• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಜೀವನದ ಶೈಲಿ

ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಟೀಸರ್ ಲಾಂಚ್‌ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್..ಜೂನ್‌ನಿಂದ ಪ್ರವೇಶ ಆರಂಭ

ಪ್ರತಿಧ್ವನಿ by ಪ್ರತಿಧ್ವನಿ
April 26, 2025
in ಜೀವನದ ಶೈಲಿ, ಸಿನಿಮಾ
0
ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಟೀಸರ್ ಲಾಂಚ್‌ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್..ಜೂನ್‌ನಿಂದ ಪ್ರವೇಶ ಆರಂಭ
Share on WhatsAppShare on FacebookShare on Telegram



ADVERTISEMENT

ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಶಿಕ್ಷಣ ಕ್ಷೇತ್ರ ಪ್ರವೇಶಿಸಿರುವುದು ಗೊತ್ತೇ ಇದೆ. ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಅನ್ನು ಪ್ರಾರಂಭಿಸಿದ್ದು, ಅವರು ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ಶೃತಿ ಕಿರಣ್‌ ಅವರೊಂದಿಗೆ ಕೈಜೋಡಿಸಿದ್ದಾರೆ. ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಟೀಸರ್‌ ಲಾಂಚ್‌ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಒರಿಯನ್‌ ಮಾಲ್‌ ನಲ್ಲಿ ನಡೆಯಿತು. ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಟೀಸರ್‌ ಲಾಂಚ್‌ ಟೀಸರ್‌ ಲಾಂಚ್ ಮಾಡಿದರು. ವಿಶೇಷ ಅತಿಥಿಯಾಗಿ ನಟಿ ಮಿಲನಾ ನಾಗರಾಜ್‌ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸುನೀತಾ ಗೌಡ, ಸ್ಫೂರ್ತಿ ವಿಶ್ವಾಸ್ ಉಪಸ್ಥಿತರಿದ್ದರು.

ಬಳಿಕ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮಾತನಾಡಿ, ನಾವು ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ 12 ಕೇಂದ್ರಗಳನ್ನು ಶುರು ಮಾಡಿದ್ದು, ಮೈಸೂರಿನಲ್ಲಿ ಒಂದು ಕೇಂದ್ರವಿದೆ.‌ ಈ ಕಲಿಕೆಯ ಗುರಿ ಜೊತೆಗೆ ಪ್ರತೀ ಮಗುವಿನ ಸಾಮರ್ಥ್ಯವನ್ನು ಪೋಷಿಸುವುದು ಮತ್ತು ನಾಯಕತ್ವವನ್ನೂ ನಿರ್ಮಿಸುವುದು ನಮ್ಮ ಉದ್ದೇಶ ಎಂದರು .

Siddaramaiah : ಎಚ್ ಡಿ ಕುಮಾರಸ್ವಾಮಿ ತರ ಮಿಮಿಕ್ರಿ ಮಾಡಿದ ಸಿಎಂ ಸಿದ್ದರಾಮಯ್ಯ #pratidhvani

ನಟಿ ಮಿಲನಾ ನಾಗರಾಜ್‌ ಮಾತನಾಡಿ, ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ ಹೆಸರು ಬಹಳ ಮುದ್ದಾಗಿದೆ. ಇಂದಿನ ಮಕ್ಕಳಿಗೆ ಇದು ಒಳ್ಳೆಯ ಅವಕಾಶ. ನಾವು ಮಕ್ಕಳಾದ ಏನಾಗಬೇಕು ಅಂದಾಗ ಹೇಳಲು ಗೊತ್ತಿರಲಿಲ್ಲ. ಆದರೆ ಇಂದಿನ ಮಕ್ಕಳು ಆಗಲ್ಲ. ಮಕ್ಕಳಿಗೆ ಕೌಶಲ್ಯಗಳನ್ನು ಕಲಿಸುವುದು ಅತ್ಯುತ್ತಮ. ಇದು ಆರಂಭವಾಷ್ಟೇ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.

ಸ್ಫೂರ್ತಿ ವಿಶ್ವಾಸ್ ಮಾತನಾಡಿ, ಇದೊಂದು ದೊಡ್ಡ ಜವಾಬ್ದಾರಿ. ಅದಕ್ಕೆ ಕಾರಣ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮೇಡಂ. ದಿನ, ರಾತ್ರಿ ಇದಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ ಹೆಸರಿಗಾಗಿ ಅಲ್ಲ. ಅಪ್ಪು ಸರ್‌ ಹೆಸರನ್ನು ಉಳಿಸಲು. ಆ ಜವಾಬ್ದಾರಿ ಇಟ್ಟುಕೊಂಡು ಇದನ್ನು ನಡೆಸಿಕೊಂಡು ಹೋಗುತ್ತವೆ. ಈ ಶಾಲೆ ಮಕ್ಕಳು ಅತ್ಯುತ್ತಮ ನಾಗರೀಕರಾಗುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಸುನೀತಾ ಗೌಡ ಮಾತನಾಡಿ, ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ ಕೇಂದ್ರಗಳು ಮಕ್ಕಳನ್ನು ಧೈರ್ಯದಿಂದ ಕನಸು ಕಾಣಲು, ಸೃಜನಾತ್ಮಕವಾಗಿ ಯೋಚಿಸಲು ಮತ್ತು ಆತ್ಮವಿಶ್ವಾಸದಿಂದ ಮುನ್ನಡೆಯಲು ಸಬಲೀಕರಣಗೊಳಿಸುತ್ತವೆ. ನಾವು ಪ್ರತಿ ಮಗುವನ್ನು ಸಾಧಕನನ್ನಾಗಿ ಬೆಳೆಸುವುದು, ನಾಯಕತ್ವದ ಗುಣಗಳು, ಸಾಂಸ್ಕೃತಿಕ ಮೌಲ್ಯಗಳು ಮತ್ತು ಜವಾಬ್ದಾರಿಯುತ ಪೌರತ್ವವನ್ನು ಉತ್ತೇಜಿಸುವತ್ತ ಗಮನ ಹರಿಸುತ್ತೇವೆ ಎಂದು ತಿಳಿಸಿದರು.

ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್‌ ಕ್ರಾಂತಿಕಾರಿ, ಪ್ರಾಥಮಿಕ ಶಿಕ್ಷಣ ಯೋಜನೆ, ಮಕ್ಕಳ ಕಲಿಕೆ ಮತ್ತು ಬೆಳವಣಿಗೆಗೆ ಹೊಸ ದಾರಿ ನಿರ್ಮಿಸಲು ಸಜ್ಜಾಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್, ಖ್ಯಾತ ಶಿಕ್ಷಣತಜ್ಞೆ ಸುನೀತಾ ಗೌಡ, ಸ್ಪೂರ್ತಿ ವಿಶ್ವಾಸ್ ಹಾಗೂ ಶೃತಿ ಕಿರಣ್‌ ಸಂಸ್ಥಾಪಿಸಿರುವ ಈ ಶಾಲೆಯೂ ಡಾ. ಬಿಂದು ರಾಣಾ ಅವರ ಅತ್ಯಾಧುನಿಕ ಪಠ್ಯಕ್ರಮದೊಂದಿಗೆ ಜೂನ್‌ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸುತ್ತಿದೆ.

ಡಾ. ಬಿಂದು ರಾಣಾ ಅವರ ಅತ್ಯಾಧುನಿಕ ಪಠ್ಯಕ್ರಮ ಈ ಜೂನಿಯರ್ ಟೋಸ್ ಪ್ರಿಸ್ಕೂಲ್‌ನಲ್ಲಿ ಇರಲಿದೆ. ಮಕ್ಕಳಲ್ಲಿ ಬಾಲ್ಯದಿಂದಲೇ ನಾಯಕತ್ವ, ಸೃಜನಶೀಲತೆ ಹಾಗೂ ಉದ್ಯಮಶೀಲತೆಯ ಚಿಂತನೆಯನ್ನು ಬೆಳೆಸುವುದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಜೊತೆಗಾರರ ಕನಸು. ನಾಯಕತ್ವ ತರಬೇತಿದಾರರು ಮತ್ತು ಪ್ರೇರಕ ಭಾಷಣಕಾರ್ತಿ ಸ್ಪೂರ್ತಿ ವಿಶ್ವಾಸ್ ಅವರು ತಮ್ಮ ಅನುಭವದೊಂದಿಗೆ ಮುಂದಿನ ತಲೆಮಾರಿನ ಆತ್ಮವಿಶ್ವಾಸಿ ಯುವ ನಾಯಕರಿಗೆ ಸ್ಫೂರ್ತಿ ನೀಡಲು ಕೈಜೋಡಿಸಿದ್ದಾರೆ.

ಈ ಪ್ರೀಸ್ಕೂಲ್ ಬೆಂಗಳೂರು ಹಾಗೂ ಮೈಸೂರಿನಲ್ಲಿ ಆರಂಭವಾಗಿದೆ. ಇದರಲ್ಲಿ ಆಧುನಿಕ ಆಧುನಿಕ ಸೌಲಭ್ಯಗಳು, ಅನುಭವಿ ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ತಜ್ಞರು ಸೇರಿ ಸಿದ್ಧಪಡಿಸಿದ ವಿನೂತನವಾದ ಪಠ್ಯಕ್ರಮಗಳನ್ನು ಅಳವಡಿಸಲಾಗಿದೆ. ಎರಡು ವರ್ಷದಿಂದ ಆರು ವರ್ಷದ ಮಕ್ಕಳಿಗೆ ಇಲ್ಲಿ ಶಿಕ್ಷಣವನ್ನು ನೀಡಲಾಗುತ್ತೆ.

Siddaramaiah :ಕೊಡಗು ಸಮಾಜ ಜನರ ಸಮಸ್ಯೆಗಳನ್ನು ಕೇಳಿದ ಸಿಎಂ ಸಿದ್ದರಾಮಯ್ಯ #pratidhvani

ಸದ್ಯ ಬೆಂಗಳೂರಿನಲ್ಲಿ ಆರಂಭವಾದ ಈ ಶಿಕ್ಷಣ ಸಂಸ್ಥೆಯನ್ನು ಮುಂದಿನ ದಿನಗಳಲ್ಲಿ ದೇಶಾದ್ಯಂತ ವಿಸ್ತರಣೆ ಮಾಡುವ ಆಲೋಚನೆಯನ್ನು ಇಟ್ಟುಕೊಂಡಿದ್ದಾರೆ. ಈ ಮೂಲಕ ಇಂತಹ ವಿನೂತನ ಶಿಕ್ಷಣ ಭಾರತದಾದ್ಯಂತ ಇರುವ ಎಲ್ಲಾ ಮಕ್ಕಳಿಗೂ ಸಿಗುವಂತೆ ಆಗಬೇಕು ಎಂಬುದು ಇವರ ಆಶಯ.

Tags: ashwinipuneethashwinipuneethrajkumar
Previous Post

ಪಾಕಿಸ್ತಾನಿ ಪ್ರಜೆಗಳಿಗೆ ಭಾರತ ವಿಧಿಸಿದ್ದ ಗಡುವು ಇಂದಿಗೆ ಮುಕ್ತಾಯ..

Next Post

ಸೋಲು…ಸೋಲು…ಸೋಲು..ಸತತ ಸೋಲು ! ಹೋಂ ಪಿಚ್ ಚೆಪಾಕ್‌ನಲ್ಲಿ CSK ಕೆಟ್ಟ ದಾಖಲೆ..! 

Related Posts

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
0

ಈ ಬಾರಿ ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಆರಂಭವಾದ ದಿನದಿಂದ ಒಂದಲ್ಲ ಒಂದು ವಿಚಾರದಿಂದ ವಿವಾದಕ್ಕೆ ಕಾರಣವಾಗುತ್ತಿದೆ. ಅಲ್ಲದೇ ಸ್ಪರ್ಧಿಗಳ ವಿರುದ್ಧ ದೂರು ದಾಖಲಾಗುತ್ತಿದೆ. ಇದೀಗ...

Read moreDetails
Daily Horoscope: ಇಂದು ಮಾತಿನಲ್ಲಿ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಮಾತಿನಲ್ಲಿ ಎಚ್ಚರವಹಿಸಬೇಕಾದ ರಾಶಿಗಳಿವು..!

November 21, 2025

“ಕೊರಗಜ್ಜ”ಚಿತ್ರದ “ಗುಳಿಗ ಗುಳಿಗ” ಹಾಡಿನ ಭೋರ್ಗರೆತದ ಅಬ್ಬರ ಶುರು..!!

November 20, 2025
ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸ್ ಅಧಿಕಾರಿ: ವ್ಯಾಪಕ ಆಕ್ರೋಶ

ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸ್ ಅಧಿಕಾರಿ: ವ್ಯಾಪಕ ಆಕ್ರೋಶ

November 20, 2025
Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

November 20, 2025
Next Post
ಸೋಲು…ಸೋಲು…ಸೋಲು..ಸತತ ಸೋಲು ! ಹೋಂ ಪಿಚ್ ಚೆಪಾಕ್‌ನಲ್ಲಿ CSK ಕೆಟ್ಟ ದಾಖಲೆ..! 

ಸೋಲು…ಸೋಲು…ಸೋಲು..ಸತತ ಸೋಲು ! ಹೋಂ ಪಿಚ್ ಚೆಪಾಕ್‌ನಲ್ಲಿ CSK ಕೆಟ್ಟ ದಾಖಲೆ..! 

Recent News

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada