• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಬೆಲೆ ಏರಿಕೆ ಪ್ರತಿಭಟನೆ..

ಕೃಷ್ಣ ಮಣಿ by ಕೃಷ್ಣ ಮಣಿ
May 1, 2025
in ಕರ್ನಾಟಕ, ರಾಜಕೀಯ
0
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಬೆಲೆ ಏರಿಕೆ ಪ್ರತಿಭಟನೆ..
Share on WhatsAppShare on FacebookShare on Telegram

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಸಂವಿಧಾನ ಬಚಾವ್ ಪ್ರತಿಭಟನಾ ಸಮಾವೇಶ ನಡೆಸಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್‌ ಸುರ್ಜೆವಾಲ, ಸಚಿವರಾದ ಹೆಚ್‌.ಕೆ ಪಾಟೀಲ, ಸಂತೋಷ್ ಲಾಡ್, ಶಿವಾನಂದ್ ಪಾಟೀಲ, ಶಿವರಾಜ್ ತಂಗಡಗಿ ಮತ್ತಿತರರು ಭಾಗಿಯಾಗಿದ್ದು, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರು ಭಾಗಿಯಾಗದ್ದಾರೆ.

ADVERTISEMENT

ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರ ಜನರ ಪಿಕ್ ಪಾಕೆಟ್ ಮಾಡ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಬೆಲೆ ಏರಿಕೆಗೆ ಮುಕ್ತಿ ಹಾಡಲು ಗ್ಯಾರಂಟಿ ನೀಡಿದ್ದೇವೆ. ಐದು ಗ್ಯಾರಂಟಿ ಕೊಟ್ಟು ಜನರಿಗೆ ಶಕ್ತಿ ನೀಡ್ತೀದ್ದೇವೆ. ಆದರೂ ಬಿಜೆಪಿ ಯವರು ಜನಾಕ್ರೋಶ ಯಾತ್ರೆ ಮಾಡ್ತಿದೆ. ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭದ ವೇಳೆಯೇ ಕೇಂದ್ರ ಡಿಸೇಲ್ ದರ ಏರಿಸಿತು. ಅದರ ವಿರುದ್ಧ ಬಿಜೆಪಿ ಏಕೆ ಹೋರಾಟ ಮಾಡ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಎರಡು ವರ್ಷ ಪೂರೈಸಿದ ವೇಳೆ ವಿಜಯನಗರದಲ್ಲಿ ದೊಡ್ಡ ಸಮಾವೇಶ ಮಾಡ್ತೇವೆ, ಪೌರ ಕಾರ್ಮಿಕರ ಸೇವೆ ಖಾಯಂ ಮಾಡ್ತೇವೆ ಅಂತ ಭರವಸೆ ನೀಡಿದ್ದೆವು. ಅದರಂತೆ ಇವತ್ತು 12600 ಜನ ಪೌರ ಕಾರ್ಮಿಕರಿಗೆ ಸೇವೆ ಖಾಯಮಾತಿ ಮಾಡಿದ ಪ್ರಮಾಣ ಪತ್ರ ನೀಡಿದ್ದೇವೆ. ಬೆಲೆ ಏರಿಕೆ ಮೂಲಕ ಕೇಂದ್ರ ಜನರ ಪಿಕ್ ಪಾಕೆಟ್ ಮಾಡ್ತಿದೆ. ಆದರೂ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡ್ತಿದೆ. ನಿಮ್ಮ ಜನಾಕ್ರೋಶ ಕೇಂದ್ರ ಸರ್ಕಾರದ ಮೇಲಿರಲಿ. ನಮ್ಮ ಸರ್ಕಾರದ ಮೇಲಲ್ಲ, ಮಹದಾಯಿ ವಿಚಾರದಲ್ಲಿ ಬಿಜೆಪಿ ವಿಜಯೋತ್ಸವ ಮಾಡಿತ್ತು. ಆದರೆ ಇದುವರೆಗೂ ಯಾಕೆ ಅನುಷ್ಠಾನ ಆಗಿಲ್ಲ..? ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಸಂವಿಧಾನ ಉಳಿಸಲು ನಾವು ಈ ಹೋರಾಟ ಮಾಡ್ತೇವೆ. ಬಿಜೆಪಿ ಹೋರಾಟ ಮಾಡಲು ಬಂದರೆ ಅದಕ್ಕೆ ನಾವು ಅವಕಾಶ ನೀಡಲ್ಲ, ಇದು ಕಾಂಗ್ರೆಸ್ ಸಂಕಲ್ಪ ಎಂದಿದ್ದಾರೆ|

ಸಂವಿಧಾನ ಬಚಾವ್ ಸಮಾವೇಶದಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿ, ಸುಪ್ರೀಂ ಕೋರ್ಟ್ ತೀರ್ಪು ತಮ್ಮ ಪರವಾಗಿ ಬಂದರೆ ಒಳ್ಳೆಯದು. ವಿರುದ್ಧ ಬಂದರೆ ಬಿಜೆಪಿ ನ್ಯಾಯಾಂಗದ ಮೇಲೆ ಸವಾರಿ ಮಾಡಲು ಯತ್ನಿಸುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ. ಬೇರೆ ಎಲ್ಲ ಹಕ್ಕುಗಳನ್ನು ಮೊಟಕುಗೊಳಿಸುವ ಕೆಲಸವನ್ನು ಬಿಜೆಪಿ ಮಾಡ್ತಿದೆ. ಅಗತ್ಯ ವಸ್ತುಗಳು ಗಗನಕ್ಕೇರಿವೆ. ಸಬ್ಸಿಡಿ ಜಾಸ್ತಿ ಕೊಟ್ಟರೆ ಕಾರ್ಪೂರೇಟ್ ಸಂಸ್ಥೆಗಳು ಮುಚ್ಚಿ ಹೋಗುತ್ತವೆ ಎಂದು ವ್ಯಂಗ್ಯವಾಡಿದ್ದಾರೆ.

ಬೆಲೆ ಏರಿಕೆ ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ವಾಗ್ದಾಳಿ ಮಾಡಿದ್ದಾರೆ. ಬಡವರಿಗೆ ಬಿಜೆಪಿ ಪದೇ ಪದೇ ಅನ್ಯಾಯ ಮಾಡುತ್ತಿದೆ. ಮನುಸ್ಮೃತಿ ಸಂವಿಧಾನ ಆಗಲು ಸಾಧ್ಯವಿಲ್ಲ, ಸಂವಿಧಾನ ಬದಲಾವಣೆ ಮಾಡೋ ಹುನ್ನಾರ ನಡೆದಿದೆ. ಕೇವಲ ರಾಜಕೀಯ ಪ್ರಚಾರ ಪಡೆದುಕೊಂಡರೆ ಸಾಲದು. ಸಂವಿಧಾನ ಮತ್ತು ಸಮಾನತೆ ಬಗ್ಗೆ ಬಿಜೆಪಿ ಯವರು ಬಹಳ ಮಾತನಾಡುತ್ತಾರೆ. ಆದರೆ ನಡೆದುಕೊಳ್ಳುವ ರೀತಿಯೇ ಬೇರೆ ಎಂದಿದ್ದಾರೆ.

Tags: BJPCentral GovernmentcongressCongress Partycongress protestcongress protest against central governmentcongress protest against central government over price hikecongress protest against central govtcongress protest against fuel price hikecongress protest against petrol price hikecongress protest against price hikecongress stages protest against central governmentFuel price hiket congress leaders protest against petrol price hikeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಗುಡುಗು..!

Next Post

ದ್ವಿಭಾಷೆಯಲ್ಲಿ ನಿರ್ಮಾಣದ “ಶೇಷ 2016” ಚಿತ್ರದ ಟೀಸರ್ ಬಿಡುಗಡೆ.

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ದ್ವಿಭಾಷೆಯಲ್ಲಿ ನಿರ್ಮಾಣದ “ಶೇಷ 2016” ಚಿತ್ರದ ಟೀಸರ್ ಬಿಡುಗಡೆ.

ದ್ವಿಭಾಷೆಯಲ್ಲಿ ನಿರ್ಮಾಣದ "ಶೇಷ 2016" ಚಿತ್ರದ ಟೀಸರ್ ಬಿಡುಗಡೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada