• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ವಿರುದ್ಧ ಪ್ರತಿಭಟನೆ.. ಮಹಿಳೆ ಅರೆಸ್ಟ್​.. ಡಿಸಿಎಂ ವಾರ್ನಿಂಗ್

ಕೃಷ್ಣ ಮಣಿ by ಕೃಷ್ಣ ಮಣಿ
April 28, 2025
in Top Story, ಕರ್ನಾಟಕ, ರಾಜಕೀಯ
0
ಸಿಎಂ ವಿರುದ್ಧ ಪ್ರತಿಭಟನೆ.. ಮಹಿಳೆ ಅರೆಸ್ಟ್​.. ಡಿಸಿಎಂ ವಾರ್ನಿಂಗ್
Share on WhatsAppShare on FacebookShare on Telegram

ADVERTISEMENT

ಪಾಕಿಸ್ತಾನದ ಜೊತೆಗೆ ಯುದ್ಧ ಅಗತ್ಯವಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಿದ್ದರಾಮಯ್ಯಗೆ ಗೋ ಗೋ ಪಾಕಿಸ್ತಾನ್ ಎಂದು ಘೋಷಣೆ ಕೂಗಿದ್ದಾರೆ. ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ BJP ಕಾರ್ಯಕರ್ತರು ಘೋಷಣೆ ಕೂಗಿದ್ದು, ಬಿಜೆಪಿ ಮಹಿಳಾ ಕಾರ್ಯಕರ್ತೆ ಶಿಲ್ಪಾ ಕೇಕರೆ ಗೋ ಗೋ ಪಾಕಿಸ್ತಾನ್ ಅಂತಾ ಘೋಷಣೆ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಕಾರ್ಯಕರ್ತೆಯರ ಆಕ್ರೋಶದ ಬಳಿಕ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಸಿಎಂ ಭಾಷಣದ ವೇಳೆ BJP ಮಹಿಳಾ ಮೋರ್ಚಾ ಪ್ರತಿಭಟನೆ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಗರಂ ಆಗಿದ್ದಾರೆ. ಏಯ್..​ ಬಾರಯ್ಯ ಇಲ್ಲಿ, ಯಾವನು ಅವನು ಎಸ್​ಪಿ, ಏನ್​ ಮಾಡ್ತಿದ್ದೀರಿ ನೀವು ಎಂದು ಧಾರವಾಡ ASP ನಾರಾಯಣ ಬರಮನಿ ಮೇಲೆ ಕೈ ಎತ್ತಿದ್ದಾರೆ. ಆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ಮಾಡಿದ್ದಾರೆ. ಉಗ್ರರ ದಾಳಿ ವೇಳೆ ಒಬ್ಬನೇ ಒಬ್ಬ ಪೊಲೀಸ್ ಇರಲಿಲ್ಲ. ಕೇಂದ್ರ ಗುಪ್ತಚರ ಇಲಾಖೆ ಏನ್ ಮಾಡ್ತಾ ಇತ್ತು..? ಇದಕ್ಕೆ ನರೇಂದ್ರ ಮೋದಿ ಸರ್ಕಾರದ ವೈಫಲ್ಯ ಕಾರಣ ಅಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ಪೊಲಿಸ್‌ ಅಧಿಕಾರಿ ಮೇಲೆ ಕೈ ಎತ್ತಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯನವರೇ ನೀವು ಸರ್ವಾಧಿಕಾರಿಯಲ್ಲ, ನಿಮ್ಮ ನಡವಳಿಕೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ತಕ್ಕ ನಡವಳಿಕೆ ಅಲ್ಲ. ಕರ್ನಾಟಕ ರಾಜ್ಯದ ಗೌರವವನ್ನು ನೀವು ಹರಾಜು ಹಾಕಿದ್ದೀರಿ. ನಿಮ್ಮ ಸಂವಿಧಾನ ವಿರೋಧಿ ನಡವಳಿಕೆಗೆ ಧಿಕ್ಕಾರವಿರಲಿ, ಈ ಅಧಿಕಾರ ಮದದ ಅಹಂಕಾರ ಒಂದು ದಿನ ಕೊನೆಯಾಗಲೇಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ X ಪೋಸ್ಟ್‌ನಲ್ಲಿ ಕಿಡಿಕಾರಿದ್ದಾರೆ.

C M  Clarifies Over His Statement On India-Pakistan War ಪಾಕಿಸ್ತಾನದ ಜೊತೆ ಯುದ್ಧ ಬೇಡವೇ ಬೇಡ ಅಂತಾ ಹೇಳಿಲ್ಲ

ಕಾಂಗ್ರೆಸ್​​ ವಿರುದ್ಧ ಪ್ರತಿಭಟನೆ ನಡೆಸಿದ ಮಹಿಳಾ ಕಾರ್ಯಕರ್ತರನ್ನ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಹಿಳಾ ಕಾರ್ಯಕರ್ತರನ್ನು ಕರೆದೊಯ್ಯುವ ಕಾರಿಗೆ ಮುತ್ತಿಗೆ ಹಾಕಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ಕಾಲ ಸಮಾವೇಶದಲ್ಲಿ ಒಳಗೂ ಹೊರಗೂ ಭಾರೀ ಹೈಡ್ರಾಮಾ ನಡೆದಿದೆ. ಬಿಜೆಪಿ ‌ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಬೆದರಿಗೆ ಜಗ್ಗಲ್ಲ, ಬಗ್ಗಲ್ಲ ಎಂದು ಸಿಎಂ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರ ಅಡ್ಡಿ‌ ವಿಚಾರಕ್ಕೆ ಬೆಳಗಾವಿಯಲ್ಲಿ ಡಿಸಿಎಂ ‌ಡಿ.ಕೆ ಶಿವಕುಮಾರ್ ಪ್ರತಿಜ್ಞೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಒಂದೇ ಒಂದು ಸಭೆ ಮಾಡಲು ಬಿಡಲ್ಲ. ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದಿದ್ದಾರೆ. ನೀವು ಒಂದೇ ಒಂದು ಸಭೆ ಮಾಡಲು ಬಿಡಲ್ಲ, ಬಿಜೆಪಿ ಕಾರ್ಯಕರ್ತರಿಗೆ ಬುದ್ಧಿವಾದ ಹೇಳಿದ್ರೆ ಸರಿ ಎಂದು ವಾರ್ನ್‌ ಮಾಡಿದ್ದಾರೆ. ಇದೇ ವರ್ತನೆ ಮುಂದುವರಿಸಿದ್ರೆ ಹುಷಾರ್. ನಿಮ್ಮಗಿಂತ ಕಾರ್ಯರೂಪಕ್ಕೆ ತರುವ ಶಕ್ತಿಯನ್ನು ಜನ ನನಗೆ ಕೊಟ್ಟಿದ್ದಾರೆ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯ ಬಿಜೆಪಿ ಜನಾಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

Next Post

RCB’s IPL 2025: ಆರ್ ಸಿ ಬಿ ಸಾಧನೆಯನ್ನು 36 ಪದಗಳಲ್ಲಿ ಕೊಂಡಾಡಿದ ವಿಜಯ್ ಮಲ್ಯ.

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post

RCB's IPL 2025: ಆರ್ ಸಿ ಬಿ ಸಾಧನೆಯನ್ನು 36 ಪದಗಳಲ್ಲಿ ಕೊಂಡಾಡಿದ ವಿಜಯ್ ಮಲ್ಯ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada