• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕರ ಅಮಾನತು ವಾಪಸ್​ ಪಡೀತಾರ ಸ್ಪೀಕರ್ ಖಾದರ್​..?

ಕೃಷ್ಣ ಮಣಿ by ಕೃಷ್ಣ ಮಣಿ
April 21, 2025
in ಕರ್ನಾಟಕ
0
ಶಾಸಕರ ಅಮಾನತು ವಾಪಸ್​ ಪಡೀತಾರ ಸ್ಪೀಕರ್ ಖಾದರ್​..?
Share on WhatsAppShare on FacebookShare on Telegram

ಬಿಜೆಪಿಯ 18 ಶಾಸಕರ ಅಮಾನತು ಪ್ರಕರಣದಲ್ಲಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಮನವಿ ಸಲ್ಲಿಸಲಾಗಿದೆ. ಸ್ಪೀಕರ್ ಯು.ಟಿ ಖಾದರ್​ ಕಚೇರಿಗೆ ಆಗಮಿಸಿದ ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದ ನಿಯೋಗ ಮನವಿ ಕೊಟ್ಟಿದ್ದು ಶಾಸಕರ ಅಮಾನತು ಆದೇಶ ವಾಪಸ್​ ಪಡೆಯುವಂತೆ ಮನವಿ ಮಾಡಿದ್ದಾರೆ.

ADVERTISEMENT

ಅಶೋಕ್ ನೇತೃತ್ವದ ನಿಯೋಗದಲ್ಲಿ ಶಾಸಕರಾದ ಅಶ್ವಥ್ ನಾರಾಯಣ್, ಸಿ.ಕೆ ರಾಮಮೂರ್ತಿ, ಎಸ್.ಆರ್ ವಿಶ್ವನಾಥ್, ಮುನಿರತ್ನ, ಬೈರತಿ ಬಸವರಾಜು ಹಾಜರಿದ್ದರು. ವಿಧಾನಸೌಧದ ಸ್ಪೀಕರ್ ಅವರ ಕೊಠಡಿಗೆ ಆಗಮಿಸಿದ ಶಾಸಕರ ನಿಯೋಗ, ಅಮಾನತು ಆದೇಶ ಹಿಂಪಡೆಯುವಂತೆ ಸ್ಪೀಕರ್ ಯು. ಟಿ ಖಾದರ್​ಗೆ ಶಾಸಕರು ಮನವಿ ಮಾಡಿದ್ದಾರೆ.

ಸ್ಪೀಕರ್ ಭೇಟಿ ಬಳಿಕ ಶಾಸಕ ಬೈರತಿ ಬಸವರಾಜು ಮಾತನಾಡಿ, ಸ್ಪೀಕರ್ ಖಾದರ್​ ಅವರಿಗೆ ಎಲ್ಲವನ್ನೂ ಹೇಳಿದ್ದೇವೆ. ಅಮಾನತು ವಾಪಸ್ ಪಡೆಯಲು ಹೇಳಿದ್ದೇವೆ. ವಿಧಾನಸಭಾ ಕಾರ್ಯದರ್ಶಿ ಅವರ ಜತೆ ಚರ್ಚಿಸ್ತೇನೆ ಅಂತ ಸ್ಪೀಕರ್ ಹೇಳಿದ್ದಾರೆ. ಅಮಾನತು ಆದೇಶ ವಾಪಸ್ ಪಡೆಯುವ ನಿರೀಕ್ಷೆ ಇದೆ. ಒಂದು ವೇಳೆ ವಾಪಸ್ ಪಡೆಯದಿದ್ದಲ್ಲಿ ಮುಂದಿನ ನಡೆ ಬಗ್ಗೆ ನಮ್ಮ ನಾಯಕರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ.

Siddaramaiah :  ನಾನು ಸಿಎಂ ನಾನು ಹೇಳಿದ ಹಾಗೆ ಇರಬೇಕು ಸಿದ್ದು ಗರಂ #pratidhvani

ಸ್ಪೀಕರ್ ಭೇಟಿ ಬಳಿಕ ಶಾಸಕ ಮುನಿರತ್ನ ಮಾತನಾಡಿ, ಸ್ಪೀಕರ್ ಅವರ ಜತೆ ಮಾತಾಡಿದ್ದೇವೆ. ಆರು ತಿಂಗಳು ಅಮಾನತ್ತು ಮಾಡಿದ್ರಿಂದ ಬಹಳ ಸಮಸ್ತೆ ಆಗ್ತಿದೆ. ಕಮಿಟಿ‌ ಸಭೆಗಳಿಗೆ ಹೋಗಲು ಆಗ್ತಿಲ್ಲ. ಅಮಾನತು ಆದೇಶ ವಾಪಸ್ ಪಡೆಯಿರಿ ಅಂದಿದ್ದೇವೆ. ಅತ್ಯಾಚಾರ ಆರೋಪ ಕೇಸ್‌ನಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸ್ಪೀಕರ್ ಅನುಮತಿ ವಿಚಾರದ ಬಗ್ಗೆ ಕೇಳಿದಾಗ ನನ್ನ ವಿರುದ್ಧ ಕೇಸ್ ಇತ್ತು, ಅದಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಸ್ಪೀಕರ್ ಅನುಮತಿ ಕೊಟ್ಟಿದ್ದಾರೆ. ಸ್ಪೀಕರ್ ತಮ್ಮ ಅಧಿಕಾರವನ್ನು ಕಾನೂನು ಪ್ರಕಾರ ಚಲಾಯಿಸಿದ್ದಾರೆ. ಮುಂದೆ ಕಾನೂನು ಪ್ರಕಾರ ಅದನ್ನು ನಾನು ಎದುರಿಸ್ತೇನೆ. ಈಗ ಪ್ರಾಸಿಕ್ಯೂಷನ್‌ ಬಗ್ಗೆ ನಾನು ಸ್ಪೀಕರ್ ಜೊತೆ ಚರ್ಚೆ ಮಾಡಿಲ್ಲ. ನನ್ನ ವೈಯಕ್ತಿಕ ವಿಚಾರ ಸ್ಪೀಕರ್ ಜೊತೆ ಚರ್ಚೆ ಮಾಡಿಲ್ಲ, ಮಾಡಲ್ಲ ಎಂದಿದ್ದಾರೆ.

ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಸ್ಪೀಕರ್ ಭೇಟಿ ಮಾಡಿದ್ದೇವೆ. ಕಮಿಟಿ ಸಭೆಗೆ ಹೋಗಲಾಗ್ತಿಲ್ಲ. ಆರು ತಿಂಗಳ ಸಸ್ಪೆಂಡ್ ಸರಿಯಲ್ಲ. ಹಿಂದೆ ಈ ರೀತಿಯ ಅನೇಕ ಘಟನೆ ನಡೆದಿದೆ. ಪಕ್ಷದಿಂದ ರಾಜಣ್ಣ ಅವರ ಹನಿಟ್ರಾಪ್ ಬಗ್ಗೆ ಮಾತಾಡಬೇಕಿತ್ತು ಮಾತಾಡಿದ್ದೇವೆ‌. ಅದು ಬಿಟ್ಟರೆ ಸ್ಪೀಕರ್ ಕುರ್ಚಿ ಮೇಲೆ ನಾವು ಅಗೌರವ ತೋರಿಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದು, ಪರಿಶೀಲನೆ ಮಾಡೋದಾಗಿ ಹೇಳಿದ್ದಾರೆ. ವಿಧಾನಸಭೆ ಒಳಗೆ ಆಗಿರೋದು, ಹಾಗಾಗಿ ಸರ್ಕಾರದ ಜೊತೆ ಚರ್ಚೆ ಮಾಡಿ ಮಾಡೋದಾಗಿ ಹೇಳಿದ್ದಾರೆ ಎಂದಿದ್ದಾರೆ. ಸ್ಪೀಕರ್​ ಯಾವ ನಿರ್ಧಾರ ಮಾಡ್ತಾರೆ ಅನ್ನೋ ಕುತೂಹಲ ಬಿಜೆಪಿ ವಲಯದಲ್ಲಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೊಲೆಯಾಗುವ ಭಯದಲ್ಲೇ ಮನೆ ಬಿಟ್ಟಿದ್ದರೇ ಕೊಲೆಯಾದ ಓಂಪ್ರಕಾಶ್..?

Next Post

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada