ತಮಿಳುನಾಡು (Tamilnadu) ಬಿಜೆಪಿ ಪಕ್ಷದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗಿದ್ದು, ಅಣ್ಣಾಮಲೈ (Annamalai) ತಮ್ಮ ಸ್ಥಾನದಿಂದ ಕೆಳಗಿಳಿದ ನಂತರ ಇದೀಗ ಬಿಜೆಪಿ ಹೈಕಮಾಂಡ್ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ (Nainar nagendran) ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಅಚ್ಚರಿಯ ಬೆಳವಣಿಗೆಯಲ್ಲಿ ತಮಿಳುನಾಡು (Tamil nadu) ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತಾವು ಸ್ವಯಂ ಕೆಳಗಿಳಿಯುವುದಾಗಿ ಅಣ್ಣಾಮಲೈ (Annamalai) ಕೆಲವೇ ದಿನಗಳ ಮುನ್ನ ಘೋಷಣೆ ಮಾಡಿದ್ದರು.ಆನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
2026 ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ನಡೆಯಲಿದ್ದು,ಈ ಚುನಾವಣೆಗೆ BJP ಮತ್ತು AIADMK ಮೈತ್ರಿ ಮಾಡಿಕೊಳ್ಳುವ ಚಿಂತನೆಯಲ್ಲಿದ್ದು ಬಿಜೆಪಿ ಹೈಕಮ್ಯಾಂಡ್ ನ ಈ ನಿರ್ಧಾರದ ಕಾರಣಕ್ಕೆ ತಾವು ತಮ್ಮ ಸ್ಥಾನದಿಂದ ಹಿಂದೆ ಸರಿಯಲು ಅಣ್ಣಾಮಲೈ ನಿರ್ಧರಿಸಿರಬಹುದು ಎನ್ನಲಾಗಿತ್ತು.

ಹೀಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ನೋಂದಣಿಗೆ ಚುನಾವಣೆ ಕೂಡ ಘೋಷಣೆಯಾಗಿತ್ತು. ಏ.12ರಂದು ಚುನಾವಣೆ ನಡೆಯಬೇಕಿತ್ತು.ಆದರೆ ಬಿಜೆಪಿಯಿಂದ ನಾಗೇಂದ್ರನ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.