
ಬಿಜೆಪಿ ಜನಾಕ್ರೋಶಕ್ಕೆ ಕಾಂಗ್ರೆಸ್ ಕೌಂಟರ್ ನೀಡಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಗ್ಯಾಸ್ ಬೆಲೆ 50 ರೂಪಾಯಿ ಏರಿಕೆ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ರು.
ಬಿಜೆಪಿಯ ‘ಜನಾಕ್ರೋಶ’ ಪ್ರತಿಭಟನೆಗೆ ಗೃಹ ಸಚಿವ ಪರಮೇಶ್ವರ್ ಕೌಂಟರ್ ನೀಡಿದ್ದಾರೆ. ಬೆಲೆ ಏರಿಕೆ ಬಗ್ಗೆ ನಮ್ಮ ವಿರುದ್ಧ ಪ್ರತಿಭಟನೆ ಮಾಡ್ತಿದ್ದಾರೆ. ಲೋಕಲ್ ಬಿಜೆಪಿಗೆ ಕೇಂದ್ರ ಬೆಲೆ ಏರಿಕೆ ಬಗ್ಗೆ ಗೊತ್ತಿಲ್ಲ. ಇದರಿಂದಲೇ ಅವರ ನೀತಿಗಳು ಹೇಗಿದೆ ಅನ್ನೋ ಬಗ್ಗೆ ಗೊತ್ತಾಗುತ್ತದೆ. ಇದು ಜನಾಕ್ರೋಶ ಯಾತ್ರೆ ಅಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಂದ್ರೆ ಅದು ಸುಳ್ಳುಗಾರರ ಪಕ್ಷ ಬಿಜೆಪಿಯಷ್ಟು ಸುಳ್ಳು ಹೇಳುವವರು ಬೇರೆ ಯಾರೂ ಇಲ್ಲ. ಒಂದು ಸುಳ್ಳನ್ನು ಹತ್ತು ಸಾರಿ ಹೇಳಿ ಸತ್ಯ ಮಾಡ್ತಾರೆ ಎಂದಿದ್ದಾರೆ..

ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟಕ್ಕೆ ಎಂಬಿಪಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಿಸಿದ್ದಾರೆ. ಅಶೋಕ್ ಹಾಗೂ ವಿಜಯೇಂದ್ರ ಹೋಗಿ ಪ್ರಧಾನಿಯವರ ಮುಂದೆ ಪ್ರತಿಭಟನೆ ಮಾಡಲಿ ಎಂದಿದ್ದಾರೆ.

ಬೆಲೆ ಏರಿಕೆ ವಿಚಾರವಾಗಿ ಬಿಜೆಪಿ ಜನಾಂದೋಲನ ಯಾತ್ರೆ ಮಾಡ್ತಿದೆ. ಈ ಬಗ್ಗೆ ಹಾವೇರಿಯಲ್ಲಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಸಿಲಿಂಡರ್ ಬೆಲೆ ಏರಿಕೆ ಮಾಡಿದೆ. ಕೇಂದ್ರದ ವಿರುದ್ಧ ಬಿಜಪಿ ಹೋರಾಟ ಮಾಡಿದ್ರೆ ತಪ್ಪೇನು? ಎಂದು ಕೌಂಟರ್ ಕೊಟ್ಟಿದ್ದಾರೆ