
ಕಳೆದ ಮೂರು ಕೆಡಿಪಿ ತ್ರೈಮಾಸಿಕ ಸಭೆಗಳಿಗೆ ಹೋಲಿಸಿದರೆ ಈ ವರ್ಷದ ಕೊನೆಯ ಕೆಡಿಪಿಯಲ್ಲಿ ವರದಿ ಮಂಡಿಸಿರುವ ಇಲಾಖೆಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯಲ್ಲಿ ಸಾಧನೆ ಆಗಿರುವುದು ತೃಪ್ತಿ ತಂದಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರು ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ 2024-25 ನೇ ಸಾಲಿನ ಮಾರ್ಚ್-2025 ರ ಅಂತ್ಯಕ್ಕೆ ಕೊನೆಗೊಂಡ 4ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಸಚಿವ ಸಂತೋಷ ಲಾಡ್ ಅವರು ಹೇಳಿ
ಇಂದಿನ ಸಭೆಯಲ್ಲಿ ಇಲಾಖಾವಾರು ಅನುದಾನ ಬಿಡುಗಡೆ ಬಳಕೆ ಮತ್ತು ಭೌತಿಕ ಗುರಿ ಸಾಧನೆಯನ್ನು ಪರಿಶೀಲಿಸಲಾಯಿತು. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಪ್ರಸಕ್ತ ವರ್ಷದ ಕ್ರಿಯಾಯೋಜನೆಯನ್ನು ಈಗಿನಿಂದಲೇ ಪರಿಶೀಲಿಸಿ, ಅನುಮೊದಿಸಲು ಸಂಬಂಧಿಸಿದ ಇಲಾಖೆ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿ

ಮಳೆಗಾಲ ಆರಂಭವಾಗುವದರಿಂದ ಸಾಂಕ್ರಾಮಿಕ ರೋಗ, ಕುಡಿಯುವ ನೀರಿನ ಸ್ವಚ್ಛತೆ ಬಗ್ಗೆ ಆರೋಗ್ಯ ಇಲಾಖೆ ಮುಂಜಾಗ್ರತೆವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಪರಿಹರಿಸಬೇಕು ಎಂದು ತಾಲೂಕು ಪಂಚಾಯತ ಇಓ ಅವರಿಗೆ ಸಚಿವರು ಆದೇಶಿಸಿ
ನರೇಗಾ ಯೋಜನೆ ಉತ್ತಮವಾಗಿ ಅನುಷ್ಠಾನಗೊಳಿಸಬೇಕು. ಕೃಷಿ, ಪಂಚಾಯತ ರಾಜ್, ತೋಟಗಾರಿಕೆ, ಅರಣ್ಯ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮಾನವ ದಿನಗಳ ಗರಿಷ್ಠ ಬಳಕೆ ಹಾಗೂ ಹೆಚ್ಚು ಅನುದಾನ ಬಳಕೆಗೆ ಕ್ರಮವಹಿಸಲಾಗುವುದು. ಹೊಸ ವಿಚಾರಗಳೊಂದಿಗೆ ಅಧಿಕಾರಿಗಳು ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ್ ಅವರು ಹೇಳಿ
ಕೃಷಿ, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಸರಕಾರಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳಿಗೆ ಹೆಚ್ಚು ಪ್ರಚಾರ ನೀಡುವ ಮೂಲಕ ರೈತರಿಗೆ ಪರಿಚಯಿಸಬೇಕು ಎಂದು ಹೇಳಿ

ಗೈರಾದ ಅಧಿಕಾರಿ ಅಮಾನತ್ತು: ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರ ದೇವರಾಜ ಶಿಗ್ಗಾಂವಿ ಅವರು ಅನುಮತಿ ಪಡೆಯದೆ ಇಂದಿನ ಕೆಡಿಪಿ ಸಭೆಗೆ ಗೈರಾಗಿದ್ದರು ಮತ್ತು ಅವರ ಇಲಾಖೆಯ ಪ್ರಗತಿ ತೃಪ್ತಿಕರವಾಗಿರಲಿಲ್ಲ ಎಂದು ತಿಳಿದು ಜಿಲ್ಲಾ ಉಸ್ತುವಾರಿ ಸಚಿವರು ಅಮಾನತ್ತು ಗೊಳಿಸಿ, ಶಿಸ್ತುಕ್ರಮ ಜರುಗಿಸಲು ಸಭೆಯಲ್ಲಿ ಆದೇಶಿಸಿ
ಸಭೆಯಲ್ಲಿ ಶಾಸಕಾರದ ಎನ್.ಎಚ್.ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಸೇರಿದಂತೆ ಇತರರು ಮಾತನಾಡಿದರು.
ಸಭೆಯಲ್ಲಿ ಸಚಿವರು, ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ, ಲೋಕೋಪಯೋಗಿ, ಹೆಸ್ಕಾಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಿ, ಅಧಿಕಾರಿಗಳಿಂದ ವರದಿ ಪಡೆದ

ಗ್ರಂಥಾಲಯಗಳಿಗೆ ಕಂಪ್ಯೂಟರ್ ವಿತರಣೆ: ಜಿಲ್ಲಾ ಪಂಚಾಯತಿಯಿಂದ ಅರಿವು ಯೋಜನೆಯಡಿ ಜಿಲ್ಲೆಯ 84 ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಕಂಪ್ಯೂಟರ್ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ವ