• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BUDGET 2025: ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸರ್ಕಾರದ ಸಾಧನೆಗಳಿಗೆ ಕನ್ನಡಿ ಹಿಡಿದಿದ್ದಾರೆ. ಸಂಪೂರ್ಣ ಸತ್ಯ ಹೇಳಿದಾರೆ: ಸಿ.ಎಂ

ಪ್ರತಿಧ್ವನಿ by ಪ್ರತಿಧ್ವನಿ
March 18, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೆಳಮನೆ ಹಾಗೂ ಮೇಲ್ಮನೆಗೂ ಬರುತ್ತಿರುವುದರಿಂದ , ಚರ್ಚೆಗಳ ಮಟ್ಟ ಎತ್ತರಕ್ಕೆ ಹೋಗಬೇಕೇ ವಿನ: ಗುಣಮಟ್ಟ ಇಳಿಯಬಾರದು: ಸಿ.ಎಂ

ADVERTISEMENT

ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನುಡಿದಂತೆ ನಡೆಯುವುದು ನಮ್ಮ ಬದ್ಧತೆ: ಸಿಎಂ

ವಂದನಾನಿರ್ಣಯದ ಮೇಲೆ ಸುಮಾರು ವಿರೋಧಪಕ್ಷದ ನಾಯಕರು ಸೇರಿದಂತೆ 16 ಜನ ಸದಸ್ಯರು ಸುಮಾರು 9ಗಂಟೆ 56 ನಿಮಿಷಗಳ ಕಾಲ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ.

ಸದಸ್ಯರ ಟೀಕೆಗಳು, ಸಲಹೆ ಸೂಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು. ಸತ್ಯವನ್ನು ಮರೆಮಾಚಿ ಟೀಕೆ ಮಾಡಬಾರದು. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ. ವಾಸ್ತವಾಂಶಗಳ ಮೇಲೆ ಬೆಳಕು ಚೆಲ್ಲಬೇಕು. ದಾಖಲಾತಿಗಳನ್ನು ಸದನದ ಮುಂದಿಡಬೇಕು. ಈ ರೀತಿಯನ್ನು ನಾನೆಂದಿಗೂ ಸ್ವಾಗತಿಸುತ್ತೇನೆ. ಸರ್ಕಾರದ ಕಳೆದೊಂದು ವರ್ಷದ ಸಾಧನೆಗಳನ್ನು ರಾಜ್ಯಪಾಲರ ಭಾಷಣದ ಮೂಲಕ ಪ್ರಸ್ತಾಪಿಸಲು ಸಾಧ್ಯವಿಲ್ಲದಿದ್ದರೂ , ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ.

ಇತ್ತೀಚೆಗೆ ಹೆಚ್ಚು ವಿದ್ಯಾವಂತರು , ವಿಚಾರವಂತರು ಕೆಳಮನೆ ಹಾಗೂ ಮೇಲ್ಮನೆಗೂ ಬರುತ್ತಿರುವುದರಿಂದ , ಚರ್ಚೆಗಳ ಮಟ್ಟ ಎತ್ತರಕ್ಕೆ ಹೋಗಬೇಕೇ ವಿನ: ಗುಣಮಟ್ಟ ಇಳಿಯಬಾರದು.

2023ರ ಮೇ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು 136 ಸ್ಥಾನಗಳನ್ನು ನೀಡಿ ಗೆಲ್ಲಿಸಿದರು. ಅದರ ನಂತರ 2024 ರಲ್ಲಿ ಲೋಕಸಭೆ ಚುನಾವಣೆ ನಡೆದು, ಜನರು ನಮಗೆ ಹೆಚ್ಚಿನ ಆಶೀರ್ವಾದ ಮಾಡಿದರು. ನಂತರ ನಡೆದ ಚೆನ್ನಪಟ್ಟಣ(Channapattana), ಶಿಗ್ಗಾಂವಿ(Shiggav), ಸಂಡೂರಿ(Sanduru)ನಲ್ಲಿ ನಡೆದ ಉಪಚುನಾವಣೆಗಳಲ್ಲಿ ದೊಡ್ಡ ಅಂತರದಿಂದ ಗೆಲುವು ಸಾಧಿಸಿದೆವು. ಚೆನ್ನಪಟ್ಟಣದಲ್ಲಿ 25 ಸಾವಿರ , ಶಿಗ್ಗಾಂವಿ 13 ಸಾವಿರ, ಸಂಡೂರಿನಲ್ಲಿ 9 ಸಾವಿರ ಅಂತರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತು.

ಕನ್ನಡ ನಾಡಿನ ಜನ ಕಾಂಗ್ರೆಸ್ ಸರ್ಕಾರವನ್ನು ಒಪ್ಪಿಕೊಂಡಿದ್ದಾರೆ.
ಚುನಾವಣೆ ಪೂರ್ವದಲ್ಲಿ 2022 ರಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದೆವು. 2023ರಲ್ಲಿ ಜೂನ್ 11 ರಲ್ಲಿ ಶಕ್ತಿ ಯೋಜನೆಯನ್ನು ವಿಧಾನಸೌಧದಲ್ಲಿ , ಜುಲೈ ತಿಂಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿಗಳನ್ನು ಜಾರಿ ಮಾಡಲಾಯಿತು. ಆಗಸ್ಟ್ 1 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿಯನ್ನು ಜಾರಿ ಮಾಡಲಾಯಿತು. ಡಿಸೆಂಬರ್ ನಲ್ಲಿ ಶಿವಮೊಗ್ಗದಲ್ಲಿ ಯುವನಿಧಿಯನ್ನು ಪ್ರಾರಂಭಿಸಲಾಯಿತು. ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದ ಒಳಗೆಯೇ ಜಾರಿ ಮಾಡಲಾಯಿತು. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ.

Tags: BJPchannapattanaCM SiddaramaiahcongressCongress PartyGovernerKarnatakaSandurShiggovsiddaramaiahVidhanasouda
Previous Post

ಧರ್ಮ ಯುದ್ಧ Part 5 : ಸೌಜನ್ಯ ಬದುಕಿದ್ದಾಳೆ, ಕಾಪಾಡೊಣ ಬನ್ನಿ..!

Next Post

BUDGET 2025: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಯನ್ನು ಧೂಳೀಪಟ ಮಾಡ್ತೀವಿ: ಸಿಎಂ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post

BUDGET 2025: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಯನ್ನು ಧೂಳೀಪಟ ಮಾಡ್ತೀವಿ: ಸಿಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada