• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭಾರತ – ಪಾಕ್​ ಯುದ್ಧ.. ಹೇಗಿದೆ ಸದ್ಯದ ಪರಿಸ್ಥಿತಿ.. ಯಾರಿಗೆ ಯಾರ ಬೆಂಬಲ..?

ಕೃಷ್ಣ ಮಣಿ by ಕೃಷ್ಣ ಮಣಿ
May 6, 2025
in Top Story, ದೇಶ, ವಿಶೇಷ, ಶೋಧ
0
ಭಾರತ – ಪಾಕ್​ ಯುದ್ಧ.. ಹೇಗಿದೆ ಸದ್ಯದ ಪರಿಸ್ಥಿತಿ.. ಯಾರಿಗೆ ಯಾರ ಬೆಂಬಲ..?
Share on WhatsAppShare on FacebookShare on Telegram
Shobha Karandlaje: ಸುಹಾಸ್‌‌ ಶೆಟ್ಟಿ ಹ** ಅಪರಾಧಿಗಳ ರಕ್ಷಣೆಗೆ ಖಾದರ್ ನಿಂತವ್ರೆ..#utkhader #speekar

ಭಾರತ-ಪಾಕಿಸ್ತಾನ ಮಧ್ಯೆ ಯುದ್ಧದ ಆತಂಕ ದಿನೇ ದಿನೇ ಹೆಚ್ಚಾಗುತ್ತಿದೆ.. ಕಾಶ್ಮೀರದ ಪಹಲ್ಗಾಮ್ ದಾಳಿ ನಂತ್ರ ಪ್ರಧಾನಿ ನರೇಂದ್ರ ಮೋದಿ ಸಭೆ ಮೇಲೆ ಸಭೆ ಮಾಡ್ತಿದ್ದಾರೆ. ವಾಯುಪಡೆ ಮುಖ್ಯಸ್ಥರ ಜೊತೆ ಸಭೆ ನಡೆಸಿದ್ದ ಪ್ರಧಾನಿ ಮೋದಿ, ಆ ನಂತರ ರಕ್ಷಣಾ ಕಾರ್ಯದರ್ಶಿ ಆರ್.ಕೆ ಸಿಂಗ್ ಜೊತೆ ಸಭೆ ನಡೆಸಿದ್ದಾರೆ. ಮುಂದಿನ ಕಾರ್ಯಾಚರಣೆಯ ಬಗ್ಗೆ ಮೋದಿ ನಿರಂತರವಾಗಿ ಸೇನಾಪಡೆಗಳ ಜೊತೆ ಸಭೆ ಮಾಡ್ತಿದ್ದಾರೆ.. ಜೊತೆಗೆ ಗಡಿಯಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಸಂಗ್ರಹಿಸ್ತಿದ್ದಾರೆ. ರಕ್ಷಣಾ ಸಲಹೆಗಾರ ಅಜಿತ್‌ ಧೋವೆಲ್‌ ಹಾಗು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಅವರನ್ನೂ ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ADVERTISEMENT

ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕುಗೊಂಡಿದೆ.. ಈ ಮಧ್ಯೆ ದಟ್ಟ ಅರಣ್ಯದಲ್ಲಿ ಅಡಗಿರುವ ಉಗ್ರರಿಗೆ ಊಟ ಮತ್ತು ಇನ್ನಿತರ ಸೌಲಭ್ಯ ನೀಡ್ತಿದ್ದ ವ್ಯಕ್ತಿಯನ್ನ ಸೇನೆಪಡೆ ಬಂಧಿಸಿದೆ.. ಆದ್ರೆ ಉಗ್ರರು ಅಡಗಿರುವ ಜಾಗ ತೋರಿಸುವಂತೆ ವ್ಯಕ್ತಿಯನ್ನ ಕರೆದೊಯ್ಯುತ್ತಿದ್ದಾಗ ಆತ ನದಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ.. ಇಮ್ತಿಯಾಜ್ ಅಹ್ಮದ್ ಮೃತ ವ್ಯಕ್ತಿಯಾಗಿದ್ದು.. ಈತನನ್ನ ಕುಲ್ಗಾಮ್​ನಲ್ಲಿ ಬಂಧಿಸಲಾಗಿತ್ತು.. ವಿಚಾರಣೆಯ ಸಮಯದಲ್ಲಿ, ಕುಲ್ಗಾಮ್‌ನ ಟ್ಯಾಂಗ್‌ ಮಾರ್ಗ್‌ನಲ್ಲಿರುವ ಕಾಡಿನಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರಿಗೆ ಆಹಾರ ಮತ್ತು ಲಾಜಿಸ್ಟಿಕ್ಸ್ ಒದಗಿಸಿದ್ದಾಗಿ ಒಪ್ಪಿಕೊಂಡಿದ್ದ. ನಂತರ ಉಗ್ರರು ಇದ್ದ ಜಾಗಕ್ಕೆ ಕರೆದೊಯ್ಯುತ್ತಿದ್ದಾಗ, ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ನದಿಗೆ ಹಾರಿ ಮೃತಪಟ್ಟಿದ್ದಾನೆ..

ಪಹಲ್ಗಾಮ್ ದಾಳಿಗೆ ಪ್ರತೀಕಾರಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಪಾಕ್ ವಿರುದ್ಧ ಯುದ್ಧಕ್ಕೆ ಬಾರತ ಸಿದ್ಧತೆ ಮಾಡ್ಕೊಂಡಿದೆ. ಇನ್ನು ಭಾರತದ ನಡೆಗೆ ಪತರಗುಟ್ಟಿರುವ ಪಾಕಿಸ್ತಾನ ತುರ್ತು ಸಂಸತ್ ಅಧಿವೇಶನ ಕರೆದಿದೆ. ಸಂಸತ್​ ಅಧಿವೇಶನದ ಸಂದರ್ಭದಲ್ಲಿ ಪಾಕಿಸ್ತಾನ ಪ್ರಧಾನಿ ಚೀನಾ ರಾಯಭಾರಿಯನ್ನ ಭೇಟಿಯಾಗಿ, ಅನೇಕ ವಿಚಾರಗಳ ಕುರಿತು ಚರ್ಚೆ ಮಾಡಿದ್ದಾರೆ.. ಒಂದು ವೇಳೆ ಭಾರತ ಪಾಕ್ ಮೇಲೆ ದಾಳಿ ಮಾಡಿದ್ರೆ ಯಾವ ರೀತಿಯಾಗಿ ಪ್ರತ್ಯುತ್ತರ ನೀಡಬೇಕು.. ದಾಳಿ ನಡೆದಾಗ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳೇನು..? ಎನ್ನುವ ವಿಚಾರದ ಬಗ್ಗೆ ಚರ್ಚೆ ಮಾಡಲು ಸಂಸತ್ ಅಧಿವೇಶನ ಕರೆದಿದ್ದಾರೆ ಎನ್ನಲಾಗಿದೆ.

ಕಾಶ್ಮೀರದಲ್ಲಿ 26 ಮಂದಿಯನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಚೀನಾ ಪಾಕಿಸ್ತಾನಕ್ಕೆ ಮತ್ತೊಮ್ಮೆ ತನ್ನ ಬೆಂಬಲ ಘೋಷಿಸಿದೆ.. ಪಾಕಿಸ್ತಾನದಲ್ಲಿರುವ ಚೀನಾ ರಾಯಭಾರಿ ಜಿಯಾಂಗ್ ಜೈಡಾಂಗ್, ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರನ್ನು ಭೇಟಿ ಮಾಡಿ ಪಾಕ್‌ ಜೊತೆಗೆ ಚೀನಾ ಇರುತ್ತದೆ ಎಂದಿದ್ದಾರೆ. ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಅಥವಾ ಸಿಂಧೂ ನದಿ ನೀರಿನ ಹರಿವನ್ನು ತಡೆದರೆ ನಾವು ಅಣ್ವಸ್ತ್ರ ದಾಳಿ ಮಾಡ್ತೇವೆ ಎಂದು ಪಾಕಿಸ್ತಾನ ಬೆದರಿಸುವ ಕೆಲಸ ಮಾಡಿದೆ. ರಷ್ಯಾದ TASS ನ್ಯೂಸ್​ ಏಜೆನ್ಸಿಗೆ ಸಂದರ್ಶನ ನೀಡಿರುವ ರಾಯಭಾರಿ ಮುಹಮ್ಮದ್​ ಖಾಲಿ ಜಮಾಲಿ ಭಾರತಕ್ಕೆ ಎಚ್ಚರಿಕೆ ಕೊಟ್ಟಿದ್ದಾನೆ.

ಪಹಲ್ಗಾಮ್‌ ದಾಳಿ ನಂತರ ಪಾಕಿಸ್ತಾನದ ಮೇಲೆ ಯುದ್ಧಕ್ಕೆ ಸಿದ್ಧತೆ ನಡೆಯುತ್ತಿರುವ ಹೊತ್ತಿನಲ್ಲಿ ಪ್ರಧಾನಿ ಮೋದಿಗೆ ರಷ್ಯಾ ಅಧ್ಯಕ್ಷ ಪುಟಿನ್‌ ಫೋನ್‌ ಕರೆ‌ ಮಾಡಿ ಮಾತನಾಡಿದ್ದಾರೆ. ಪಹಲ್ಗಾಮ್‌ ದಾಳಿ ಖಂಡಿಸಿರುವ ಪುಟಿನ್‌, ಮೋದಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಇದಕ್ಕೂ ಮೊದಲು ಯುದ್ಧ ಮಾಡದಂತೆ ಭಾರತಕ್ಕೆ ಹೇಳಿ ಅಂತ ಪಾಕ್‌ ಗೋಗರೆದಿತ್ತು. ಆದ್ರೆ ರಷ್ಯಾ ಅಧ್ಯಕ್ಷರು ಮೋದಿಗೆ ಬೆಂಬಲ ಘೋಷಿಸಿದ್ದಾರೆ ಎನ್ನಲಾಗಿದೆ. 26 ಜನ ಅಮಾಯಕರನ್ನ ಕೊಂದಿದ್ದನ್ನು ಯಾರೂ ಸಹಿಸುವುದಿಲ್ಲ, ಅಮಾಯಕರ ಜೀವ ಹಾನಿಗೆ ರಷ್ಯಾ ಪರವಾಗಿ ಸಂತಾಪವಿದೆ ಎಂದಿದ್ದಾರೆ ಅನ್ನೋ ಮಾಹಿತಿ ಹೊರಬಿದ್ದಿದೆ.

Tags: ‌ India1965 Indo-pak warkashmir attackModiputin trump
Previous Post

ಬಿಜೆಪಿ ನಾಯಕರ ಆಕ್ಷೇಪಗಳಿಗೆ ಪರಮೇಶ್ವರ್​ ಉತ್ತರ

Next Post

ಭಾರತ ಯಾವುದೇ ಕ್ಷಣದಲ್ಲಾದ್ರೂ ಮಿಲಿಟರಿ ದಾಳಿ ನಡೆಸಬಹುದು – ಪಾಕ್ ರಕ್ಷಣಾ ಸಚಿವ ಖ್ವಾಜಾ ಅಸೀಫ್ ಆತಂಕ  

Related Posts

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
0

ಕಲಬುರಗಿ: ಶೋಷಿತ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಿರುತೆರೆ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿದೆ. https://youtu.be/QYwA37zlVG4?si=WhBZxIVArCTZFHzx ಮನಿಮಿತ್ರಾ ಕಂಪನಿಯ ಸಾರ್ವಜನಿಕ...

Read moreDetails
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
Next Post
ಭಾರತ ಯಾವುದೇ ಕ್ಷಣದಲ್ಲಾದ್ರೂ ಮಿಲಿಟರಿ ದಾಳಿ ನಡೆಸಬಹುದು – ಪಾಕ್ ರಕ್ಷಣಾ ಸಚಿವ ಖ್ವಾಜಾ ಅಸೀಫ್ ಆತಂಕ  

ಭಾರತ ಯಾವುದೇ ಕ್ಷಣದಲ್ಲಾದ್ರೂ ಮಿಲಿಟರಿ ದಾಳಿ ನಡೆಸಬಹುದು - ಪಾಕ್ ರಕ್ಷಣಾ ಸಚಿವ ಖ್ವಾಜಾ ಅಸೀಫ್ ಆತಂಕ  

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada