• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಕೃಷ್ಣ ಮಣಿ by ಕೃಷ್ಣ ಮಣಿ
May 2, 2025
in ಕರ್ನಾಟಕ, ಶೋಧ
0
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ
Share on WhatsAppShare on FacebookShare on Telegram

ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದೆ. ದುಷ್ಕರ್ಮಿಗಳು ರಕ್ತದೋಕುಳಿ ನಡೆಸಿದ್ದು, ಸಿನಿಮಾ ಸ್ಟೈಲ್​ನಲ್ಲಿ ಕಾರಿಗೆ ಡಿಕ್ಕಿ ಹೊಡೆದು, ಆ ಬಳಿಕ ಕಾರನ್ನು ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಕೊಲೆ ನಡೆಸಿದ್ದಾರೆ. ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಕೊಚ್ಚಿ ರಕ್ತಹರಿಸಿದ್ದಾರೆ ಹಂತಕರು.

ADVERTISEMENT

ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಅಟ್ಯಾಕ್‌ ಮಾಡಿ ದುಷ್ಕರ್ಮಿಗಳು ಎಸ್ಕೇಪ್‌‌‌‌‌ ಆಗಿದ್ದಾರೆ. ಹಂತಕರ ಭೀಕರ ದಾಳಿಯ ದೃಶ್ಯ ಸ್ಥಳೀಯರ ಮೊಬೈಲ್‌‌ನಲ್ಲಿ ಸೆರೆಯಾಗಿದೆ. ಈ ಹಿಂದೆ ಮುಸ್ಲಿಂ ಸಮುದಾಯದ ಫಾಜಿಲ್‌‌ ಎಂಬಾತನ‌‌‌ ಕೊಲೆ ಕೇಸ್‌‌ನ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಎನ್ನಲಾಗಿದ್ದು, ಪತೀಕಾರಕ್ಕಾಗಿ ಕೊಲೆ ನಡೆದಿರುವ ಬಗ್ಗೆ ಚರ್ಚೆಗಳು ಆಗುತ್ತಿವೆ.

ಸುಹಾಸ್‌ ಶೆಟ್ಟಿ ಹತ್ಯೆ ಸ್ಥಳಕ್ಕೆ ಹಿಂದೂ ಕಾರ್ಯಕರ್ತರು ದೌಡಾಯಿಸಿದ್ದು, A.J ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರು ಆಸ್ಪತ್ರೆ ಬಳಿಯೂ ಜಮಾಯಿಸಿದ್ದು ಮುಂಜಾಗ್ರತಾ ಕ್ರಮವಾಗಿ ಪೊಲೀಸ್ರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮಂಗಳೂರು ಸುತ್ತಮುತ್ತಲೂ ನಾಕಾಬಂದಿ ಹಾಕಿದ್ದಾರೆ ಕಮಿಷನರ್‌ ಅನುಪಮ್​ ಅಗರ್ವಾಲ್​.

ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ ಸುಹಾಸ್​ ಶೆಟ್ಟಿ, ಫಾಜಿಲ್‌‌‌‌‌ ಕೊಲೆ ಬಳಿಕ ಯಾವುದೇ ಜವಾಬ್ದಾರಿ ಇರಲಿಲ್ಲ. ಹಲವು ಕೊಲೆ, ಕೊಲೆಯತ್ನ ಪ್ರಕರಣದ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಮ ಫಾಜಿಲ್​ ಕೊಲೆ ಕೇಸ್​ನಲ್ಲಿ ಒಂದು ವರ್ಷದ ಹಿಂದಷ್ಟೇ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದ. ಸ್ನೇಹಿತರ ಜೊತೆಗೆ ತೆರಳುತ್ತಿದ್ದಾಗ ಹಿಂಬಾಲಿಸಿ ಬಂದು ಕೊಲೆ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ ಹತ್ಯೆ ನಡೆದಿತ್ತು. 2022ರ ಜುಲೈ 28ರಂದು ಸುರತ್ಕಲ್​ನಲ್ಲಿ ಫಾಜಿಲ್ ಹತ್ಯೆ ನಡೆದ ಬಳಿಕ ಫಾಜಿಲ್ ಹತ್ಯೆ ಕೇಸ್​ನಲ್ಲಿ ಸುಹಾಸ್ ಶೆಟ್ಟಿ ಬಂಧನ ಮಾಡಲಾಗಿತ್ತು. ಇನ್ನೋವಾ ಕಾರಿನಲ್ಲಿ ಸ್ನೇಹಿತರೊಂದಿಗೆ ಬರುತ್ತಿದ್ದ ಸುಹಾಸ್ ಶೆಟ್ಟಿಯನ್ನು ಹಿಂಬಾಲಿಸಿಕೊಂಡು ಬಂದ ಮೀನಿನ ಟೆಂಪೋ ಮತ್ತು ಒಂದು ಸ್ವಿಫ್ಟ್ ಕಾರಿನಲ್ಲಿ ದುಷ್ಕರ್ಮಿಗಳು ಇದ್ದರು ಎನ್ನಲಾಗ್ತಿದ್ದು, ಮೀನಿನ ಟೆಂಪೋದಲ್ಲಿ ಸುಹಾಸ್ ಶೆಟ್ಟಿ ಕಾರಿಗೆ ಡಿಕ್ಕಿ ಹೊಡೆದು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದ್ದು, ಮಂಗಳೂರಿನಲ್ಲೇ ಕೆಲವೇ ದಿನಗಳ ಹಿಂದೆ ಪಾಕಿಸ್ತಾನ್​ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯನ್ನು ಗುಂಪಹತ್ಯೆ ಮಾಡಲಾಗಿತ್ತು. ಅದಿನ್ನು ಹಸಿರಾಗಿ ಇರುವಾಗಲೇ ಸುಹಾಸ್​ ಶೆಟ್ಟಿ ಹತ್ಯೆ ಮಾಡಲಾಗಿದೆ. ಗೃಹ ಸಚಿವ ಪರಮೇಶ್ವರ್​​ ಹಿಡಿತ ಕಳೆದುಕೊಂಡಿರುವ ಬಗ್ಗೆ ಗೃಹ ಇಲಾಖೆಯಲ್ಲೇ ಚರ್ಚೆಗಳು ನಡೆಯುತ್ತಿವೆ.

Tags: alternate future of the worldalternate history of the worldthe hindu analysisthe hindu analysis for clatthe hindu analysis for clat 2025the hindu analysis in hindithe hindu analysis todaythe hindu daily newsthe hindu daily news analysisthe hindu daily news analysis in hindithe hindu editorial discussionthe hindu for clat 2024the hindu newspaperthe hindu newspaper analysis todaythe hindu newspaper today
Previous Post

ಸೂಕ್ಷ್ಮ ಸಂವೇದನೆ ಅಸ್ಮಿತೆ ಮತ್ತು ಅಭಿವ್ಯಕ್ತಿ-ಸ್ವಾತಂತ್ರ್ಯ

Next Post

ಮಕ್ಕಳೇ ಭಯ ಬೇಡ.. SSLC ಅಷ್ಟೇ.. ಇನ್ನೂ ಅವಕಾಶ ಇದೆ.. ಧೈರ್ಯವಾಗಿರಿ..

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
Next Post
ಮಕ್ಕಳೇ ಭಯ ಬೇಡ.. SSLC ಅಷ್ಟೇ.. ಇನ್ನೂ ಅವಕಾಶ ಇದೆ.. ಧೈರ್ಯವಾಗಿರಿ..

ಮಕ್ಕಳೇ ಭಯ ಬೇಡ.. SSLC ಅಷ್ಟೇ.. ಇನ್ನೂ ಅವಕಾಶ ಇದೆ.. ಧೈರ್ಯವಾಗಿರಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada