• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

*ಚಂದನಾ ನಾಗ್ ರಂಗಪ್ರವೇಶ*ಏಪ್ರಿಲ್ 20ರ ಸಂಜೆ ಭಾನುವಾರ ಎಡಿಎ ರಂಗಮಂದಿರದಲ್ಲಿ ಹಿರಿ ಕಿರಿಯ ಕಲಾವಿದರ ಸಮಾವೇಶ.

ಪ್ರತಿಧ್ವನಿ by ಪ್ರತಿಧ್ವನಿ
April 22, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ, ಸೌಂದರ್ಯ
0
Share on WhatsAppShare on FacebookShare on Telegram

ನಟ, ಚಿತ್ರ ನಿರ್ದೇಶಕ – ನಿರ್ಮಾಪಕ ಬಿ ಸುರೇಶ ಮತ್ತು ಶೈಲಜಾ ನಾಗ್ ಅವರ ಮಗಳು, ಪತ್ರಕರ್ತೆ ಡಾ.ವಿಜಯಮ್ಮ ಅವರ ಮೊಮ್ಮಗಳು ಚಂದನ ನಾಗ್ ರಂಗಪ್ರವೇಶಕ್ಕೆ ಎಲ್ಲಾ ಪ್ರಾಕಾರಗಳ ಕಲಾವಿದರು ಮತ್ತು ಸಾಹಿತ್ಯ ಲೋಕದ ದಿಗ್ಗಜರ ಸಂತೆಯೇ ಸೇರಿತ್ತು. ಇಡೀ ಸಭಾಂಗಣ ತುಂಬಿತ್ತು.

ADVERTISEMENT

ಚಂದನಾ ನಾಗ್ ಸ್ವತಃ‌ ರಂಗಭೂಮಿ‌ ಕಲಾವಿದೆ, ಕಿರು ಚಿತ್ರಗಳ ಬರಹಗಾರ್ತಿ ಮತ್ತು‌ ನಿರ್ದೇಶಕಿ. ಚಂದನಾ ‌ಭರತನಾಟ್ಯದ ಆರಂಭಿಕ‌ ಪಾಠಗಳನ್ನು ಗುರು ಭಾನುಮತಿ‌ ಅವರಲ್ಲಿ‌ ಬಹಳ ವರ್ಷ ಕಲಿತು‌, ನಂತರ ಐದು ವರ್ಷ ದಿಂದ ಸ್ನೇಹಾ ಕಪ್ಪಣ್ಣ ಅವರ ಬಳಿ ಕಲಿಕೆ ಮುಂದುವರೆಸಿದ್ದಾರೆ. ಇಷ್ಟು ಕಾಲದ ಸಿದ್ಧತೆಯ ನಂತರ ಈಗ ರಂಗಪ್ರವೇಶ ಮಾಡಿದರು.

ಈ ರಂಗಪ್ರವೇಶ ಕಾರ್ಯಕ್ರಮದಲ್ಲಿ ಹಿರಿಯ ಭರತನಾಟ್ಯ ಕಲಾವಿದೆ, ಗುರು ಲಲಿತಾ ಶ್ರೀನಿವಾಸನ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷರು ಹಾಗೂ ಪ್ರಸಿದ್ಧ ಕಲಾವಿದೆ ಶುಭ ಧನಂಜಯ ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತೆ ಹಾಗೂ ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಪ್ರತಿಭಾ ಪ್ರಹ್ಲಾದ್ ಅವರು ಮುಖ್ಯ ‌ಅತಿಥಿಗಳಾಗಿ ಭಾಗವಹಿಸಿದ್ದರು.

ಚಂದನಾ ನಾಗ್ ಅವರ ಈ ರಂಗಪ್ರವೇಶದ ಆರಂಭಕ್ಕೆ ಲಲಿತಾ ಶ್ರೀನಿವಾಸನ್ ‌ಅವರು ದೀಪ ಬೆಳಗಿ‌ ಉದ್ಘಾಟಿಸಿದರು. ನಂತರ ಆದಿತಾಳದ ಪುಷ್ಪಾಂಜಲಿಗೆ ನೃತ್ಯದ ಮೂಲಕ ರಂಗಪ್ರವೇಶ ಆರಂಭಿಸಿದ ಚಂದನಾ ಪಂಚಭೂತಗಳನ್ನು ಪ್ರಧಾನ ವಸ್ತುವಾಗಿರಿಸಿಕೊಂಡು, ಕೌತ್ವಂಗಾಗಿ‌ ಅಗ್ನಿಯ ಹಲವು ಮುಖಗಳನ್ನು ದಾಟಿಸಿದರೆ, ಶಬ್ದಂಗಾಗಿ‌ ಆಕಾಶದ ವಿವರ ನೀಡುವ ಚಿದಂಬರಂ ಶಿವನ ಪದ್ಯವನ್ನು ಅದ್ಭುತವಾಗಿ ಕಟ್ಟಿಕೊಟ್ಟರು. ವರ್ಣದಲ್ಲಿ ನೀರಿನ ಬಗ್ಗೆ ಮಾತಾಡಲು ಗಂಗೆಯ ವಿವಿಧ ಕಥೆಯನ್ನು ಹೇಳುತ್ತ, ಗೀತಗೋವಿಂದದ ಅಷ್ಟಪದಿ ಬಳಸಿ ವಾಯುವಿನ ಬಗ್ಗೆ ಹೇಳಿದರು. ಪದಂನಲ್ಲಿ ಭೂಮಿಯ ಕುರಿತು ಮಾತಾಡಲು ಸೀತೆಯ ಕಥನವಿದ್ದ ಹಾಡನ್ನು ಅಭಿನಯ ಪ್ರಧಾನವಾಗಿ ಕಟ್ಟಿದರು. ಚಿದಂಬರ ಶಿವನ‌ ಬಾನಗಲದ ಪರಿಚಯ ಒಂದೆತ್ತರವಾದರೆ ಪದಂನ ಮೂಲಕ ಸೀತೆಯು‌ ಭೂತಾಯಿಯನ್ನು ಕರೆದು ಅವಳ ಮಡಿಲಿಗೆ ಮರಳಿ ಸೇರುವ ವಿವರ ನೋಡುಗರ ಕಣ್ಣಲ್ಲಿ‌ ಹನಿ‌ ಮೂಡಿಸಿತು. ಚಂದನಾ ನೃತ್ಯದಲ್ಲಿ ಕೇವಲ ಅಂಗಭಾಷೆಯ ಮುದ್ರೆ ಅಲ್ಲದೆ ಮುಖಮುದ್ರೆಯನ್ನು ಅತ್ಯಂತ ಸುಂದರವಾಗಿ ಪ್ರಸ್ತುತ ಪಡಿಸಿದಳು ಎಂದು‌ ಪ್ರತಿಭಾ ಪ್ರಹ್ಲಾದ್ ಅವರೂ ಸಹ ಗಮನಿಸಿ ತಿಳಿಸಿದರು. ಲಲಿತಾ ಶ್ರೀನಿವಾಸನ್ ಮತ್ತು ‌ಶುಭಾ ಧನಂಜಯ ಅವರೂ ಸಹ ಚಂದನಾ ಶ್ರಮವನ್ನು ಮೆಚ್ಚಿ ಹಾರೈಸಿದರು.

ನಟುವಾಂಗದಲ್ಲಿ ಸ್ವತಃ ಗುರು ಸ್ನೇಹಾ ಕಪ್ಪಣ್ಣ, ಗಾಯನದಲ್ಲಿ ಶ್ರೀವತ್ಸ, ಮೃದಂಗದಲ್ಲಿ ವಿದ್ವಾನ್ ಶ್ರೀಹರಿ, ಕೊಳಲು ವಾದನದಲ್ಲಿ ವಿದ್ವಾನ್ ಮಹೇಶ್ ಸ್ವಾಮಿ ಮತ್ತು ರಿದಂನಲ್ಲಿ ವಿದ್ವಾನ್ ಕಾರ್ತಿಕ್ ವೈದಾರ್ತಿ ಇದ್ದ ಹಿಮ್ಮೇಳದ ಜೊತೆಗೆ ಹಿರಿ-ಕಿರುತೆರೆ ಕಲಾವಿದೆ ಹಾಗೂ ಭರತನಾಟ್ಯ ಕಲಾವಿದೆ ಸೀತಾ ಕೋಟೆ ಅವರ ನಿರೂಪಣೆ, ಶಶಿಧರ್ ಅಡಪ ಅವರ ರಂಗ ಸಜ್ಜಿಕೆ, ಕಿರಣ್ ರಾಜ್ ಅವರ ಪ್ರಸಾಧನ, ನಾಗರಾಜ್ ಅವರ ಬೆಳಕು ವಿನ್ಯಾಸ ಇದ್ದ ಈ ಕಾರ್ಯಕ್ರಮಕ್ಕೆ ಎರಡು ಹೊಸ ಸಂಯೋಜನೆಗಳನ್ನು ರಮ್ಯಾ ಸೂರಜ್ ಅವರು‌, ಅಕ್ಷಯ್ ಮರಾಠೆ ಅವರು ರಚಿಸಿದ್ದರು.

ಚಲನ ಚಿತ್ರನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಂಸಲೇಖಾ , ಎಸ್.ಜಿ.ಸಿದ್ದರಾಮಯ್ಯ , ಕನ್ನಡ ಸಾಂಸ್ಕೃತಿಕ ಲೋಕದ ದಿಗ್ಗಜರಾದ ಚಿರಂಜೀವಿ ಸಿಂಗ್, ಬಿಎಲ್ ಶಂಕರ್, ಜಿ. ರಾಮಕೃಷ್ಣ , ಗಿರಿಜಾ ಲೋಕೇಶ್, ಗಿರೀಶ್ ಕಾಸರವಳ್ಳಿ, ಜಯಂತ್ ಕಾಯ್ಕಿಣಿ, ವಿ. ಹರಿಕೃಷ್ಣ , ಯೋಗರಾಜ್ ಭಟ್ , ವೈಕೆ ಮುದ್ದುಕೃಷ್ಣ, ವನಮಾಲ ವಿಶ್ವನಾಥ್, ಅರುಂಧತಿ ನಾಗ್ , ನಟ ಕಿಶೋರ್ ಮತ್ತು ನೃತ್ಯ, ಸಂಗೀತ ಕ್ಷೇತ್ರದ ಗಣ್ಯರೂ ಸೇರಿದಂತೆ ಕಲಾಭಿಮಾನಿಗಳೂ ಈ ಕಾರ್ಯಕ್ರಮದಲ್ಲಿ ಇದ್ದು ಚಂದನಾ ನಾಗ್ ರಂಗಪ್ರವೇಶಕ್ಕೆ ಸಾಕ್ಷಿಯಾದರು.

ತನ್ನ ಭರತನಾಟ್ಯ ಕಲಿಕೆಯನ್ನು ಮತ್ತು ಅಭಿನಯವನ್ನು ಅತ್ಯಂತ ಸಮರ್ಥವಾಗಿ ವೇದಿಕೆಯ ಮೇಲೆ ಪ್ರಸ್ತುತ ಪಡಿಸಿದ ಚಂದನಾ ನಾಗ್ ಎಲ್ಲ ನೋಡುಗರಿಂದ ಮೆಚ್ಚುಗೆಯನ್ನು ಪಡೆದರು. ಈ ಬಗೆಯಲ್ಲಿ ಕಳೆದ ಭಾನುವಾರ ಏಪ್ರಿಲ್ ‌ಇಪ್ಪತ್ತರ ಸಂಜೆ ತುಂತುರು ಮಳೆಯಿಂದ ಆರಂಭವಾಗಿ ಚಪ್ಪಾಳೆಗಳ ಸುರಿಮಳೆಯಲ್ಲಿ‌ ಸಂಪನ್ನವಾಯಿತು.- ರಾಧಿಕಾ ರಂಜನಿ

Tags: #gandharvadance classes#handsup#yajamana #dboss #chalengingstardarshan #funsofweekendanant nagchandana nagdancedarsandbeats kannadaddchandanahands uphands up challengeillegal weapon danceindian danceKannada Songkannada songskannathil muthamittalkings dancelatest dance videomarudhu pandianpakisthanisandalwood king shivaraj kumarShankar Nagshivanandistreet dancer 3dvarun dhawanxaviers dance studio
Previous Post

ಅಕ್ರಮ ಹಣ ವರ್ಗಾವಣೆ ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಗೆ ಸಮನ್ಸ್ ಜಾರಿ ಮಾಡಿದೆ ಇಡಿ

Next Post

ಮುನಿರತ್ನ ಒಬ್ಬ ಏಡ್ಸ್ ಟ್ರ್ಯಾಪ್ ಗಿರಾಕಿ – ಡಿಕೆ ಸುರೇಶ್ ಹಿಗ್ಗಾಮುಗ್ಗ ವಾಗ್ದಾಳಿ 

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಮುನಿರತ್ನ ಒಬ್ಬ ಏಡ್ಸ್ ಟ್ರ್ಯಾಪ್ ಗಿರಾಕಿ – ಡಿಕೆ ಸುರೇಶ್ ಹಿಗ್ಗಾಮುಗ್ಗ ವಾಗ್ದಾಳಿ 

ಮುನಿರತ್ನ ಒಬ್ಬ ಏಡ್ಸ್ ಟ್ರ್ಯಾಪ್ ಗಿರಾಕಿ - ಡಿಕೆ ಸುರೇಶ್ ಹಿಗ್ಗಾಮುಗ್ಗ ವಾಗ್ದಾಳಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada