• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾತಿ ಗಣತಿ ವರದಿ; ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
April 14, 2025
in Top Story, ಕರ್ನಾಟಕ, ರಾಜಕೀಯ
0
ಜಾತಿ ಗಣತಿ ವರದಿ; ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ
Share on WhatsAppShare on FacebookShare on Telegram

//ಸಿದ್ದರಾಮಯ್ಯ ಅವರಿಂದ ಸಿದ್ದರಾಮಯ್ಯ ಅವರಿಗಾಗಿ ಸಿದ್ದರಾಮಯ್ಯನವರೇ ಮಾಡಿಕೊಂಡ ವರದಿ!!//

ADVERTISEMENT

ಅಂಕಿ ಅಂಶಗಳ ತೇಲಿಬಿಟ್ಟು ಟೆಸ್ಟ್ ರನ್ ಮಾಡುತ್ತಿದ್ದಾರೆ

ಕಾಂತರಾಜು ವರದಿಗೆ ₹150 ಕೋಟಿ ಖರ್ಚಾಗಿದೆ, ಆ ಹಣ ಹೇಗೆ ಖರ್ಚಾಯಿತು? ತನಿಖೆ ಆಗಲಿ

ಜಾತಿ ಗಣತಿ ವರದಿಯು ಸಿದ್ದರಾಮಯ್ಯ ಅವರಿಂದ ಸಿದ್ದರಾಮಯ್ಯ ಅವರಿಗಾಗಿ ಸಿದ್ದರಾಮಯ್ಯನವರೇ ಮಾಡಿಕೊಂಡ ವರದಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸೋರಿಕೆ ಆಗಿರುವ ಈ ವರದಿಯಲ್ಲಿ ಇವೆ ಎನ್ನಲಾದ ಅಂಕಿ ಅಂಶಗಳನ್ನು ಒಮ್ಮೆ ನೋಡಿದರೆ ಈ ವರದಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಕ್ಷೇಮಕ್ಕಾಗಿ ತಯಾರು ಮಾಡಿಸಿಕೊಂಡಿರುವ ವರದಿ ಎಂದು ವಾಗ್ದಾಳಿ ನಡೆಸಿದರು.

ನಮ್ಮ ರಾಜ್ಯದಲ್ಲಿ ಏಳು ಕೋಟಿ ಕನ್ನಡಿಗರು ಇದ್ದಾರೆ. ಸಮೀಕ್ಷೆ ನಡೆಸಿದವರು ಎಷ್ಟು ಮನೆಗಳಿಗೆ ಹೋಗಿದ್ದಾರೆ ಎಂಬ ದಾಖಲೆಗಳು ಇರಬೇಕು. ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳು ಆಗಿರುವ ನಮ್ಮ ತಂದೆಯ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ಅದೇ ರೀತಿ ನಮ್ಮ ಅಜ್ಜ, ಈ ದೇಶದ ಮಾಜಿ ಪ್ರಧಾನಿಗಳು. ಅವರ ಮನೆಗೂ ಯಾರೂ ಭೇಟಿ ಕೊಟ್ಟು ಸಮೀಕ್ಷೆ ಮಾಡಿಲ್ಲ. ಇಂಥ ಅಸಂಖ್ಯಾತ ಉದಾಹರಣೆಗಳನ್ನು ಕೊಡಬಲ್ಲೆ. ನನಗೆ ಗಣತಿ ನಡೆದಿರುವ ಬಗ್ಗೆಯೇ ಅನುಮಾನವಿದೆ. ಗಣತಿ ವೈಜ್ಞಾನಿಕವಾಗಿ, ಪ್ರತಿಯೊಂದು ಕುಟುಂಬದ ಮನೆ ಬಾಗಿಲಿಗೆ ಹೋಗಿ ಮಾಡಬೇಕಿತ್ತು. ಆ ರೀತಿ ಆಗಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ಜಾತಿ ಗಣತಿ ನೆಪದಲ್ಲಿ ಸಿದ್ದರಾಮಯ್ಯ ಟೆಸ್ಟ್ ರನ್ ಮಾಡ್ತಿದ್ದಾರೆ!

ಜಾತಿ ಗಣತಿ ವರದಿಯವು ಎನ್ನಲಾದ ಕೆಲ ಅಂಕಿ-ಅಂಶ ಸೋರಿಕೆಯಾಗಿದೆ. ಎಲ್ಲಾ ಪತ್ರಿಕೆ, ಸುದ್ದಿವಾಹಿನಿಗಳು ಆ ಅಂಕಿ ಅಂಶಗಳು ಬಿತ್ತರವಾಗಿತ್ತಿವೆ. ಈ ಅಂಕಿ ಅಂಶಗಳನ್ನು ಹೊರ ಹಾಕಿರುವವರು ಅಥವಾ ಸೋರಿಕೆ ಮಾಡಿದವರು ಯಾರು? ವರದಿ ಅಧಿಕೃತವಾಗಿ ಇನ್ನೂ ಬಹಿರಂಗ ಆಗಿಲ್ಲ. ಅಂಕಿ ಅಂಶಗಳು ಎಲ್ಲಾ ಕಡೆ ತೇಲಾಡುತ್ತಿವೆ. ಆದರೆ, ಇದು ಅನಧಿಕೃತ ಮಾಹಿತಿ. ಊಹಾಪೋಹದ ಅಂಕಿ ಅಂಶಗಳು. ಇದು ಸರ್ಕಾರದ ಕಡೆಯಿಂದಲೇ ಸೋರಿಕೆ ಆಗಿರುವ ಅನಧಿಕೃತ ಅಂಕಿ ಅಂಶಗಳು ಎನ್ನುವುದು ನನ್ನ ಅಭಿಪ್ರಾಯ. ಸಾರ್ವಜನಿಕ ವಲಯದಲ್ಲಿ ಯಾವ ರೀತಿ ಚರ್ಚೆ ಬರಬಹುದೆಂದು ನೋಡೋಣ ಎಂದು ಸಿದ್ದರಾಮಯ್ಯ ಅವರು ಟೆಸ್ಟ್ ರನ್ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಗಣತಿಗೆ ₹150 ಕೋಟಿ ಖರ್ಚಾಗಿದೆ ಸರಿ, ತನಿಖೆ ನಡೆಸಿ:

ಕಾಂತರಾಜು ಆಯೋಗದ ವರದಿಗೆ ₹150 ಕೋಟಿ ಖರ್ಚು ಮಾಡಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಆಯೋಗ ಯಾರ ಮನೆಗೂ ಹೋಗಿ ಸಮೀಕ್ಷೆ ಮಾಡಿಲ್ಲ ಎಂದು ಜನರೇ ಹೇಳುತ್ತಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಸೃಷ್ಟಿಯಾದ ವರದಿ ಇದು. ಹಾಗಾದರೆ, ಇಷ್ಟು ಮೊತ್ತವನ್ನು ಎಲ್ಲಿ ಖರ್ಚು ಮಾಡಿದ್ದಾರೆ. ಯಾರ ಮನೆಗೆ ಹೋಗಿದ್ದಾರೆ? ಯಾಕೆ ಇಷ್ಟು ಹಣ ಖರ್ಚು ಮಾಡಿದ್ದಾರೆ? ಲೆಕ್ಕ ಬೇಕಲ್ಲವೇ? ಇದರ ಬಗ್ಗೆಯೂ ತನಿಖೆ ನಡೆಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಜನರ ಕಲ್ಯಾಣಕ್ಕಾಗಿ ಜಾತಿ ಗಣತಿ ನಡೆಯಬೇಕು

ಜಾತಿಗಣತಿ ಆಗಬೇಕಿರೋದು ಆರ್ಥಿಕವಾಗಿ, ಶೈಕ್ಷಣಿಕ, ಸಮಾನತೆ ಜಾತಿಗಣತಿ ಆಗಬೇಕಿತ್ತು. ಅದರೆ ಜಾತಿಗಣತಿ ಒಂದು ದಶಕದ ಹಿಂದೆಯೇ ಕಾಂತರಾಜು ಸಮಿತಿಯನ್ನ ರಚನೆ ಮಾಡಿ ಅವರ ಮೂಲಕ ಸರ್ವೇ ಮಾಡಲು ತೆಗೆದುಕೊಂಡು ತೀರ್ಮಾನ ಇದು ಎಂದು ನಿಖಿಲ್ ಅವರು ತಿಳಿಸಿದರು.

DK Shivakumar : ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಡಿಕೆಶಿ ಗರಂ #pratidhvani

ಜಾತಿ ಗಣತಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಕೆಲ ಸಚಿವರು ಅಸಮಾಧಾನ ಹೊರ ಹಾಕಿದ್ದಾರೆ. ಹಾಗಾಗಿ ಎಲ್ಲಿಯವರೆಗೆ ವರದಿ ಹೊರಗೆ ಬಂದಿಲ್ಲ. ಅಲ್ಲಿಯವರೆಗೆ ನಾವು ಚರ್ಚೆ ಮಾಡೋಕೆ ಆಗಲ್ಲ. ಒಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ರಾಜಕೀಯ ಅಸ್ತಿತ್ವಕ್ಕಾಗಿ ಜಾತಿಗಣತಿ ಮಂಡಿಸುವುದಕ್ಕೆ ಮುಂದಾಗಿದ್ದಾರಾ ಎಂಬ ಅನುಮಾನಗಳು ಚರ್ಚೆ ನಡೆಯುತ್ತಿದೆ ಎಂದರು.

ಒಂದು ಸಮುದಾಯ ಮೆಚ್ಚಿಸುವುದಕ್ಕೆ ಗಣತಿ

ಒಂದು ಸಮುದಾಯ ಮೆಚ್ಚಿಸುವುದಕ್ಕೆ ಮತ್ತು ತಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕೆ ಜಾತಿ ಗಣತಿ ಮಂಡಿಸುತ್ತಿದ್ದಾರೆ. ಒಂದು ಸಲ ಅಂಕಿ ಅಂಶಗಳ ಹೊರ ಹಾಕಲಿ. ಜಾತಿ ಗಣತಿ ಮಾಡಿರುವುದರಲ್ಲಿ ಸ್ಪಷ್ಟತೆ, ಪಾರದರ್ಶಕ ಇಲ್ಲದಿದ್ದರೆ. ನಾವು ಮರುಪರಿಶೀಲನೆಗೆ ಒತ್ತಡ ಹಾಕ್ತೀವಿ. ಪಾರದರ್ಶಕ ಇದೆ, ವೈಜ್ಞಾನಿಕವಾಗಿ ಇದೆ ಸಾರ್ವಜನಿಕ ವಲಯದಲ್ಲಿ ಇಡಲಿ ಎಂದು ಆಗ್ರಹಿಸಿದರು.

ಸರ್ಕಾರ ಅಂಕಿ ಅಂಶಗಳ ಬಿಡುಗಡೆ ಮಾಡಿ ಟೆಸ್ಟ್ ರನ್ ಮಾಡ್ತಾ ಇರಬಹುದು. ಇದು ಅನಧಿಕೃತ ಮಾಹಿತಿನೇ ಎಲ್ಲರಿಗೂ ಆತಂಕ ಇದೆ. ಜೆಡಿಎಸ್ ಅಲ್ಲ, ಎಲ್ಲರಿಗೂ ಆತಂಕ ಇದೆ, ಅನುಮಾನ ಇದೆ ಹಲವಾರು ಸಮುದಾಯಗಳಲ್ಲಿ ಹಾಗೂ ಸ್ವಾಮೀಜಿಗಳಲ್ಲಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಹುಬ್ಬಳ್ಳಿ ಪ್ರಕರಣ; ತಲೆ ತಗ್ಗಿಸುವ ಘಟನೆ; ಎನ್ ಕೌಂಟರ್ ಮಾಡಿದ್ದು ಸರಿ ಎಂದ ನಿಖಿಲ್

ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪಾತಕಿಯನ್ನು ಎನ್ ಕೌಂಟರ್ ಮಾಡಿದ್ದು ಸರಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಈ ಘಟನೆ ಅತ್ಯಂತ ಹೇಯ. ಮನುಕುಲವೇ ತಲೆ ತಗ್ಗಿಸುವ ಇಂಥ ಘಟನೆಗಳು ಪದೇ ಪದೆ ನಡೆಯುತ್ತಿವೆ. ಹುಬ್ಬಳ್ಳಿ ಪ್ರಕರಣದಲ್ಲಿ ಶೂಟ್ ಔಟ್ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಎರಡು ವರ್ಷಗಳಿಂದ ಅನೇಕ ಘಟನೆಗಳು ನಡೆಯುತ್ತಿವೆ. ಇಂತಹ ಪ್ರಕರಣಗಳು ನಡೆಯದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದರು.

ಕಳೆದ ಎರಡು ವರ್ಷದ ಕಾಂಗ್ರೆಸ್ ಸರ್ಕಾರದಲ್ಲಿ ಅರಾಜಕತೆ ಮಿತಿಮೀರಿದೆ. ಮಹಿಳೆಯರು, ಮಕ್ಕಳು, ಜನಸಾಮಾನ್ಯರ ರಕ್ಷಣೆ, ಸುರಕ್ಷತೆ ಬಗ್ಗೆ ಕಾಳಜಿ ಇಲ್ಲವಾಗಿದೆ. ರಾಜ್ಯದಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಕೊಲೆ, ದರೋಡೆ, ಹಲ್ಲೆಯಂತಹ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರಿಗೆ ಅಸುರಕ್ಷತೆಯ ಭಯ ಕಾಡುತ್ತಿದೆ ಎಂದು ಕಿಡಿಕಾರಿದರು.

Hubli Commisioner: ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿಕೆ..! #shashikumar #hubliincident

ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಜವರಾಯಿ ಗೌಡ, ಮಾಜಿ ಶಾಸಕ ಡಾ. ಕೆ.ಅನ್ನದಾನಿ, ಮಾಜಿ ಎಂಎಲ್ಸಿ ಹಾಗೂ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ ರಶ್ಮಿ ರಾಮೇಗೌಡ ಮುಂತಾದವರು ಉಪಸ್ಥಿತರಿದ್ದರು.

Tags: ahinda community on caste censusBJPCaste Censuscaste census in karnatakacaste census karnatakacaste census reportcaste census report in karnatakacaste census report recommendscm siddaramaiah on caste census reportCongress Partykanthraj caste census reportkarnataka caste based censuskarnataka caste censuskarnataka caste census reportkarnataka caste surveykarnataka groups demand caste based censuskarnataka unreleased caste census reportಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಇಂದಿಗೆ “ಕೆಜಿಎಫ್‌ ಚಾಪ್ಟರ್‌ 2” ಬಿಡುಗಡೆ ಆಗಿ ಮೂರು ವರ್ಷ

Next Post

ಮೈಸೂರು ರಾಜಮಾತೆ ಮಾತಿನಿಂದ ಗ್ರಾಮಸ್ಥರು ಖುಷ್.. ಆದರೂ ಜನರಲ್ಲಿ ಗೊಂದಲ

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ಮೈಸೂರು ರಾಜಮಾತೆ ಮಾತಿನಿಂದ ಗ್ರಾಮಸ್ಥರು ಖುಷ್.. ಆದರೂ ಜನರಲ್ಲಿ ಗೊಂದಲ

ಮೈಸೂರು ರಾಜಮಾತೆ ಮಾತಿನಿಂದ ಗ್ರಾಮಸ್ಥರು ಖುಷ್.. ಆದರೂ ಜನರಲ್ಲಿ ಗೊಂದಲ

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada