾವು ಬೀದಿಗಳಲ್ಲಿ ಭಿಕ್ಷೆ ಬೇಡುವ ಮೂಲಕ ಬದುಕುಳಿದಿದ್ದೇವೆ. ತಮ್ಮ ಸ್ವಂತ ಮನೆಯನ್ನು ತೊರೆದು ಪಾದಚಾರಿ ಮಾರ್ಗಗಳಲ್ಲಿ ವಾಸಿಸುವಂತೆ ಒತ್ತಾಯಿಸಲಾಗಿದೆ ಎಂದು ಹೇಳಿದ್ದರು.

Tags: 90 lakh civil cases in the countrybombay hc says no evidence in conspiracy angleBombay High courtchief justice of india entry in scchief justice of supreme courtcorruption in the construction of the templecourts this weekhigh courthigh court of keralaindian court judgmentspatna high court judgepolice thane se record clear kese karwayesupreme courtsupreme court judge entrysupreme court judgessupreme court judges entry
Previous Post

ಮಾರ್ಚ್​ 22ಕ್ಕೆ ಕರ್ನಾಟಕ ಬಂದ್​ ಕರೆ ಕೊಟ್ಟ ವಾಟಾಳ್​ ನಾಗರಾಜ್​..

Next Post

ಕಾಂಗ್ರೆಸ್ ರಾಜ್ಯವನ್ನೇ ಸಾಲದ ಶೂಲಕ್ಕೆ ಏರಿಸಿದೆ.. ಜನ ನಿಮ್ಮನ್ನು ಶೂಲಕ್ಕೆ ಏರಿಸೋದು ಅಷ್ಟೆ ಬಾಕಿ : ಸಿಟಿ ರವಿ 

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಕಾಂಗ್ರೆಸ್ ರಾಜ್ಯವನ್ನೇ ಸಾಲದ ಶೂಲಕ್ಕೆ ಏರಿಸಿದೆ.. ಜನ ನಿಮ್ಮನ್ನು ಶೂಲಕ್ಕೆ ಏರಿಸೋದು ಅಷ್ಟೆ ಬಾಕಿ : ಸಿಟಿ ರವಿ 

ಕಾಂಗ್ರೆಸ್ ರಾಜ್ಯವನ್ನೇ ಸಾಲದ ಶೂಲಕ್ಕೆ ಏರಿಸಿದೆ.. ಜನ ನಿಮ್ಮನ್ನು ಶೂಲಕ್ಕೆ ಏರಿಸೋದು ಅಷ್ಟೆ ಬಾಕಿ : ಸಿಟಿ ರವಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada